Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೇ.70 ಕ್ಕಿಂತ ಹೆಚ್ಚು ಮತದಾನ: ಸಂಜೀವ್‌...

ಶೇ.70 ಕ್ಕಿಂತ ಹೆಚ್ಚು ಮತದಾನ: ಸಂಜೀವ್‌ ಕುಮಾರ್

ರಾಜ್ಯ ವಿಧಾನಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ12 May 2018 9:41 PM IST
share
ಶೇ.70 ಕ್ಕಿಂತ ಹೆಚ್ಚು ಮತದಾನ: ಸಂಜೀವ್‌ ಕುಮಾರ್

ಬೆಂಗಳೂರು, ಮೇ 12: ರಾಜ್ಯ ವಿಧಾನಸಭೆಯ 222 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ.70ಕ್ಕಿಂತ ಹೆಚ್ಚು ಮತದಾನವಾಗಿರುವ ಸಾಧ್ಯತೆಯಿದೆ. ಈಗಲೇ ನಿರ್ದಿಷ್ಟವಾಗಿ ಅಂಕಿ ಸಂಖ್ಯೆಗಳನ್ನು ಹೇಳಲು ಸಾಧ್ಯವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ತಿಳಿಸಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಣ್ಣಪುಟ್ಟ ಘಟನೆಗಳು ಹೊರತುಪಡಿಸಿ ರಾಜ್ಯಾದ್ಯಂತ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದೆ. ಯುವಜನತೆ, ಹಿರಿಯ ನಾಗರಿಕರು, ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ ಎಂದರು.
ಚುನಾವಣಾ ಆಯೋಗದ ಜೊತೆಗೆ ಎಲ್ಲ ಇಲಾಖೆಗಳ ಸಹಕಾರ ಇತ್ತು. ನೋಡಲ್ ಅಧಿಕಾರಿಗಳು, ಅರೆ ಸೇನಾ ಪಡೆಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಎಲ್ಲ ಸಿಬ್ಬಂದಿಗಳಿಗೂ ಧನ್ಯವಾದಗಳು. ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನ ಹಾಗೂ ಸಹಕಾರದಿಂದ ಯಶಸ್ವಿಯಾಗಿ ಚುನಾವಣೆ ನಡೆಸಲು ಸಾಧ್ಯವಾಯಿತು ಎಂದು ಅವರು ಹೇಳಿದರು.

ಕೆಲವೆಡೆ ವಿವಿ ಪ್ಯಾಟ್ ಸಮಸ್ಯೆಯಾಗಿತ್ತು. 212 ಬ್ಯಾಲೆಟ್ ಯೂನಿಟ್, 340 ಕಂಟ್ರೋಲ್ ಯೂನಿಟ್, 698 ವಿವಿ ಪ್ಯಾಟ್ ವಿಫಲವಾಗಿದ್ದವು, ಅವುಗಳನ್ನು ಬದಲಾಯಿಸಿದ್ದೇವೆ. ಬಿಇಎಲ್‌ನ 600ಕ್ಕೂ ಹೆಚ್ಚು ಎಂಜಿನಿಯರ್‌ಗಳು ಇವಿಎಂಗಳ ಬಗ್ಗೆ ನಿಗಾವಹಿಸಿದ್ದರು ಎಂದು ಅವರು ಹೇಳಿದರು.

ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಮತಗಟ್ಟೆ ಸಂಖ್ಯೆ 2ರಲ್ಲಿ ಇವಿಎಂ ಯಂತ್ರದ 9ನೆ ಕ್ರಮ ಸಂಖ್ಯೆಯ ಬಟನ್ ಸಿಕ್ಕಿ ಹಾಕಿಕೊಂಡಿದ್ದ ಪರಿಣಾಮವಾಗಿ ಯಾರಿಗೆ ಮತ ಹಾಕಿದರೂ ಆ ಬಟನ್ ಎದುರು ದೀಪ ಬೆಳಗುತ್ತಿತ್ತು. ಆದುದರಿಂದ, ಈ ಮತಗಟ್ಟೆಯಲ್ಲಿ ಮೇ 14ರಂದು ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ಮರು ಮತದಾನ ನಡೆಸಲಾಗುವುದು. ಈಗಾಗಲೆ ಮತದಾನ ಮಾಡಿರುವವರು ಮತ್ತೆ ಮತ ಹಾಕಬೇಕು. ಯಾವ ಬೆರಳಿಗೆ ಶಾಯಿ(ಇಂಕ್) ಹಾಕಬೇಕು ಎಂಬುದರ ಕುರಿತು ಶೀಘ್ರದಲ್ಲೆ ನಿರ್ಧರಿಸಲಾಗುವುದು.

ಚುನಾವಣೆ ನಡೆಯದ ಜಯನಗರ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆಗಳನ್ನು ಆರಂಭಿಸಲಾಗಿದೆ. 222 ಕ್ಷೇತ್ರಗಳ ಮತದಾನದ ಎಣಿಕೆ ಕಾರ್ಯವು ಮೇ 15ರಂದು ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ ಎಂದು ಸಂಜೀವ್‌ಕುಮಾರ್ ತಿಳಿಸಿದರು.

ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ 40 ಸಾವಿರ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 182 ಕೋಟಿ ರೂ.ಮೌಲ್ಯದ ನಗದು, ಚಿನ್ನಾಭರಣ, ಮದ್ಯ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 600 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ವಿಕಲಚೇತನರಿಗಾಗಿ 26 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು ಎಂದು ಅವರು ಹೇಳಿದರು.

ಆರ್‌ಎಂವಿ ಎರಡನೆ ಹಂತದ ಮತಗಟ್ಟೆಯೊಂದರಲ್ಲಿ ಇವಿಎಂನ ಯಾವ ಬಟನ್ ಒತ್ತಿದರೂ ಕಮಲದ ಚಿನ್ಹೆಗೆ ಮತ ಬೀಳುತ್ತಿತ್ತು ಎಂದು ಬ್ರಿಜೇಶ್ ಕಾಳಪ್ಪ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಲೊಟ್ಟೆಗೊಲ್ಲಹಳ್ಳಿಯ ಮತಗಟ್ಟೆ ಸಂಖ್ಯೆ 2ರಲ್ಲಿ ಮಾತ್ರ ಇಂತಹ ಸಮಸ್ಯೆಯಾಗಿತ್ತು. ಅಲ್ಲಿ ಮೇ 14ರಂದು ಮರು ಮತದಾನ ನಡೆಸಲು ತೀರ್ಮಾನಿಸಲಾಗಿದೆ. ಈ ಒಂದು ಪ್ರಕರಣ ಹೊರತುಪಡಿಸಿದರೆ ರಾಜ್ಯದ ಯಾವುದೆ ಭಾಗದಲ್ಲಿ ಅಂತಹ ಪ್ರಕರಣ ಕಂಡು ಬಂದಿಲ್ಲ.
-ಸಂಜೀವ್‌ಕುಮಾರ್, ರಾಜ್ಯ ಮುಖ್ಯಚುನಾವಣಾಧಿಕಾರಿ

ಸಂಜೆಯ 6ರವರೆಗೆ ಶೇಕಡವಾರು ಮತದಾನ
ಬೆಳಗಾವಿ-ಶೇ.71
ಬಾಗಲಕೋಟೆ-ಶೇ.68
ವಿಜಯಪುರ(ಬಿಜಾಪುರ)-ಶೇ.63
ಕಲಬುರಗಿ(ಗುಲ್ಬರ್ಗ)-ಶೇ.56
ಬೀದರ್-ಶೇ.59
ರಾಯಚೂರು-ಶೇ.61
ಕೊಪ್ಪಳ-ಶೇ.70
ಗದಗ-ಶೇ.68
ಧಾರವಾಡ-ಶೇ.66
ಉತ್ತರ ಕನ್ನಡ-ಶೇ.71
ಹಾವೇರಿ-ಶೇ.76
ಬಳ್ಳಾರಿ-ಶೇ.66
ಚಿತ್ರದುರ್ಗ-ಶೇ.76
ದಾವಣಗೆರೆ-ಶೇ.70
ಶಿವಮೊಗ್ಗ-ಶೇ.73
ಉಡುಪಿ-ಶೇ.75
ಚಿಕ್ಕಮಗಳೂರು-ಶೇ.70
ತುಮಕೂರು-ಶೇ.73
ಚಿಕ್ಕಬಳ್ಳಾಪುರ-ಶೇ.79
ಕೋಲಾರ-ಶೇ.77
ಬೆಂಗಳೂರು ಗ್ರಾಮಾಂತರ-ಶೇ.76
ರಾಮನಗರ-ಶೇ.80
ಮಂಡ್ಯ-ಶೇ.78
ಹಾಸನ-ಶೇ.77
ದಕ್ಷಿಣ ಕನ್ನಡ-ಶೇ.73
ಕೊಡಗು-ಶೇ.69
ಮೈಸೂರು-ಶೇ.68
ಚಾಮರಾಜನಗರ-ಶೇ.78
ಯಾದಗಿರಿ-ಶೇ.60
ಬೆಂಗಳೂರು(ಕೇಂದ್ರ)-ಶೇ.51
ಬೆಂಗಳೂರು(ಉತ್ತರ)-ಶೇ.49
ಬೆಂಗಳೂರು(ದಕ್ಷಿಣ)-ಶೇ.49
ಬೆಂಗಳೂರು(ನಗರ)-ಶೇ.51

share
ವಾರ್ತಾಭಾರತಿ
ವಾರ್ತಾಭಾರತಿ
Next Story
X