Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮತ ಎಣಿಕೆ ಪ್ರಕ್ರಿಯೆಗೆ...

ಚಿಕ್ಕಮಗಳೂರು: ಮತ ಎಣಿಕೆ ಪ್ರಕ್ರಿಯೆಗೆ ಸಿದ್ಧವಾದ ಎಸ್‍ಟಿಜೆ ಕಾಲೇಜ್

ಸ್ಟ್ರಾಂಗ್ ರೂಮ್‍ಗಳಲ್ಲಿ ಇವಿಎಂ ಭದ್ರ

ವಾರ್ತಾಭಾರತಿವಾರ್ತಾಭಾರತಿ13 May 2018 7:12 PM IST
share
ಚಿಕ್ಕಮಗಳೂರು: ಮತ ಎಣಿಕೆ ಪ್ರಕ್ರಿಯೆಗೆ ಸಿದ್ಧವಾದ ಎಸ್‍ಟಿಜೆ ಕಾಲೇಜ್

ಚಿಕ್ಕಮಗಳೂರು, ಮೇ 13: ರಾಜ್ಯ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಜಿಲ್ಲೆಯಾದ್ಯಂತ ವಿವಿಧ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ, ಆರೋಪ, ಪ್ರತ್ಯಾರೋಪ ಸೇರಿದಂತೆ ಎಲ್ಲ ರೀತಿಯ ಚುನಾವಣಾ ಆರ್ಭಟಕ್ಕೆ ಶನಿವಾರ ನಡೆದ ಮತದಾನ ಪ್ರಕ್ರಿಯೆಯಿಂದಾಗಿ ತೆರೆಬಿದ್ದಿದ್ದು, ಸದ್ಯ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರಲ್ಲಿ ತಮ್ಮತಮ್ಮ ಕ್ಷೇತ್ರಗಳಲ್ಲಿ ಜಯಗಳಿಸುವವರ್ಯಾರು ಎಂಬ ಕುತೂಹಲ ಮಾತ್ರ ಉಳಿದಿದೆ. ಈ ಕುತೂಹಲ ತಣಿಯಲು ಒಂದು ದಿನ ಮಾತ್ರ ಬಾಕಿ ಇದ್ದು, ಶನಿವಾರ ನಡೆದ ಮತದಾನದ ನಂತರ ಐದೂ ಕ್ಷೇತ್ರಗಳ 1210 ಮತಗಟ್ಟೆಗಳ ಇವಿಎಂಗಳು ರವಿವಾರ ಬೆಳಗ್ಗೆ ನಗರದ ಎಸ್‍ಟಿಜೆ ಕಾಲೇಜಿನ ಸ್ಟ್ರಾಂಗ್ ರೂಮ್‍ನಲ್ಲಿ ಭದ್ರಗೊಂಡಿವೆ.

ಶನಿವಾರ ಸಂಜೆ 6ಕ್ಕೆ ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ವಿವಿಧ 1210 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಮತಗಟ್ಟೆಯ ಅಧಿಕಾರಿಗಳು ಇವಿಎಂಗಳನ್ನು ಬಿಗಿ ಭದ್ರತೆಯಲ್ಲಿ ಸರಕಾರಿ ಬಸ್‍ಗಳು ಹಾಗೂ ಚುನಾವಣಾ ಕೆಲಸಕ್ಕೆ ನೇಮಿಸಿದ್ದ ವಾಹನಗಳಲ್ಲಿ ಕ್ಷೇತ್ರಗಳ ತಾಲೂಕು ಕೇಂದ್ರಗಳಿಗೆ ರವಾನಿಸಿದ್ದರು. ರವಿವಾರ ಬೆಳಗ್ಗೆ 1210 ಮತಯಂತ್ರಗಳನ್ನು ನಗರದ ಎಸ್‍ಟಿಜೆ ಕಾಲೇಜಿಗೆ ಸರಕಾರಿ ಬಸ್ ಹಾಗೂ ವಿವಿಧ ವಾಹನಗಳ ಮೂಲಕ ಬಿಗಿ ಭದ್ರತೆಯಲ್ಲಿ ಸಾಗಣೆ ಮಾಡಿ ಚುನಾವಣಾಧಿಕಾರಿಗಳ ಸೂಚನೆಯಂತೆ ನಿಗದಿತ ಸ್ಟ್ರಾಂಗ್ ರೂಮ್‍ಗಳಲ್ಲಿ ಸಂಗ್ರಹಿಸಿಡಲಾಗಿದೆ.

ಮೇ 15ರಂದು ಬೆಳಗ್ಗೆಯಿಂದಲೇ ಮತ ಎಣಿಕೆ ಆರಂಭವಾಗುವ ಹಿನ್ನೆಲೆಯಲ್ಲಿ ಎಸ್‍ಟಿಜೆ ಕಾಲೇಜಿನ ವಿವಿಧ ಕೊಠಡಿಗಳಲ್ಲಿ ಮತ ಎಣಿಕೆಗೆ ಅಗತ್ಯ ಸಿದ್ಧತೆಗಳನ್ನು ಚುನಾವಣಾಧಿಕಾರಿಗಳು ಈ ಮೊದಲೇ ಮಾಡಿದ್ದಾರೆ. ಇವಿಎಂಗಳಲ್ಲಿ ಮತ ಎಣಿಕೆ ಮಾಡುವ ಅಧಿಕಾರಿಗಳಿಗೆ ಹಾಗೂ ರಾಜಕೀಯ ಪಕ್ಷಗಳ ಬೂತ್ ಎಜೆಂಟ್‍ಗಳಿಗೆ ಮತ ಎಣಿಕೆ ವೀಕ್ಷಿಸಲು ಕಾಲೇಜಿನ ವಿವಿಧ ಕೊಠಡಿಗಳಲ್ಲಿ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಸಕಲ ಸಿದ್ಧತೆ ಮಾಡಲಾಗಿದೆ.

ಮೇ 15ರಂದು ಮತ ಎಣಿಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಇವಿಎಂ ಸಂಗ್ರಹಿಸಿಡಲಾಗಿರುವ ಸ್ಟ್ರಾಂಗ್ ರೂಮ್‍ಗಳಿಗೆ ಭಾರೀ ಬಿಗಿ ಭದ್ರೆತಯನ್ನು ಜಿಲ್ಲಾಡಳಿತ ಒದಗಿಸಿದೆ. ಮಂಗಳವಾರ ಬೆಳಗ್ಗೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗುವುದರಿಂದ ಕಾಲೇಜಿನ ಒಳ ಹಾಗೂ ಹೊರ ಭಾಗಗಲ್ಲಿ ಅಗತ್ಯ ಪೊಲೀಸರು ಹಾಗೂ ಅರೆಸೇನಾ ಪಡೆ ತುಕಡಿಗಳ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಮತ ಎಣಿಕೆ ಹಿನ್ನೆಲೆಯಲ್ಲಿ ಐದೂ ಕ್ಷೇತ್ರಗಳ 64 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ದಾಖಲಾಗಿರುವ ಮತಯಂತ್ರಗಳ ಸಂಗ್ರಹದ ಬಗ್ಗೆ ರವಿವಾರ ಕೆಲ ಅಭ್ಯರ್ಥಿಗಳು ಎಸ್‍ಟಿಜೆ ಕಾಲೇಜು ಆವರಣಕ್ಕೆ ಬಂದು ಪರಿಶೀಲಿಸಿದರು. ಚಿಕ್ಕಮಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಚ್.ಹರೀಶ್, ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ಶಂಕರ್ ತಮ್ಮ ಬೆಂಬಲಿಗರೊಂದಿಗೆ ರವಿವಾರ ಬೆಳಗ್ಗೆ ಕಾಲೇಜು ಆವರಣಕ್ಕೆ ಆಗಮಿಸಿ ಮತಯಂತ್ರಗಳನ್ನಿಡಲಾಗಿರುವ ಸ್ಟ್ರಾಂಗ್ ರೂಮ್ ಸೇರಿದಂತೆ ಮತ ಎಣಿಕೆಗೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಬಗ್ಗೆ ಪರಿಶೀಲಿಸಿ ಚುನಾವಣಾಧಿಕಾರಿಗಳೊಂದಿಗೆ ಕೆಲಹೊತ್ತು ಮಾತುಕತೆ ನಡೆಸಿ ತೆರಳಿದ್ದಾರೆ.

ಒಟ್ಟಿನಲ್ಲಿ ರಾಜ್ಯ ವಿಧಾನಸಭೆಗೆ ಜಿಲ್ಲೆಯ ಚಿಕ್ಕಮಗಳೂರು, ಶೃಂಗೇರಿ, ಕಡೂರು, ತರೀಕೆರೆ, ಮೂಡಿಗೆರೆ ವಿಧಾನಸಭೆ ಕ್ಷೇತ್ರಗಳಿಂದ ಆಯ್ಕೆಯಾಗುವ ಜನಪ್ರತಿನಿಧಿಗಳು ಯಾರು ಎಂಬ ಭವಿಷ್ಯ ಎಸ್‍ಟಿಜೆ ಕಾಲೇಜಿನ ಸ್ಟ್ರಾಂಗ್ ರೂಮ್‍ನಲ್ಲಿ ಭದ್ರವಾಗಿದ್ದು, ಮಂಗಳವಾರ ಮಧ್ಯಾಹ್ನದ ವೇಳೆಗೆ ಈ ಕುತೂಹಲಕ್ಕೆ ಅಧಿಕಾರಿಗಳು ತೆರೆ ಎಳೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯ ಐದೂ ಕ್ಷೇತ್ರಗಳ ಜನತೆ ಕತೂಹಲದಿಂದ ಲೆಕ್ಕಾಚಾರ ಹಾಕುತ್ತಲೇ ಕಾಯುವುದು ಅನಿವಾರ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X