Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೇ 15ರಂದು ಮತ ಎಣಿಕೆ: ಸ್ಟ್ರಾಂಗ್...

ಮೇ 15ರಂದು ಮತ ಎಣಿಕೆ: ಸ್ಟ್ರಾಂಗ್ ರೂಂಗಳಿಗೆ ಪೊಲೀಸ್ ಸರ್ಪಗಾವಲು

ವಾರ್ತಾಭಾರತಿವಾರ್ತಾಭಾರತಿ13 May 2018 9:27 PM IST
share
ಮೇ 15ರಂದು ಮತ ಎಣಿಕೆ: ಸ್ಟ್ರಾಂಗ್ ರೂಂಗಳಿಗೆ ಪೊಲೀಸ್ ಸರ್ಪಗಾವಲು

ಬೆಂಗಳೂರು, ಮೇ 13: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಜಿಲ್ಲಾ ಕೇಂದ್ರಗಳಲ್ಲಿ ಮೇ 15ರಂದು ನಡೆಯುವ ಮತ ಎಣಿಕೆಗೆ ಬಾರೀ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

ಮತಯಂತ್ರಗಳನ್ನು ಶೇಖರಿಸಿರುವ ಕೇಂದ್ರಗಳಿಗೆ ಅರೆಸೇನಾ ಪಡೆ, ಕೇಂದ್ರ ಮೀಸಲು ಪಡೆಯ ಶಸ್ತ್ರ ಸಜ್ಜಿತ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಮತಯಂತ್ರಗಳಿರುವ ಸ್ಟ್ರಾಂಗ್ ರೂಂಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಕೇಂದ್ರ ಭದ್ರತಾ ಪಡೆಗಳ ಜೊತೆಗೆ ರಾಜ್ಯದ ಪೊಲೀಸರನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ.

ಮತಯಂತ್ರಗಳಿರುವ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಹಾಕಲಾಗಿದ್ದು, ಕ್ಷಣಕ್ಷಣದ ಭದ್ರತಾ ಮಾಹಿತಿಯನ್ನು ಹಿರಿಯ ಅಧಿಕಾರಿಗಳು ಪಡೆದುಕೊಳ್ಳಿದ್ದಾರೆ. ಮತಯಂತ್ರಗಳಿರುವ ಸ್ಟ್ರಾಂಗ್ ರೂಂಗಳ ಬಳಿ ಶಸ್ತ್ರ ಸಜ್ಜಿತ ಸಿಬ್ಬಂದಿ ದಿನದ 24 ಗಂಟೆಗಳ ಕರ್ತವ್ಯನಿರತರಾಗಿದ್ದು, ಯಾರೊಬ್ಬರೂ ಕೇಂದ್ರದ ಸುತ್ತ ಸುಳಿಯದಂತೆ ನಿಗಾ ವಹಿಸಲಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಮಹಾ ನಗರಗಳಲ್ಲಿ ಪೊಲೀಸ್ ಆಯುಕ್ತರು, ವಲಯವಾರು ಐಜಿಪಿಗಳು, ಜಿಲ್ಲಾ ಕೇಂದ್ರಗಳಲ್ಲಿ ಎಸ್ಪಿಗಳು ಭದ್ರತೆಯ ನಿಗಾ ವಹಿಸಿದ್ದಾರೆ. ಚುನಾವಣೆಯ ಭದ್ರತೆಗಾಗಿ ಕೇಂದ್ರದಿಂದ ಬಂದಿರುವ ಆರೆ ಸೇನಾಪಡೆಯ 40 ಕಂಪೆನಿಗಳು ಸೇರಿ ಕೇಂದ್ರ ಮೀಸಲು ಪಡೆಯ 585 ಕಂಪೆನಿಗಳು ಮತಯಂತ್ರಗಳಿರುವ ಕೇಂದ್ರಗಳನ್ನು ಸುತ್ತುವರೆದಿದ್ದಾರೆ

ಜೊತೆಗೆ ರಾಜ್ಯ ಮೀಸಲು ಪಟೆ, ಸಿಎಆರ್‌ಡಿಎಆರ್‌ನ 754 ತುಕಡಿಗಳು 278 ಮಂದಿ ಡಿವೈಎಸ್‌ಪಿಗಳು, 947 ಮಂದಿ ಪೊಲೀಸ್ ಎಸ್ಸೈಗಳು, 5,322 ಮಂದಿ ಎಎಸ್ಸೈಗಳು, 45,685 ಮುಖ್ಯಪೇದೆ-ಪೇದೆಗಳು, 26,672 ಗೃಹರಕ್ಷಕ ಸಿಬ್ಬಂದಿಗಳು ಭದ್ರತೆಯಲ್ಲಿ ಚುನಾವಣೆಯ ಎಣಿಕೆ ಮುಗಿಯುವವರೆಗೆ ಭದ್ರತೆಯಲ್ಲಿ ತೊಡಗಲಿದ್ದಾರೆಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕಮಲ್‌ಫಂತ್ ಮಾಹಿತಿ ನೀಡಿದರು.

ಜಯನಗರ ‘ಟಿ’ ಬ್ಲಾಕ್‌ನ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಬಸವನಗುಡಿ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಪದ್ಮನಾಭನಗರ, ವಿಜಯನಗರ, ಗೋವಿಂದ ರಾಜನಗರ ಕ್ಷೇತ್ರಗಳ ಮತಯಂತ್ರಗಳನ್ನು ಇರಿಸಲಾಗಿದೆ.

ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ಶಿವಾಜಿನಗರ, ಶಾಂತಿ ನಗರ, ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ ಕ್ಷೇತ್ರಗಳ ಮತಯಂತ್ರಗಳನ್ನು ಶೇಖರಿಸಿಡಲಾಗಿದೆ. ವಸಂತ ನಗರದ ಮೌಂಟ್‌ಕಾರ್ಮಲ್ ಕಾಲೇಜಿನಲ್ಲಿ ಮಹಾಲಕ್ಷ್ಮೀಲೇಔಟ್, ಸರ್ವಜ್ಞ ನಗರ, ಹೆಬ್ಬಾಳ, ಕೆ.ಆರ್. ಪುರಂ ಹಾಗೂ ಸಿ.ವಿ. ರಾಮನ್‌ನಗರ ಕ್ಷೇತ್ರಗಳ ಮತಯಂತ್ರಗಳನ್ನು ಇರಿಸಲಾಗಿದೆ.

ಬಿಗಿ ಭದ್ರತೆ: ಸ್ಟ್ರಾಂಗ್ ರೂಂಗಳಿಗೆ ಅಗತ್ಯ ಭದ್ರತೆ ಕಲ್ಪಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿವೆ. ಮತ ಎಣಿಕೆ ಮುಗಿಯುವವರೆಗೂ ನಗರದ ಎಲ್ಲ ಪೊಲೀಸರೂ ಚುನಾವಣಾ ಭದ್ರತೆಯಲ್ಲಿ ಇರಲಿದ್ದಾರೆ. ಯಾವುದೇ ಅಹಿತಕರ ಘಟನೆಯೂ ನಡೆಯದಂತೆ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಎಲ್ಲ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೂ ಧನ್ಯವಾದಗಳು ಎಂದು ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X