Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ದತೆ:...

ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ದತೆ: ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ

ವಾರ್ತಾಭಾರತಿವಾರ್ತಾಭಾರತಿ10 May 2018 10:52 PM IST
share
ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ದತೆ: ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ

ಮಂಡ್ಯ, ಮೇ 10: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಲು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.

ತನ್ನ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 7 ಕ್ಷೇತ್ರಗಳಲ್ಲಿ  84 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1,795 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 359 ಸೂಕ್ಷ್ಮ ಹಾಗೂ 90 ಅತಿಸೂಕ್ಷ್ಮ ಮತಗಟ್ಟೆಗಳಿವೆ ಎಂದರು.

130 ಮತಗಟ್ಟೆ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಣೆ ಮಾಡಲಾಗುತ್ತದೆ. ಅಲ್ಲದೆ ಕೇಂದ್ರ ಅರೆಸೇನಾ ತುಕಡಿ ನಿಯೋಜಿಸಲಾಗಿದೆ. 
ಮತದಾನದ ಪ್ರಕ್ರಿಯೆಯಲ್ಲಿ ಒಬ್ಬ ಚುನಾವಣಾಧಿಕಾರಿ ಹಾಗೂ ಒಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಸುಮಾರು 10,395 ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಅವರು ಹೇಳಿದರು.

ಜಿಲ್ಲೆಯಾದ್ಯಂತ  22 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಎಲ್ಲ ಮತಗಟ್ಟೆಗಳಲ್ಲೂ ಮಹಿಳಾ ಸಿಬ್ಬಂದಿಗಳಿರುತ್ತಾರೆ. ವಿಶೇಷ ಚೇತನರಿಗಾಗಿ 8 ವಿಶೇಷ ಚೇತನ ಸಿಬ್ಬಂದಿಗಳ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ವಿಶೇಷಚೇತನರು ಮತ ಚಲಾಯಿಸಲು ಅನುಕೂಲವಾಗುವಂತೆ ಗಾಲಿ ಕುರ್ಚಿಗಳ ಹಾಗೂ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಜಿಲ್ಲೆಯಲ್ಲಿ ಒಟ್ಟು 14,88,460 ಮತದಾರರಿದ್ದು, 13,23,307 ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಗಿದೆ. ಪ್ರತಿ ಮತಗಟ್ಟೆ ಕೇಂದ್ರ 100 ಮೀಟರ್ ಅಂತರದಲ್ಲಿ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಅವರ ಕ್ರಮಸಂಖ್ಯೆಯನ್ನು ಪರಿಶೀಲಿಸಿ ತಿಳಿಸುವ ಸಲುವಾಗಿ ಮತದಾರರ ಸಹಾಯ ಕೇಂದ್ರ ಸ್ಥಾಪಿಸಲಾಗಿದೆ ಎಂದರು.

ಮೇ 15ರಂದು ಜಿಲ್ಲೆಯ ಎಲ್ಲ 7 ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯನ್ನು ಮಂಡ್ಯದ ಸರಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ಮತ ಎಣಿಕೆ ನಡೆಯಲಿದೆ ಎಂದ ಅವರು, ಮತಗಳ ಎಣಿಕೆ ಏಜೆಂಟರ ನೇಮಕಾತಿಗಾಗಿ ಅಭ್ಯರ್ಥಿಗಳು ನಿಗದಿತ ಪ್ರಪತ್ರದಲ್ಲಿ ಏಜೆಂಟರ ಭಾವಚಿತ್ರದೊಂದಿಗೆ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಮೇ 13ರೊಳಗೆ ಅರ್ಜಿ ಸಲ್ಲಿಸಿ ಭಾವಚಿತ್ರವುಳ್ಳ ಎಣಿಕೆ ಏಜೆಂಟರ ಗುರುತಿನ ಚೀಟಿ ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ವಿಜಯ್ ಹಾಗೂ ಜಿಪಂ ಸಿಇಒ ಬಿ.ಶರತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X