Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೃಂಗೇರಿ: ನಕ್ಸಲ್ ಪೀಡಿತ ಗ್ರಾಮಗಳಲ್ಲಿ...

ಶೃಂಗೇರಿ: ನಕ್ಸಲ್ ಪೀಡಿತ ಗ್ರಾಮಗಳಲ್ಲಿ ಶೇ.90 ಮತದಾನ

ವಾರ್ತಾಭಾರತಿವಾರ್ತಾಭಾರತಿ13 May 2018 7:15 PM IST
share
ಶೃಂಗೇರಿ: ನಕ್ಸಲ್ ಪೀಡಿತ ಗ್ರಾಮಗಳಲ್ಲಿ ಶೇ.90 ಮತದಾನ

ಶೃಂಗೇರಿ, ಮೇ 13: ತಾಲೂಕಿನಲ್ಲಿ ಶೇಕಡಾ 80ರಷ್ಟು ಮತದಾನ ನಡೆದಿದ್ದು, ನಕ್ಸಲ್ ಪೀಡಿತ ಪ್ರದೇಶಗಳಾದ ಕೆರೆಕಟ್ಟೆ, ಬುಕಡಿಬ್ಯೆಲು, ಹಂಚಿನಕೂಡಿಗೆ, ಮಲ್ನಾಡ್, ಹರೂರು, ನೆಮ್ಮಾರ್‍ಮಕ್ಕಿ, ಸುಂಕದಮಕ್ಕಿ, ಕಡ್ಕಲ್, ಭಲೇಕಡಿ, ಸಿಂದೋಡಿ, ದಿಂದೋಡಿ, ಯಡದಾಳು ಮುಂತಾದ ಕಡೆ ಶೇ.90ರಷ್ಟು ಮತದಾನವಾದ ಬಗ್ಗೆ ಶನಿವಾರ ಸಂಜೆ ವರದಿಯಾಗಿದೆ.

ತಾಲೂಕಿನಲ್ಲಿ ಒಟ್ಟು ಒಂಬತ್ತು ಗ್ರಾಪಂ ಹಾಗೂ ಒಂದು ಪ.ಪಂ. ಗಳಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗದೇ ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ ಮತದಾನ ಪ್ರಕ್ರಿಯೆ ಮಂದಗತಿಯಿಂದ ಆರಂಭವಾಗಿತ್ತು. ನಂತರ ಮಧ್ಯಾಹ್ನದ ಬಳಿಕ ಚುರುಕುಗೊಂಡಿತ್ತು. ಮೆಣಸೆ ಗ್ರಾಪಂನ ಪಡುಬ್ಯೆಲು ಮತದಾನ ಕೇಂದ್ರದಲ್ಲಿ ತಾಂತ್ರಿಕ ದೋಷದಿಂದ ಮತಯಂತ್ರ ಕೈಕೊಟ್ಟಿದ್ದರಿಂದ ಸುಮಾರು ಅರ್ಧಗಂಟೆ ಮತದಾರರು ಕಾಯುವ ಪರಿಸ್ಥಿತಿ ಉಂಟಾಯಿತು. ವಿಕಲಚೇತನರಿಗಾಗಿ ಹಾಗೂ ಹಿರಿಯ ನಾಗರಿಕರಿಗಾಗಿ ಚುನವಣಾ ಆಯೋಗವು ವೀಲ್ಹ್ ಚೇರ್ ವ್ಯವಸ್ಥೆ ಮಾಡಿದ್ದು, ಇದರ ಸಮರ್ಪಕ ಬಳಕೆಯಾಗುತ್ತಿದ್ದುದು ಕೆಲ ಮತಗಟ್ಟೆಗಳಲ್ಲಿ ಕಂಡು ಬಂತು. ಬಿರುಬಿಸಿಲಿನ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹುಮ್ಮಸ್ಸಿನಿಂದ ಬಂದು ಮತದಾನ ಮಾಡಿದ್ದು ಹಲವು ಕಡೆ ಕಂಡು ಬಂದಿತ್ತು. ಶೃಂಗೇರಿ ಪಟ್ಟಣದ ಸರಕಾರಿ ಬಾಲಕಿಯರ ಪಾಠಶಾಲೆಯಲ್ಲಿ ಪಿಂಕ್‍ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು, ಅಲ್ಲಿನ ಮಹಿಳಾ ಅಧಿಕಾರಿಗಳು ಪಿಂಕ್ ಸೀರೆ ಧರಿಸಿದ್ದು ವಿಶೇಷವಾಗಿತ್ತು.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ತಾಲೂಕಿನ ಒಟ್ಟು 49 ಮತಗಟ್ಟೆಗಳ ಪೈಕಿ ಮೆಣಸೆ ಗ್ರಾಪಂನ ಎಂಟು ಬೂತ್‍ಗಳಲ್ಲಿ ಶೇ.90ರಷ್ಟು ಮತದಾನ ನಡೆದರೆ, ನೆಮ್ಮಾರ್ ಗ್ರಾಪಂನಲ್ಲಿ ಐದು ಬೂತ್‍ಗಳಿದ್ದು ಶೇ.90ರಷ್ಟು ಮತದಾನ ನಡೆದ ಬಗ್ಗೆ ವರದಿಯಾಗಿದೆ.

ಅಡ್ಡಗದ್ದೆ ಗ್ರಾ.ಪಂನಲ್ಲಿ ನಾಲ್ಕು ಬೂತ್‍ಗಳಿದ್ದು ಶೇಕಡಾ 89.90ರಷ್ಟು ಮತದಾನ ನಡೆದಿದೆ. ಮರ್ಕಲ್ ಗ್ರಾ.ಪಂನಲ್ಲಿ ಆರು ಮತಗಟ್ಟೆಗಳಿದ್ದು, ಶೇಕಡಾ 88ರಷ್ಟು ಮತದಾನ ನಡೆಯಿತು. ಧರೇಕೊಪ್ಪ ಗ್ರಾ.ಪಂನ ನಾಲ್ಕು ಮತಗಟ್ಟೆಗಳಿದ್ದು ಶೇಕಡಾ 89.5ರಷ್ಟು ಮತದಾನ ನಡೆದಿದೆ. ಕೆರಕಟ್ಟೆ ಗ್ರಾ.ಪಂನಲ್ಲಿ ನಾಲ್ಕು ಮತಗಟ್ಟೆ ಕೇಂದ್ರಗಳಿದ್ದು, ಶೇ.92ರಷ್ಟು ಮತದಾನವಾಗಿದೆ. ಬೇಗಾರು ಗ್ರಾಪಂನಲ್ಲಿ ಶೇ.85ರಷ್ಟು ಮತದಾನವಾಗಿದ್ದು, ಅಲ್ಲಿ ಐದು ಬೂತ್‍ಗಳನ್ನು ಒದಗಿಸಲಾಗಿತ್ತು. ಕುತೂಗೋಡು ಗ್ರಾ.ಪಂನಲ್ಲಿ ನಾಲ್ಕು ಮತಗಟ್ಟೆಗಳಿದ್ದು, ಶೇ.90ರಷ್ಟು ಮತಚಲಾಯಿಸಲಾಗಿದೆ. ವಿದ್ಯಾರಣ್ಯಪುರ ಗ್ರಾಪಂನಲ್ಲಿ ಏಳು ಮತಗಟ್ಟೆಗಳಿದ್ದು, ಶೇ.86ರಷ್ಟು ಮತದಾನ ನಡೆದಿದೆ. ಶೃಂಗೇರಿ ಪಪಂ ವ್ಯಾಪ್ತಿಯಲ್ಲಿ 4 ಮತಗಟ್ಟೆಗಳಿದ್ದು, 156ರ ಮತಕೇಂದ್ರದಲ್ಲಿ ಶೇ.73, ಪಟ್ಟಣದ 157 ಮತಕೇಂದ್ರದಲ್ಲಿ ಶೇ.73ರಷ್ಟು ಮತದಾನ ಹಾಗೂ 158 ಮತಕೇಂದ್ರದಲ್ಲಿ ಶೇ.74 ಹಾಗೂ 159ರ ಮತಗಟ್ಟೆಯಲ್ಲಿ ಶೇ.80ರಷ್ಟು ಮತದಾನ ನಡೆದ ಬಗ್ಗೆ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X