Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗಣನೀಯ ಬದಲಾವಣೆ ಸಾಧ್ಯ ವೇ?

ಗಣನೀಯ ಬದಲಾವಣೆ ಸಾಧ್ಯ ವೇ?

ವೆಂಕಟೇಶ್, ಬೆಂಗಳೂರುವೆಂಕಟೇಶ್, ಬೆಂಗಳೂರು14 May 2018 12:34 AM IST
share

ಮಾನ್ಯರೆ,

ಚುನಾವಣೆಯನ್ನು ಜನತಂತ್ರದ ಹಬ್ಬಗಳು ಎಂದೆಲ್ಲಾ ವರ್ಣಿಸಲಾಗುತ್ತದೆ. ಆದರೆ ಜನರನ್ನು ಹಣಕ್ಕೆ, ಹೆಂಡಕ್ಕೆ, ಜಾತಿಗೆ, ಧರ್ಮಕ್ಕೆ ಸೀಮಿತಗೊಳಿಸುವ ಹಾಗೂ ಇವುಗಳನ್ನು ಬಿಟ್ಟರೆ ಬೇರೆ ಅಸ್ತಿತ್ವವೇ ಇಲ್ಲದಿರುವ ರೋಬೋಟ್ ಎಂದು ಜನರನ್ನು ಪರಿಗಣಿಸುವ ಪ್ರಸ್ತುತ ಚುನಾವಣಾ ವ್ಯವಸ್ಥೆಯಿಂದ ಯಾವ ಗಣನೀಯ ಬದಲಾವಣೆ ಸಾಧ್ಯ? ರಾಜಕಾರಣಿಗಳಿಂದ ಸಾಮಾನ್ಯ ಜನ ಏನನ್ನು ನಿರೀಕ್ಷೆ ಮಾಡಬೇಕು ಎಂಬುದನ್ನೇ ನಮ್ಮ ಬಹುತೇಕ ಮಾಧ್ಯಮಗಳು ಉದ್ದೇಶಪೂರ್ವಕವಾಗಿ ಮರೆಮಾಚಿವೆ. ಉದಾಹರಣೆಗೆ ಇತ್ತೀಚೆಗೆ ನಾನು ಕಂಡದ್ದನ್ನು ಹೇಳುತ್ತೇನೆ. ಮಧ್ಯವಯಸ್ಸಿನ ಮಹಿಳೆಯೊಬ್ಬರು, ತಮ್ಮ ಕ್ಷೇತ್ರದಲ್ಲಿ ಒಂದು ಪಕ್ಷದವರು ಒಂದಷ್ಟು ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ. ಹೀಗಾಗಿ ನಾವೆಲ್ಲಾ ಅದೇ ಪಕ್ಷಕ್ಕೇ ಮತ ಹಾಕುತ್ತೇವೆ ಎಂದು ಹೇಳಿದರು. ಇಂದಿನ ಜನತಂತ್ರದಲ್ಲಿ ಪಕ್ಷಗಳು ಮಾಡುವ ಇಂತಹ ಸ್ಟಂಟ್‌ಗೆ ಮುಗ್ಧ ಜನರು ಎಷ್ಟು ಸುಲಭವಾಗಿ ಬಲಿಯಾಗುತ್ತಾರೆ! ಅದೇ ಮಹಿಳೆಯ ಪುತ್ರ ಕಳೆದ ಐದು ವರ್ಷಗಳಿಂದ ರಾಜ್ಯ ಸರಕಾರಿ ಇಲಾಖೆಯಲ್ಲಿ ಗುತ್ತಿಗೆ ನೌಕರ. ಪ್ರತಿಯೊಬ್ಬರ ಹಕ್ಕಾದ ಕೆಲಸದ ಭದ್ರತೆಯನ್ನು ತಮ್ಮ ಮಗನಿಂದ ಕಸಿದುಕೊಂಡಿರುವ ವ್ಯವಸ್ಥೆಯ ಕ್ರೌರ್ಯವನ್ನು ಗುರುತಿಸದೆ ಯಾರೋ ಪುಢಾರಿ ಕೊಡುವ ಬಾಗಿನಕ್ಕೆ ತೃಪ್ತಳು ಈ ತಾಯಿ!

ಅಷ್ಟಕ್ಕೂ ಪ್ರಸಕ್ತ ಕರ್ನಾಟಕ ಚುನಾವಣೆಯಲ್ಲಿ ಮಾಧ್ಯಮಗಳಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಒಂದು ವಿಷಯವನ್ನು ಗಮನಿಸೋಣ. ಸಿದ್ದರಾಮಯ್ಯ ಮಾಂಸ ತಿಂದು ದೇವಸ್ಥಾನಕ್ಕೆ ಹೋದರು ಎನ್ನುವ ವಿಷಯ ಮಾಧ್ಯಮಗಳಲ್ಲಿ ದಿನಗಟ್ಟಲೆ ಚರ್ಚೆಗೆ ಒಳಗಾಯಿತು. ಸುಮ್ಮನೆ ಯೋಚನೆ ಮಾಡೋಣ. ನಮ್ಮ ದೇಶದಲ್ಲಿ ಪ್ರತಿನಿತ್ಯ ಸಾವಿರಾರು ದೇವಸ್ಥಾನಗಳಿಗೆ ಲಕ್ಷಾಂತರ ಜನ ಭೇಟಿ ಕೊಡುತ್ತಾರೆ. ಇವರೆಲ್ಲಾ ಮಾಂಸ ತಿಂದು ಬಂದಿದ್ದಾರೋ ಇಲ್ಲವೋ ಎಂದು ಅವರ ಹೊಟ್ಟೆ ಬಗೆದು ನೋಡಲು ಸಾಧ್ಯವೇ? ಸಿದ್ದರಾಮಯ್ಯ ನೈಜ ಹಿಂದೂ ಅಲ್ಲ ಎಂದೆಲ್ಲಾ ಪ್ರಚಾರ ಮಾಡಲಾಯಿತು. ಆಡಳಿತ ಪಕ್ಷವನ್ನು ಪ್ರಶ್ನೆ ಮಾಡಲು ನೂರಾರು ಗಹನ ವಿಚಾರಗಳಿರುವಾಗ ಪಕ್ಷಪಾತಿ ಮಾಧ್ಯಮ ಆಯ್ಕೆ ಮಾಡಿಕೊಳ್ಳುವುದು ಜನರನ್ನು ಭಾವನಾತ್ಮಕವಾಗಿ ತಲುಪಬಲ್ಲ ಇಂತಹ ವಿಚಾರಗಳನ್ನು.

share
ವೆಂಕಟೇಶ್, ಬೆಂಗಳೂರು
ವೆಂಕಟೇಶ್, ಬೆಂಗಳೂರು
Next Story
X