ಮಡಿಕೇರಿ: ರಾಜಕೀಯ ನಾಯಕರಿಂದ ಮತ ಚಲಾವಣೆ

ಅರುಣಾ ಮಾಚಯ್ಯ
ಮಡಿಕೇರಿ,ಮೇ.12: ಮಡಿಕೇರಿ ನಗರದ ಜೂನಿಯರ್ ಕಾಲೇಜ್ ಆವರಣದಲ್ಲಿರುವ ಮತಗಟ್ಟೆಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಮತ ಚಲಾಯಿಸಿದರು. ಬೆಳಗ್ಗೆ ಪತ್ನಿ ಕುಂತಿ ಬೋಪಯ್ಯರೊಂದಿಗೆ ಆಗಮಿಸಿದ ಬೋಪಯ್ಯ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದರು. ಸತತ ಮೂರು ಬಾರಿ ಶಾಸಕರಾಗಿರುವ ಅವರು ಈ ಬಾರಿ ಕೂಡ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಅರುಣ್ ಮಾಚಯ್ಯ
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಅರುಣ್ ಮಾಚಯ್ಯ ಅವರು ಮಾಯಮುಡಿ ಗ್ರಾ.ಪಂ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ತಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರೊಂದಿಗೆ ಮತಗಟ್ಟೆಗೆ ಆಗಮಿಸಿದ ಅರುಣ್ ಮಾಚಯ್ಯ ತಮ್ಮ ಹಕ್ಕನ್ನು ಚಲಾಯಿಸಿದರು. ನಂತರ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಎಂಎಲ್ಸಿ ವೀಣಾಅಚ್ಚಯ್ಯ : ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕಿ ವೀಣಾಅಚ್ಚಯ್ಯ ಅವರು ಮಡಿಕೇರಿ ನಗರದ ಎವಿ ಶಾಲೆ ಆವರಣದ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಎಂಎಲ್ಸಿ ಎಂ.ಸಿ.ನಾಣಯ್ಯ
ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಸಿ.ನಾಣಯ್ಯ ಅವರು ಮಡಿಕೇರಿ ನಗರದ ಸಂತ ಮೈಕಲರ ಶಾಲೆಯ ಆವರಣದ ಮತಗಟ್ಟೆಯಲ್ಲಿ ಮತದಾನ ಮಾಡಿದರು.





