Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲುಗಳಲ್ಲಿ ಇನ್ನು ‘ಸ್ಮಾರ್ಟ್ ಕೋಚ್,...

ರೈಲುಗಳಲ್ಲಿ ಇನ್ನು ‘ಸ್ಮಾರ್ಟ್ ಕೋಚ್, ಬ್ಲಾಕ್ ಬಾಕ್ಸ್’ ವ್ಯವಸ್ಥೆ

ಇವುಗಳ ವಿಶೇಷತೆಗಳ ಮಾಹಿತಿ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ10 May 2018 9:18 PM IST
share
ರೈಲುಗಳಲ್ಲಿ ಇನ್ನು ‘ಸ್ಮಾರ್ಟ್ ಕೋಚ್, ಬ್ಲಾಕ್ ಬಾಕ್ಸ್’ ವ್ಯವಸ್ಥೆ

ಹೊಸದಿಲ್ಲಿ, ಮೇ 10: ಇದೇ ಪ್ರಪ್ರಥಮ ಬಾರಿಗೆ ಭಾರತೀಯ ರೈಲುಗಳು ಇನ್ನು ಮುಂದೆ ಬ್ಲಾಕ್ ಬಾಕ್ಸ್ , ಬೋಗಿಗಳ ಮಾಹಿತಿ ವ್ಯವಸ್ಥೆಯನ್ನು ಒಳಗೊಂಡ ‘ಸ್ಮಾರ್ಟ್ ಕೋಚ್’ಗಳಾಗಿ ಪರಿವರ್ತನೆಯಾಗಲಿವೆ ಎಂದು ರೈಲ್ವೇ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

 ಬಹು ಆಯಾಮದ ಮಾಹಿತಿಯನ್ನು ಒದಗಿಸುವ ಪ್ರಬಲ ಅಂತರ್‌ಸಂಪರ್ಕ ಸಾಧನವಾದ ಕಪ್ಪು ಪೆಟ್ಟಿಗೆ(ಬ್ಲಾಕ್ ಬಾಕ್ಸ್)ಗಳು ಬೋಗಿಗಳ ಹಾಗೂ ಪ್ರಯಾಣಿಕರ ಕುರಿತ ವಾಸ್ತವಿಕ ಮಾಹಿತಿಯನ್ನು ಒದಗಿಸುತ್ತವೆ. ಪ್ರಪ್ರಥಮ ಸ್ಮಾರ್ಟ್ ಕೋಚ್ ಅನ್ನು ಪ್ರಾಯೋಗಿಕವಾಗಿ ರಾಷ್ಟ್ರೀಯ ತಾಂತ್ರಿಕ ದಿನವಾದ ಮೇ 11ರಂದು ರಾಯ್‌ಬರೇಲಿ ಕೋಚ್ ಫ್ಯಾಕ್ಟರಿಯಲ್ಲಿ ಅನಾವರಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಹಳಿ ತಪ್ಪುವುದು, ರೈಲುಗಳ ಸಂಚಾರದಲ್ಲಿ ವಿಳಂಬ, ರೈಲುಗಳಲ್ಲಿ ಮೂಲಸೌಕರ್ಯ ವ್ಯವಸ್ಥೆ ಕುಸಿತ ಮುಂತಾದ ಸಮಸ್ಯೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಈ ಸಾಧನ ನೆರವಾಗುತ್ತದೆ. ಅಲ್ಲದೆ ಪ್ರಯಾಣಿಕರ ರೈಲಿಗೆ ಸಂಬಂಧಿಸಿದ ನ್ಯೂನತೆಗಳು ಹಾಗೂ ಚಲಿಸುತ್ತಿರುವ ರೈಲಿನ ಬಗ್ಗೆ ಮಾಹಿತಿ ಒದಗಿಸುವ ಸೆನ್ಸಾರ್ ಆಧರಿತ ‘ಆನ್ ಬೋರ್ಡ್ ಕಂಡಿಷನ್ ಮಾನಿಟರಿಂಗ್’ (ಒಬಿಸಿಎಂಎಸ್) ವ್ಯವಸ್ಥೆಯನ್ನು ರೈಲ್ವೇ ಮಂಡಳಿ ಜಾರಿಗೊಳಿಸಲಿದೆ. ಒಬಿಸಿಎಂಎಸ್‌ನಲ್ಲಿ ಸಿಸಿಟಿವಿ, ರೈಲುಗಳ ಸ್ಥಿತಿ ಗತಿಯನ್ನು ಅತ್ಯಾಧುನಿಕವಾಗಿ ಸೂಚಿಸುವ ವ್ಯವಸ್ಥೆಯಿದ್ದು ಇದು ರೈಲುಗಳ ಕಾರ್ಯಾಚರಣೆಯನ್ನು ಹೆಚ್ಚು ಸುರಕ್ಷಿತ , ಭದ್ರ ಹಾಗೂ ಸುವ್ಯಸ್ಥಿತವನ್ನಾಗಿಸುತ್ತದೆ . ಈ ವ್ಯವಸ್ಥೆಯು ರೈಲುಗಳ ಕಂಪನ ಮತ್ತು ತಾಪಮಾನವನ್ನು ನಿರಂತರ ದಾಖಲಿಸುತ್ತಾ ಬರುತ್ತದೆ. ಇದರಲ್ಲಿ ಯಾವುದೇ ವ್ಯತ್ಯಾಸವಾದರೆ ತಕ್ಷಣ ಎಚ್ಚರಿಕೆ ನೀಡುತ್ತದೆ. ರೈಲುಗಳ ಕಂಪನ (ರೈಲು ಚಲಿಸುವಾಗ ಆಗುವ ಅಲುಗಾಟ)ದಲ್ಲಿ ತುಸು ವ್ಯತ್ಯಾಸವಾದರೂ ರೈಲುಗಳ ಚಕ್ರದ ಬೇರಿಂಗ್‌ನಲ್ಲಿ ಏನೋ ಸಮಸ್ಯೆಯಿದೆ ಎಂಬ ಸಂದೇಶ ನೀಡುತ್ತದೆ.

ಇದರಿಂದ ಸಮಸ್ಯೆಯನ್ನು ತಕ್ಷಣ ಸರಿಪಡಿಸಲು ಸಾಧ್ಯವಾಗಿ ಹೆಚ್ಚಿನ ಹಾನಿಯಾಗದಂತೆ ತಡೆಯಬಹುದಾಗಿದೆ. ತಂತಿರಹಿತ ಸೆನ್ಸಾರ್ ಸಾಧನಗಳನ್ನು ರೈಲುಗಳ ಚಕ್ರಗಳಿಗೆ ಅಳವಡಿಸಿದರೆ ಅದು ಚಕ್ರಗಳ ಸ್ಥಿತಿಗತಿಯ ಬಗ್ಗೆ ನಿರಂತರ ಮಾಹಿತಿ ರವಾನಿಸುತ್ತದೆ. ಇದರಿಂದ ರೈಲು ಹಳಿಗಳ ಸ್ಥಿತಿ ಗತಿಯನ್ನು ಕಾಲಕಾಲಕ್ಕೆ ನಿರ್ಧರಿಸಬಹುದು. ಈ ಸುಧಾರಿತ ಸುರಕ್ಷಾ ವ್ಯವಸ್ಥೆಯಿಂದ ನಿರ್ವಹಣಾ ವೆಚ್ಚ ಕಡಿಮೆಯಾಗುತ್ತದೆ ಹಾಗೂ ರೈಲ್ವೇ ಇಲಾಖೆಯ ಆಸ್ತಿಪಾಸ್ತಿಗಳಿಗೆ ಹಾನಿಯಾಗುವುದನ್ನು ಕನಿಷ್ಟಗೊಳಿಸುತ್ತದೆ .ವಿಶ್ವದ ವಿವಿಧೆಡೆ ರೈಲುಗಳಲ್ಲಿ ಈಗಾಗಲೇ ಈ ಸುಧಾರಿತ ಸಾಧನವನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರಿಂದ ಪ್ರತೀ ಬೋಗಿಗಳಿಗೆ ಸುಮಾರು 20 ಲಕ್ಷ ರೂ. ಹೆಚ್ಚುವರಿ ವೆಚ್ಚವಾಗಲಿದೆ. ಪ್ರಾಯೋಗಿಕ ಸಂಚಾರದ ಬಳಿಕ ಇನ್ನೂ ಹಲವು ಬೋಗಿಗಳಲ್ಲಿ ಅಳವಡಿಸಲಾಗುವುದು. ಪ್ರಯಾಣದ ಸಂದರ್ಭ ರೈಲಿನ ಕುರಿತ ಮಾಹಿತಿಯನ್ನು ನಿರಂತರ ಘೋಷಿಸುವುದರ ಜೊತೆಗೆ, ರೈಲುಗಳಲ್ಲಿ ಅಂತರ್‌ಜಾಲ ಆಧರಿತ ವ್ಯವಸ್ಥೆಯ ಮೂಲಕ ಪ್ರಯಾಣಿಕರಿಗೆ ಮನೋರಂಜನೆಯ ಒದಗಿಸಲೂ ಅವಕಾಶವಿದೆ. 2016ರ ನವೆಂಬರ್‌ನಲ್ಲಿ ಆಯೋಜಿಸಲಾಗಿದ್ದ ರೈಲ್ವೇ ಅಭಿವೃದ್ಧಿ ಶಿಬಿರದಲ್ಲಿ ಒಬಿಸಿಎಂಎಸ್ ವ್ಯವಸ್ಥೆಯನ್ನು ಪ್ರದರ್ಶಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X