ಮತದಾನ ದಿನ ಸಂತೆ, ಜಾತ್ರೆ, ದನಗಳ ಜಾತ್ರೆ ನಿಷೇಧ
ಉಡುಪಿ, ಮೇ 10: ಮೇ 12ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಶಾಂತಿಯುತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಸಲುವಾಗಿ ಮತದಾನ ದಿನದಂದು ಮತದಾರರಿಗೆ ಅನಾನುಕೂಲತೆಯಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನಡೆಯುವ ಸಂತೆ, ಜಾತ್ರೆ, ದನಗಳ ಜಾತ್ರೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಮೇ 12ರ ಮತದಾನ ದಿನದಂದು ಉಡುಪಿ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಸಂತೆ, ಜಾತ್ರೆ, ದನಗಳ ಜಾತ್ರೆ ಇತ್ಯಾದಿಗಳನ್ನು ನಿಷೇಧಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅಗತ್ಯವೆಂದು ಮನಗಂಡು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144(1) ರನ್ವಯ ಪ್ರದತ್ತವಾದ ಅಧಿಕಾರದಂತೆ ಮತದಾನ ದಿನದಂದು ಕುಂದಾಪುರ ಎಪಿಎಂಸಿ ಯಾರ್ಡ್ ಸಂತೆ (ವಾರದ ಸಂತೆ), ಚೇರ್ಕಾಡಿ(ಪೇತ್ರಿ) ವಾರದ ಸಂತೆ, ಕಾಪು ಯೇಣಗುಡ್ಡೆ(ಕಟಪಾಡಿ) ವಾರದ ಸಂತೆ, ಕಾರ್ಕಳ ಪುರಸಭಾ ವ್ಯಾಪ್ತಿಯ ವಾರದ ಸಂತೆ, ಕಾರ್ಕಳ ಅಜೆಕಾರು ಫಿರ್ಕಾದ ಮುದ್ರಾಡಿ ಗ್ರಾಮದ ವಾರದ ಸಂತೆ ಸೇರಿದಂತೆ ಜಿಲ್ಲೆಯ ಇತರೆ ಎಲ್ಲಾ ಸ್ಥಳಗಳಲ್ಲಿ ನಡೆಯುವ ಸಂತೆ, ಜಾತ್ರೆ, ದನಗಳ ಜಾತ್ರೆ ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.