Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ:...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಯಶವಂತ್ ಸಿನ್ಹಾ

ವಾರ್ತಾಭಾರತಿವಾರ್ತಾಭಾರತಿ10 May 2018 8:19 PM IST
share
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಯಶವಂತ್ ಸಿನ್ಹಾ

ಪಣಜಿ, ಮೇ 10: ಮೋದಿ ಸರಕಾರದ ವಿರುದ್ಧ ವಾಗ್ದಾಳಿ ಆರಂಭಿಸಿರುವ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ, ಕೇಂದ್ರ ಸರಕಾರದ ಆಡಳಿತದಲ್ಲಿ ‘ತೆರಿಗೆ ಭಯೋತ್ಪಾದನೆ’ ನಡೆಯುತ್ತಿದೆ ಹಾಗೂ ದೇಶ ‘ಅಘೋಷಿತ ತುರ್ತು ಪರಿಸ್ಥಿತಿಯಲ್ಲಿ’ದೆ ಎಂದು ಹೇಳಿದ್ದಾರೆ. 1975ರಲ್ಲಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಲು ರಾಜಕೀಯ ಕಾರಣವಾಗಿತ್ತು. ಆದರೆ, ಇದಕ್ಕೆ ತದ್ವಿರುದ್ಧವಾಗಿ ಇಂದು ಇಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಅವರು ಹೇಳಿದರು. ಪ್ರತಿಪಕ್ಷದಲ್ಲಿದ್ದಾಗ ನಾವು ಯುಪಿಎ ಸರಕಾರ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದೆವು. ನಮಗೆ ಮತ ನೀಡಿ ಅಧಿಕಾರಕ್ಕೆ ತಂದರೆ ತೆರಿಗೆ ಭಯೋತ್ಪಾದನೆಯನ್ನು ರದ್ದುಗೊಳಿಸಲಿದ್ದೇವೆ ಎಂದು ಭರವಸೆ ನೀಡಿದ್ದೆವು ಎಂದು ಯಶವಂತ್ ಸಿನ್ಹಾ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಇಂಡಿಯನ್ ಇಕಾನಮಿ ಆ್ಯಂಡ್ ಚಾಲೆಂಜ್ ಬಿಫೋರ್ ಡೆಮಾಕ್ರೆಸಿ’ ಕುರಿತು ಮಾತನಾಡುತ್ತಾ ಹೇಳಿದರು.

ಬಿಜೆಪಿಯೊಂದಿಗೆ ಎಲ್ಲ ಸಂಬಂಧವನ್ನು ತಾನು ಕಡಿದುಕೊಂಡಿದ್ದೇನೆ ಹಾಗೂ ಪ್ರಜಾಪ್ರಭುತ್ವ ಉಳಿಸಲು ದೇಶಾದ್ಯಂತ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದೇನೆ ಎಂದು ಯಶ್ವಂತ್ ಸಿನ್ಹಾ ಕಳೆದ ಏಪ್ರಿಲ್‌ನಲ್ಲಿ ಘೋಷಿಸಿದ್ದರು. ನಗದು ನಿಷೇಧದ ಬಳಿಕ ಈ ಅವಧಿಯಲ್ಲಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲಾದ ಹಣದ ಬಗ್ಗೆ ವಿವರಣೆ ಕೋರಿ 20 ಲಕ್ಷ ಪ್ರಕರಣಗಳು ದಾಖಲಾಗಿವೆ ಎಂದು ಯಶವಂತ್ ಸಿನ್ಹಾ ಹೇಳಿದರು.

2017 ಜುಲೈಯಲ್ಲಿ ಜಿಎಸ್‌ಟಿ ಪರಿಚಯಿಸಿದ ಬಳಿಕ 357 ಬಾರಿ ತಿದ್ದುಪಡಿ ಮಾಡಲಾಗಿದೆ. ಇದು ದೇಶದ ತೆರಿಗೆ ಪದ್ಧತಿಯನ್ನು ಜೋಕ್ ಮಾಡಿದಂತಾಗಿದೆ. ಇದರಿಂದ ಎಲ್ಲರಿಗೂ ತೊಂದರೆ ಉಂಟಾಗಿದೆ. ಗ್ರಾಮದಲ್ಲಿ ವಿದ್ಯುತ್ ಇಲ್ಲದ ವ್ಯಾಪಾರಸ್ಥರಿಗೆ ಆನ್‌ಲೈನ್‌ನಲ್ಲಿ ತೆರಿಗೆ ಪಾವತಿಸುವಂತೆ ಹೇಳಲಾಗುತ್ತಿದೆ. ಅವರು ಹೇಗೆ ತೆರಿಗೆ ಕಟ್ಟಲು ಸಾಧ್ಯ ಎಂದು ಯಶವಂತ್ ಸಿನ್ಹಾ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X