Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ಣಾಟಕ ಬ್ಯಾಂಕ್ ಚಿಟ್ಪಾಡಿ ಶಾಖೆ...

ಕರ್ಣಾಟಕ ಬ್ಯಾಂಕ್ ಚಿಟ್ಪಾಡಿ ಶಾಖೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 May 2018 8:28 PM IST
share
ಕರ್ಣಾಟಕ ಬ್ಯಾಂಕ್ ಚಿಟ್ಪಾಡಿ ಶಾಖೆ ಉದ್ಘಾಟನೆ

ಉಡುಪಿ, ಮೇ 10: ಚಿಟ್ಪಾಡಿ ಬೀಡಿನಗುಡ್ಡೆಯ ಲಕ್ಷ್ಮೀ ಟ್ರೇಡ್ ಸೆಂಟರ್ ನಲ್ಲಿ ಇಂದು ಪ್ರಾರಂಭಗೊಂಡ ಕರ್ಣಾಟಕ ಬ್ಯಾಂಕಿನ 801 ಶಾಖೆಯನ್ನು ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಣಿಯೂರು ಶ್ರೀಗಳು,ಬ್ಯಾಂಕ್ ಹಾಗೂ ಗ್ರಾಹಕರ ಪಾರದರ್ಶಕವಾದ ಸಂಬಂಧ ಇರಬೇಕು. ಗ್ರಾಹಕ ತಾನು ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣವನ್ನು ಭದ್ರತೆಗಾಗಿ ಬ್ಯಾಂಕ್‌ನಲ್ಲಿಡುತಿದ್ದು, ಅದರ ಸುರಕ್ಷತೆ ಪಾರದರ್ಶಕವಾಗಿರಬೇಕು. ವಿಶ್ವದಲ್ಲೇ ಭಾರತದ ಆರ್ಥಿಕತೆ ಸುದೃಢ ವಾಗಿರಲು ದೇಶದ ಬ್ಯಾಂಕಿಂಗ್ ವ್ಯವಸ್ಥೆ ಬಲಿಷ್ಠವಾಗಿರುವುದೇ ಕಾರಣ. ದೇಶದ ಬ್ಯಾಂಕುಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ಣಾಟಕ ಬ್ಯಾಂಕಿನ ಜನರಲ್ ಮ್ಯಾನೇಜರ್ ಚಂದ್ರಶೇಖರ ರಾವ್ ಬಿ. ಮಾತನಾಡಿ, ಈ ವರ್ಷ ಬ್ಯಾಂಕಿನ 35 ಹೊಸ ಶಾಖೆಗಳನ್ನು ತೆರೆಯಲು ನಿರ್ಧರಿಸಿದ್ದು, ಅದರಲ್ಲಿ ಚಿಟ್ಪಾಡಿ ಶಾಖೆ ಮೊದಲನೆಯದು. ಈ ತಿಂಗಳ ಕೊನೆಯೊಳಗೆ ಒಟ್ಟು 10 ಹೊಸ ಶಾಖೆಗಳನ್ನು ತೆರೆಯಲಾಗುತ್ತದೆ. ಅಲ್ಲದೇ ಜೂನ್ ಅಂತ್ಯದೊಳಗೆ 35 ಹೊಸ ಶಾಖೆ ಕಾರ್ಯಾರಂಭ ಮಾಡಲಿವೆ ಎಂದರು.

ಕಳೆದ ವರ್ಷ ಬ್ಯಾಂಕ್ ತನ್ನ ಇತಿಹಾಸದಲ್ಲಿ ಹೊಸ ಮೈಲುಗಲ್ಲನ್ನು ದಾಟಿದ್ದು, ಸಣ್ಣ ಬ್ಯಾಂಕಿನಿಂದ ಮದ್ಯಮ ವರ್ಗದ ಬ್ಯಾಂಕಿಗೆ ಬಡ್ತಿ ಪಡೆದಿದೆ. ಕಳೆದ ವರ್ಷ ದ ಕೊನೆಗೆ ಬ್ಯಾಂಕಿನ ವಾರ್ಷಿಕ ವ್ಯವಹಾರ 1.10 ಲಕ್ಷ ಕೋಟಿ ರೂ.ದಾಟಿದ್ದು, ಈ ವರ್ಷ ಅದನ್ನು 1.30 ಲಕ್ಷ ಕೋಟಿ ರೂ.ಗೆ ಹೆಚ್ಚಿಸುವ ಗುರಿ ಇದೆ. ಇದಕ್ಕೆ ಎಲ್ಲರ ಸಹಕಾರ ಹಾಗೂ ಮಾರ್ಗದರ್ಶನದ ಅಗತ್ಯವಿದೆ ಎಂದರು.

2020ರ ಮಾರ್ಚ್ ತಿಂಗಳೊಳಗೆ ಬ್ಯಾಂಕಿನ 1000 ಶಾಖೆಗಳನ್ನುತೆರೆಯುವ ಗುರಿ ಇದೆ. ಕರ್ನಾಟಕದಲ್ಲಿ ನಮ್ಮ ಬ್ಯಾಂಕಿನ 463 ಶಾಖೆಗಳಿದ್ದು ಇವುಗಳಲ್ಲಿ 200ಕ್ಕೂ ಅಧಿಕ ಶಾಖೆಗಳು ಗ್ರಾಮೀಣ ಪ್ರದೇಶದಲ್ಲಿವೆ. ರಾಜ್ಯದ ಪ್ರತಿ ಹಳ್ಳಿಯಲ್ಲಿ ನಮ್ಮ ಶಾಖೆಗಳನ್ನು ಕಾಣಬಹುದು. ಬ್ಯಾಂಕಿನ ಲಾಂಛನವನ್ನು ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತ ರಚಿಸಿದ್ದು, ಅದನ್ನು ಇಂದೂ ಉಳಿಸಿಕೊಳ್ಳಲಾಗಿದೆ ಎಂದು ಚಂದ್ರಶೇಖರ ರಾವ್ ತಿಳಿಸಿದರು.

ಆದ್ಯತಾ ರಂಗದಲ್ಲಿ ಕೃಷಿ ಹಾಗೂ ಎಂಎಸ್‌ಎಂಇ ಕ್ಷೇತ್ರಕ್ಕೆ ಶೇ.48ರಷ್ಟು ಸಾಲ ವನ್ನು ನೀಡುವ ಮೂಲಕ ಕರ್ಣಾಟಕ ಬ್ಯಾಂಕ್, ರಿಸರ್ವ್ ಬ್ಯಾಂಕ್ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಸಾಧನೆ ಮಾಡಿದೆ. ಬ್ಯಾಂಕಿಗೆ 1.30 ಲಕ್ಷ ಶೇರುದಾರರಿದ್ದು, 91 ಲಕ್ಷ ಗ್ರಾಹಕರನ್ನು ಹೊಂದಿದೆ. ಗ್ರಾಹಕರ ಸಂಖ್ಯೆಯನ್ನು ಶೀಘ್ರವೇ ಒಂದು ಕೋಟಿ ದಾಟಿಸುವ ಗುರಿ ಹೊಂದಲಾಗಿದೆ ಎಂದರು.

ಯಾವುದೇ ಹೊಸ ತಲೆಮಾರಿನ ಬ್ಯಾಂಕಿಗೆ ಕಡಿಮೆ ಇಲ್ಲದಂತೆ ಎಲ್ಲಾ ಸೌಲಭ್ಯಗಳನ್ನು ನಾವು ಗ್ರಾಹಕರಿಗೆ ಒದಗಿಸುತಿದ್ದೇವೆ ಎಂದು ಚಂದ್ರಶೇಖರ ರಾವ್ ತಿಳಿಸಿದರು. 

ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಯು.ವಿ.ಭಟ್, ಬ್ಯಾಂಕಿನ ಮಾಜಿ ನಿರ್ದೇಶಕ ಎ.ಜಿ.ಕೊಡ್ಗಿ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು. ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿಯ ಎಜಿಎಂ ಗೋಪಾಲಕೃಷ್ಣ ಸಾಮಗ ಬಿ. ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಶಾಖಾ ಮ್ಯಾನೇಜರ್ ರಾಜೇಶ್ ಪಿ.ಬಿ. ವಂದಿಸಿದರು. ಚೀಫ್ ಮ್ಯಾನೇಜರ್ ವಾದಿರಾಜ ಕೆ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X