Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಬರಮತಿ ಜೈಲಿನ ವಿನೂತನ ಉಪಕ್ರಮ:...

ಸಾಬರಮತಿ ಜೈಲಿನ ವಿನೂತನ ಉಪಕ್ರಮ: ‘ಪ್ಯಾಡ್‌ವಿಮೆನ್’ಹೆಜ್ಜೆ

ವಾರ್ತಾಭಾರತಿವಾರ್ತಾಭಾರತಿ13 May 2018 9:04 PM IST
share
ಸಾಬರಮತಿ ಜೈಲಿನ ವಿನೂತನ ಉಪಕ್ರಮ: ‘ಪ್ಯಾಡ್‌ವಿಮೆನ್’ಹೆಜ್ಜೆ

ಅಹ್ಮದಾಬಾದ್,ಮೇ 13: ಇಲ್ಲಿಯ ಸಾಬರಮತಿ ಕೇಂದ್ರ ಕಾರಾಗೃಹದಲ್ಲಿಯ ಮಹಿಳಾ ಕೈದಿಗಳು ಸ್ಯಾನಿಟರಿ ನ್ಯಾಪ್ಕಿನ್‌ಗಳ ತಯಾರಿಕೆಯನ್ನು ಕೈಗೆತ್ತಿಕೊಳ್ಳುವ ಮೂಲಕ ಉದಾತ್ತ ಉಪಕ್ರಮವೊಂದಕ್ಕೆ ನಾಂದಿ ಹಾಡಿದ್ದಾರೆ.

ಈ ಉದ್ಯಮವು ಅವರಿಗೆ ಆದಾಯಮೂಲವಾಗಿರುವ ಜೊತೆಗೆ ಗುಜರಾತ್ ನಾದ್ಯಂತ ಜೈಲುಗಳಲ್ಲಿರುವ ಮಹಿಳಾ ಕೈದಿಗಳಿಗೆ ಹೆಚ್ಚಿನ ನೈರ್ಮಲ್ಯ ಸೌಲಭ್ಯ ವನ್ನೊದಗಿಸಲಿದೆ.

ನಗರದ ಸರಕಾರೇತರ ಸಂಸ್ಥೆ(ಎನ್‌ಜಿಒ)ಕರ್ಮಾ ಪ್ರತಿಷ್ಠಾನವು ಕಳೆದ ವಾರ ಸಾಬರಮತಿ ಜೈಲಿನ ಮಹಿಳಾ ಕೈದಿಗಳ ಬ್ಯಾರಕ್‌ನಲ್ಲಿ ಸ್ಥಾಪಿಸಿರುವ ಘಟಕದಲ್ಲಿ ತಯಾರಾಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ರಾಜ್ಯದ ವಿವಿಧ ಜೈಲುಗಳಲ್ಲಿರುವ ಮಹಿಳಾ ಕೈದಿಗಳಿಗೆ ಉಚಿತವಾಗಿ ಒದಗಿಸಲಾಗುವುದು ಎಂದು ಅಧಿಕಾರಿ ಯೋರ್ವರು ತಿಳಿಸಿದರು.

ಮಹಿಳಾ ಕೈದಿಗಳಿಗೆ ಅರ್ಥಪೂರ್ಣ ಕೆಲಸವೊಂದನ್ನು ಒದಗಿಸುವ ಈ ಉದಾತ್ತ ಯೋಜನೆಯನ್ನು ರೂಪಿಸುವಲ್ಲಿ ಮಹಾತ್ಮಾ ಗಾಂಧಿಯವರು ಸ್ಥಾಪಿಸಿದ್ದ ನವಜೀವನ ಟ್ರಸ್ಟ್ ಕರ್ಮಾ ಪ್ರತಿಷ್ಠಾನ ಮತ್ತು ಜೈಲು ಅಧಿಕಾರಿಗಳ ನಡುವೆ ಸಂಪರ್ಕ ಸೇತುವಾಗಿ ಕಾರ್ಯ ನಿರ್ವಹಿಸಿತ್ತು.

ಆರು ತಿಂಗಳ ಹಿಂದೆ ತಾನು ಜೈಲಿಗೆ ಭೇಟಿ ನೀಡಿದ್ದಾಗ ಮಹಿಳಾ ಕೈದಿಗಳು ಯಾವುದೇ ಕೆಲಸವನ್ನು ಮಾಡದೇ ಸಮಯವನ್ನು ವ್ಯರ್ಥಗೊಳಿಸುತ್ತಿದ್ದನ್ನು ಕಂಡು ತನಗೆ ಈ ಯೋಜನೆಯನ್ನು ಆರಂಭಿಸುವ ಯೋಚನೆ ಹೊಳೆದಿತ್ತು ಎಂದು ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಪ್ರಿಯಾಂಶಿ ಪಟೇಲ್ ಹೇಳಿದರು.

ಭವಿಷ್ಯದಲ್ಲಿ ಟ್ರಸ್ಟ್ ಈ ಪ್ಯಾಡ್‌ಗಳನ್ನು ಸರಕಾರಿ ಏಜೆನ್ಸಿಗಳ ಮೂಲಕ ಸಬ್ಸಿಡಿ ದರಗಳಲ್ಲಿ ಮಾರಾಟ ಮಾಡಲಿದೆ ಎಂದರು. ಮಹಿಳಾ ಕೈದಿಗಳು ಜೈಲಿನಿಂದ ಬಿಡುಗಡೆಗೊಂಡ ನಂತರ ಸ್ಯಾನಿಟರಿ ಪ್ಯಾಡ್‌ಗಳನ್ನು ತಯಾರಿಸುವ ಸಣ್ಣ ಉದ್ಯಮವನ್ನು ಆರಂಭಿಸಬಹುದಾಗಿದೆ ಎಂದೂ ಅವರು ತಿಳಿಸಿದರು.

ಸದ್ಯ ಒಂದು ತಯಾರಿಕಾ ಘಟಕವನ್ನು ಸ್ಥಾಪಿಸಲಾಗಿದ್ದು,12 ಮಹಿಳಾ ಕೈದಿಗಳು ಕೆಲಸ ಮಾಡುತ್ತಿದ್ದಾರೆ. ಕ್ರಮೇಣ ಘಟಕಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದರು.

ಸಾಬರಮತಿ ಜೈಲಿನ ಕೈದಿಗಳಿಗಾಗಿ ಇಂತಹ ಇನ್ನಷ್ಟು ಯೋಜನೆಗಳನ್ನು ಆರಂಭಿಸುವಂತೆ ತಮ್ಮ ಸಂಸ್ಥೆಯು ಇನ್ನಷ್ಟು ಎನ್‌ಜಿಒಗಳನ್ನು ಉತ್ತೇಜಿಸಲಿದೆ ಎಂದು ನವಜೀವನ ಟ್ರಸ್ಟ್‌ನ ಆಡಳಿತ ಟ್ರಸ್ಟಿ ವಿವೇಕ ದೇಸಾಯಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X