Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇ.12 ರಂದು ಮತದಾನ: ಮುಕ್ತ ಚುನಾವಣೆಗೆ...

ಮೇ.12 ರಂದು ಮತದಾನ: ಮುಕ್ತ ಚುನಾವಣೆಗೆ ಆಯೋಗದ ಸಕಲ ಸಿದ್ಧತೆ

ಬೆಳಗ್ಗೆ 7ರಿಂದ ಸಂಜೆ 6:30ರ ವರೆಗೆ ಹಕ್ಕು ಚಲಾಯಿಸಲು ಅವಕಾಶ

ವಾರ್ತಾಭಾರತಿವಾರ್ತಾಭಾರತಿ11 May 2018 9:27 PM IST
share
ಮೇ.12 ರಂದು ಮತದಾನ: ಮುಕ್ತ ಚುನಾವಣೆಗೆ ಆಯೋಗದ ಸಕಲ ಸಿದ್ಧತೆ

ಬೆಂಗಳೂರು, ಮೇ 11: ರಾಜ್ಯ ವಿಧಾನಸಭೆಗೆ ನಾಳೆ (ಮೇ 12) ಬೆಳಗ್ಗೆ 7 ಗಂಟೆಯಿಂದ ಸಂಜೆ 6:30ರ ವರೆಗೆ ಮತದಾನ ನಡೆಯಲಿದ್ದು, ಮುಕ್ತ, ನ್ಯಾಯ ಸಮ್ಮತ ಹಾಗೂ ನಿರ್ಭೀತ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ದತೆಯನ್ನು ಕೈಗೊಂಡಿದೆ.

ರಾಜ್ಯದ 224 ಕ್ಷೇತ್ರಗಳ ಪೈಕಿ ಬೆಂಗಳೂರಿನ ಜಯನಗರ, ರಾಜರಾಜೇಶ್ವರಿ ನಗರ ಕ್ಷೇತ್ರಗಳನ್ನು ಹೊರತುಪಡಿಸಿ 222 ಕ್ಷೇತ್ರಗಳಲ್ಲಿ ಮತದಾನಕ್ಕೆ ರಾಜ್ಯಾದ್ಯಂತ 12 ಸಾವಿರಕ್ಕೂ ಅಧಿಕ ಸೂಕ್ಷ್ಮಸೇರಿದಂತೆ ಒಟ್ಟಾರೆ 58 ಸಾವಿರಕ್ಕೂ ಅಧಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಶುಕ್ರವಾರ ರಾತ್ರಿಯೇ 3.65ಲಕ್ಷಕ್ಕೂ ಅಧಿಕ ಚುನಾವಣಾ ಸಿಬ್ಬಂದಿ, 1.4ಲಕ್ಷಕ್ಕೂ ಅಧಿಕ ಮಂದಿ ಅಧಿಕಾರಿಗಳು ಸೇರಿದಂತೆ ಪೊಲೀಸ್ ಭದ್ರತಾ ಸಿಬ್ಬಂದಿ ಈಗಾಗಲೇ ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಸೇರಿದಂತೆ ಚುನಾವಣಾ ಸಾಮಗ್ರಿಗಳೊಂದಿಗೆ ನಿಗದಿತ ಮತಗಟ್ಟೆಗೆ ತೆರಳಿದ್ದು, ಬೆಳಗ್ಗೆ ಮತದಾನಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಿದ್ದಾರೆ.

2.56 ಕೋಟಿ ಪುರುಷರು, 2.50 ಕೋಟಿ ಮಹಿಳೆಯರು, 5,055 ತೃತೀಯ ಲಿಂಗಿಗಳು ಸೇರಿ ಒಟ್ಟು 5.06ಕೋಟಿಗೂ ಅಧಿಕ ಸಂಖ್ಯೆಯ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸೂಕ್ಷ್ಮಮತಗಟ್ಟೆಗೆ ಓರ್ವ ಹೆಡ್ ಕಾನ್‌ಸ್ಟೆಬಲ್, ಓರ್ವ ಕಾನ್‌ಸ್ಟೆಬಲ್ ಹಾಗೂ ಓರ್ವ ಗೃಹ ರಕ್ಷಕ ದಳದ ಸಿಬ್ಬಂದಿ ಸೇರಿ ಮೂರು ಮಂದಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಇದೇ ಮೊದಲಬಾರಿಗೆ ಮತದಾನದ ಉತ್ತೇಜನಕ್ಕಾಗಿ ಚುನಾವಣಾ ಆಯೋಗ ಮಹಿಳೆಯರು, ಹಿರಿಯ ನಾಗರಿಕರು, ವಿಕಲಚೇತನರಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಿದೆ. ಅಲ್ಲದೆ, ಮತ ಕೇಂದ್ರಗಳಲ್ಲಿ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಸೇರಿ ಮೂಲಭೂತ ಸೌಕರ್ಯ ಒದಗಿಸಲು ಆಯೋಗ ಕ್ರಮಕೈಗೊಂಡಿದೆ.
ಕಾಂಗ್ರೆಸಿನ 220, ಬಿಜೆಪಿಯ 222 ಹಾಗೂ ಜೆಡಿಎಸ್ ಹಾಗೂ ಬಿಎಸ್ಪಿ-217 ಸೇರಿದಂತೆ ಒಟ್ಟಾರೆ 2649ಕ್ಕೂ ಅಧಿಕ ಮಂದಿ ಸ್ಪರ್ಧಾಕಣದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಶ್ರೀರಾಮುಲು ಸೇರಿದಂತೆ ಘಟಾನುಘಟಿ ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ಬರೆಯಲಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು 39 ಮಂದಿ ಅಭ್ಯರ್ಥಿಗಳಿದ್ದು, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮತ್ತು ಸೇಡಂ ಕ್ಷೇತ್ರಗಳಲ್ಲಿ ಅತೀ ಕಡಿಮೆ (ಕೇವಲ 4 ಮಂದಿ) ಅಭ್ಯರ್ಥಿಗಳು ಸ್ಪರ್ಧಾ ಅಖಾಡದಲ್ಲಿದ್ದು, ತಮ್ಮ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ.

ರಾಜ್ಯದ 23 ಕ್ಷೇತ್ರಗಳಲ್ಲಿ 15ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಆ ಕ್ಷೇತ್ರಗಳಲ್ಲಿ 2 ಇವಿಎಂ ಯೂನಿಟ್, ವಿವಿಪ್ಯಾಟ್ ಅಳವಡಿಸಲಾಗುತ್ತದೆ. ಉಳಿದ ಕ್ಷೇತ್ರಗಳಲ್ಲಿ 1 ಇವಿಎಂ ಯೂನಿಟ್, ವಿವಿಪ್ಯಾಟ್ ಅಳವಡಿಸಲಾಗುತ್ತದೆ ಎಂದು ಆಯೋಗ ತಿಳಿಸಿದೆ.

ತೋರು ಬೆರಳಿಗೆ ಶಾಯಿ: ಈ ಬಾರಿ ಮತದಾನದ ಸಂದರ್ಭದಲ್ಲಿ ಮತದಾರರ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುತ್ತಿದೆ. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಕ್ರಮ ವಹಿಸಿದೆ.

ಈಗಾಗಲೇ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಿದ್ದು, ಮತಗಟ್ಟೆ ಕೇಂದ್ರ ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜತೆಗೆ ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿ ಸೇರಿ ಐವರು ಸಿಬ್ಬಂದಿ ನೇಮಕ ಮಾಡಲಾಗಿದೆ. 8ರಿಂದ 10ಮತಗಟ್ಟೆ ವ್ಯಾಪ್ತಿಗೆ ಅಧಿಕಾರಿಯೊಬ್ಬರನ್ನು ಉಸ್ತುವಾರಿಗೆ ನೇಮಕ ಮಾಡಲಾಗಿದೆ.

ನಿರ್ಭೀತಿಯಿಂದ ಮತದಾನ ಮಾಡಿ
‘ಚುನಾವಣಾ ಆಯೋಗ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾರರು ಯಾವುದೇ ಒತ್ತಡ, ಆಮಿಷ ಹಾಗೂ ಆತಂಕಕ್ಕೆ ಒಳಗಾಗದೆ ನಿರ್ಭೀತಿಯಿಂದ ತಮ್ಮ ಹಕ್ಕು ಚಲಾಯಿಸಿ’
-ಸಂಜೀವ್‌ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X