Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆ: ಚುನಾವಣಾ ಕರ್ತವ್ಯಕ್ಕೆ...

ದ.ಕ.ಜಿಲ್ಲೆ: ಚುನಾವಣಾ ಕರ್ತವ್ಯಕ್ಕೆ ಸರಕಾರಿ-ಖಾಸಗಿ ಬಸ್‌ಗಳ ಬಳಕೆ; ಪರದಾಡಿದ ಪ್ರಯಾಣಿಕರು

ವಾರ್ತಾಭಾರತಿವಾರ್ತಾಭಾರತಿ11 May 2018 9:58 PM IST
share
ದ.ಕ.ಜಿಲ್ಲೆ: ಚುನಾವಣಾ ಕರ್ತವ್ಯಕ್ಕೆ ಸರಕಾರಿ-ಖಾಸಗಿ ಬಸ್‌ಗಳ ಬಳಕೆ; ಪರದಾಡಿದ ಪ್ರಯಾಣಿಕರು

ಮಂಗಳೂರು, ಮೇ 11: ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಕರ್ತವ್ಯಕ್ಕೆ ಅಂದರೆ ಮತಗಟ್ಟೆ ಅಧಿಕಾರಿಗಳನ್ನು ಕೇಂದ್ರ ಸ್ಥಾನದಿಂದ (ಬೋಂದೆಲ್) ಮತಗಟ್ಟೆಗಳಿಗೆ ತಲುಪಿಸುವ (ಮಸ್ಟರಿಂಗ್) ಮತ್ತು ಮತದಾನದ ಬಳಿಕ ಅಲ್ಲಿಂದ ಕೇಂದ್ರ ಸ್ಥಾನಕ್ಕೆ ಮರಳಿಸುವ (ಡಿಮಸ್ಟರಿಂಗ್) ಸಲುವಾಗಿ ಜಿಲ್ಲಾಡಳಿತವು ಜಿಲ್ಲೆಯ ಖಾಸಗಿ ಮತ್ತು ಸರಕಾರಿ ಬಸ್ಸುಗಳನ್ನು ಬಳಸಿಕೊಂಡ ಕಾರಣ ಶುಕ್ರವಾರ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು.

ಜಿಲ್ಲಾಡಳಿತದ ಸೂಚನೆಯ ಮೇರೆಗೆ ಆಯಾಯ ರೂಟ್‌ನಲ್ಲಿ ಬಸ್‌ಗಳ ಸಂಚಾರವನ್ನು ಶುಕ್ರವಾರ ಮುಂಜಾನೆಯಿಂದಲೇ ಸ್ಥಗಿತಗೊಳಿಸಲಾಗಿದ್ದರೂ ಕೂಡ ಬಸ್ ಮಾಲಕರು ಅಥವಾ ಸಿಬ್ಬಂದಿ ವರ್ಗವು ಯಾವುದೇ ಮುನ್ಸೂಚನೆ ನೀಡದ ಕಾರಣ ಪ್ರಯಾಣಿಕರು ತೊಂದರೆಗೊಳಗಾದರು. ಅದರಲ್ಲೂ ಕೂಲಿ ಕಾರ್ಮಿಕರು, ಖಾಸಗಿ ಸಂಸ್ಥೆಗಳ ಉದ್ಯೋಗಿಗಳು, ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾದರು.

ಗ್ರಾಮಾಂತರ ಪ್ರದೇಶದಲ್ಲಂತೂ ಈ ಪರದಾಟ ಶೋಚನೀಯವಾಗಿತ್ತು. ಕೆಲವು ರೂಟ್‌ಗಳಲ್ಲಿ ನಾಲ್ಕೈದು ಬಸ್‌ಗಳು ಮಾತ್ರ ಸಂಚರಿಸುತ್ತಿದ್ದು, ಅಲ್ಲಿಂದಲೂ ಕೂಡ ಎರಡ್ಮೂರು ಬಸ್‌ಗಳನ್ನು ಜಿಲ್ಲಾಡಳಿತ ಚುನಾವಣಾ ನಿಮಿತ್ತ ಬಳಸಿಕೊಂಡಿದೆ. ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ಪ್ರಯಾಣಿಕರು ನಿಗದಿತ ಸ್ಥಳಕ್ಕೆ ನಿಗದಿತ ಸಮಯಕ್ಕೆ ತಲುಪಲಾಗದೆ ಪೇಚಾಡಿದರು.

ಮಂಗಳೂರು ನಗರ ವ್ಯಾಪ್ತಿಯಲ್ಲೂ ಕೂಡ ಖಾಸಗಿ ಮತ್ತು ಸರಕಾರಿ ಬಸ್ಸುಗಳನ್ನು ಚುನಾವಣಾ ಕಾರ್ಯನಿಮಿತ್ತ ಬಳಸಿಕೊಳ್ಳಲಾಗಿದ್ದು, ನಗರದಲ್ಲಿ ಬಸ್ ಪ್ರಯಾಣಿಕರು ರಿಕ್ಷಾವನ್ನು ಬಳಸಿಕೊಳ್ಳುವ ಪ್ರಮೇಯವೂ ಎದುರಾಯಿತು. ಪುತ್ತೂರು, ಸುಳ್ಯ, ಬೆಳ್ತಂಗಡಿ ಆಸುಪಾಸಿನಲ್ಲಿ ವ್ಯಾನ್ ಮತ್ತು ಜೀಪುಗಳನ್ನು ಬಳಸಿಕೊಂಡ ಕಾರಣ ಆ ಭಾಗದ ಪ್ರಯಾಣಿಕರು ತೊಂದರೆಗೀಡಾದರು.

ದ.ಕ.ಜಿಲ್ಲೆಯಲ್ಲಿ ಒಟ್ಟು 335 ಬಸ್, 163 ವ್ಯಾನ್, 150 ಜೀಪು ಸಹಿತ 648 ವಾಹನಗಳನ್ನು ಚುನಾವಣಾ ಕಾರ್ಯನಿಮಿತ್ತ ಬಳಸಿಕೊಳ್ಳಲಾಗಿದೆ. ಅದರಲ್ಲಿ ಸರಕಾರಿ ಮತ್ತು ಖಾಸಗಿ ಸಿಟಿ ಹಾಗೂ ಸರ್ವಿಸ್ ಬಸ್‌ಗಳೂ ಸೇರಿವೆ.

ಬೆಳ್ತಂಗಡಿಯಲ್ಲಿ 35 ಬಸ್, 17 ವ್ಯಾನ್, 26 ಜೀಪು ಸಹಿತ 78 ವಾಹನ, ಮೂಡುಬಿದಿರೆಯಲ್ಲಿ 46 ಬಸ್, 17 ವ್ಯಾನ್, 16 ಜೀಪು ಸಹಿತ 79 ವಾಹನ, ಮಂಗಳೂರು ನಗರ ಉತ್ತರದಲ್ಲಿ 54 ಬಸ್,23 ವ್ಯಾನ್, 6 ಜೀಪು ಸಹಿತ 83 ವಾಹನ, ಮಂಗಳೂರು ನಗರ ದಕ್ಷಿಣದಲ್ಲಿ 46 ಬಸ್, 4 ವ್ಯಾನ್ ಸಹಿತ 40 ವಾಹನ, ಮಂಗಳೂರು (ಉಳ್ಳಾಲ) 42 ಬಸ್, 23 ವ್ಯಾನ್, 20 ಜೀಪು ಸಹಿತ 85 ವಾಹನ, ಬಂಟ್ವಾಳದಲ್ಲಿ 49 ಬಸ್, 29 ವ್ಯಾನ್, 20 ಜೀಪು ಸಹಿತ 81 ವಾಹನ, ಪುತ್ತೂರಿನಲ್ಲಿ 34 ಬಸ್, 23 ವ್ಯಾನ್, 24 ಜೀಪು ಸಹಿತ 94 ವಾಹನ, ಸುಳ್ಯದಲ್ಲಿ 29 ಬಸ್, 27 ವ್ಯಾನ್, 38 ಜೀಪು ಸಹಿತ 94 ವಾಹನಗಳನ್ನು ಬಳಸಲಾಗಿದೆ.

ಶನಿವಾರ ಕೂಡ ಈ ಬಸ್‌ಗಳನ್ನು ಜಿಲ್ಲಾಡಳಿತ ಬಳಸಿಕೊಳ್ಳುವುದರಿಂದ ಪ್ರಯಾಣಿಕರು ಮತ್ತಷ್ಟು ತೊಂದರೆಗೀಡಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತ ಚುನಾವಣಾ ಕಾರ್ಯನಿಮಿತ್ತ ಬಸ್ಸುಗಳನ್ನು ಬಳಸಿಕೊಂಡರೂ ಕೂಡ ರೂಟ್ ವ್ಯಾಪ್ತಿಯೊಳಗಿನ ಪ್ರಯಾಣಿಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕಾಗಿತ್ತು. ಆದರೆ ಯಾವುದೇ ಮಾಹಿತಿ ನೀಡದ ಕಾರಣ ಇಂತಹ ಸಮಸ್ಯೆ ಸೃಷ್ಟಿಯಾಗಿದೆ ಎಮದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಠಾತ್ ಬಸ್‌ಗಳನ್ನು ಸ್ಥಗಿತಗೊಳಿಸದೆ ಮುನ್ಸೂಚನೆ ನೀಡಿದ್ದರೆ ಪರದಾಡುವುದು ತಪ್ಪುತ್ತಿತ್ತು ಎಂಬ ಅಭಿಪ್ರಾಯ ಪ್ರಯಾಣಿಕರಿಂದ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X