Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‍ನಿಂದ ಹಣ ಪಡೆದಿರುವ ಆರೋಪ...

ಕಾಂಗ್ರೆಸ್‍ನಿಂದ ಹಣ ಪಡೆದಿರುವ ಆರೋಪ ನಿರಾಧಾರ: ಶಾಸಕ ಬಿ.ಬಿ.ನಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ14 May 2018 5:08 PM IST
share
ಕಾಂಗ್ರೆಸ್‍ನಿಂದ ಹಣ ಪಡೆದಿರುವ ಆರೋಪ ನಿರಾಧಾರ: ಶಾಸಕ ಬಿ.ಬಿ.ನಿಂಗಯ್ಯ

ಚಿಕ್ಕಮಗಳೂರು, ಮೇ 14: ಮೂಡಿಗೆರೆ ಮೀಸಲು ಕ್ಷೇತ್ರದ ತನ್ನ 5 ವರ್ಷಗಳ ಶಾಸಕ ಸ್ಥಾನದ ಅವಧಿ ಮುಕ್ತಾಯವಾಗಿದೆ. ಈ ಅವಧಿಯಲ್ಲಿ ತಾನು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿದಿರುವ ಸಮಾಧಾನವಿದೆ. ಜೊತೆಗೆ ಚುನಾವಣಾ ಪೂರ್ವದಲ್ಲಿ ಜೆಡಿಎಸ್ ಪಕ್ಷದಿಂದ ಬಿಡುಗಡೆಯಾದ ಪ್ರಣಾಳಿಕೆಯಿಂದಾಗಿ ಕ್ಷೇತ್ರದಲ್ಲಿ ಚುನಾವಣೆ ಬಳಿಕ ತನ್ನ ಪರವಾಗಿ ವ್ಯಾಪಕ ಅಲೆ ಎದ್ದಿದೆ. ಆದರೂ ಚುನಾವಣಾ ಸಂದರ್ಭ ವಿರೋಧಿ ಪಕ್ಷಗಳ ಹಣ ಹೆಂಡ ಆಮಿಷದ ಮೂಲಕ ಮತದಾರರನ್ನು ಸೆಳೆದಿರುವುದು ಬೇಸರ ತಂದಿದೆ ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಬಿ.ಬಿ.ನಿಂಗಯ್ಯ ವಿಷಾದಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆಗೂ ಮುನ್ನ ತನ್ನ ವಿಜಯದ ಬಗ್ಗೆ ಎಲ್ಲೆಡೆ ಜನಾಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಚಲಿತರಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ತನ್ನ ವಿರುದ್ಧ ವ್ಯಾಪಕ ಅಪಪ್ರಚಾರ ಮಾಡಿದ್ದಾರೆ. ಹತಾಶೆಯಿಂದಾಗಿ ಚುನಾವಣೆ ಗೆಲ್ಲಲು ಎರಡೂ ಪಕ್ಷಗಳು ಹಣ ಹೆಂಡ ಹಂಚಿ ಚುನಾವಣೆ ಗೆಲ್ಲಲು ಹುನ್ನಾರ ನಡೆಸಿವೆ. ಆದರೆ ಈ ಆಮಿಷಗಳಿಗೆ ಮತದಾರರು ಕಿವಿಗೊಡದಿದ್ದಾಗ ಬಿ.ಬಿ.ನಿಂಗಯ್ಯ ಕಾಂಗ್ರೆಸ್ ಪಕ್ಷದವರಿಂದ ಹಣ ಪಡೆದಿದ್ದಾರೆಂದು ಕಾಂಗ್ರೆಸ್ ಪಕ್ಷದವರೇ ಚುನಾವಣೆ ಹಿಂದಿನ ದಿನ ಗುಲ್ಲೆಬ್ಬಿಸಿದ್ದಾರೆ. ಈ ಮೂಲಕ ಮತದಾರರ ಮನಸ್ಸನ್ನು ಬದಲಿಸುವ ಹುನ್ನಾರಕ್ಕೆ ಕಾಂಗ್ರೆಸ್ ಮುಖಂಡರು ಕೈ ಹಾಕಿದ್ದರು. ಆದರೆ ಈ ಆರೋಪದಲ್ಲಿ ಎಳ್ಳಷ್ಟು ಸತ್ಯವಿಲ್ಲ. ಗೆಲ್ಲುವ ಅವಕಾಶ ಇರುವ ಸಂದರ್ಭದಲ್ಲಿ ತನ್ನ ಸೋಲನ್ನು ತಾನೇ ಹೇಗೆ ಬಯಸಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.

ತನ್ನ ರಾಜಕೀಯ ಜೀವನದ ಉದ್ದಕ್ಕೂ ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ. ರಾಜಕೀಯಕ್ಕಾಗಿ ಬೇರೆಯವರಿಂದ ಹಣ ಪಡೆಯುವ ಉದ್ದೇಶ, ದುರ್ಬುದ್ಧಿ ತನಗಿಲ್ಲ ಎಂದ ಅವರು, ಚುನಾವಣೆಯಲ್ಲಿ ಸೋಲುವ ಸಲುವಾಗಿ ಹಣ ಪಡೆಯುತ್ತೇನೆಂಬುದು ಮೂರ್ಖತನದ ಆರೋಪ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ತನ್ನ ಸೋಲಿಗಾಗಿ ಮಾಡಿದ ಒಳ ಸಂಚು ಕೆಲಸ ಮಾಡಿಲ್ಲ. ಕ್ಷೇತ್ರದ ಜನತೆ ತನ್ನ ಅಭಿವೃದ್ಧಿ ಯೋಜನೆಗಳ ಬಗ್ಗೆ ಹಾಗೂ ಜೆಡಿಎಸ್ ಪಕ್ಷದ ಪ್ರಣಾಳಿಕೆ ಮತ್ತು ವರಿಷ್ಠರಲ್ಲಿನ ರಾಜ್ಯದ ಅಭಿವೃದ್ಧಿಯತ್ತ ಹೊಂದಿರುವ ಬದ್ಧತೆ ಮೆಚ್ಚಿ ತನಗೆ ಮತ ನೀಡಿದ್ದಾರೆ. ಹಾಗಾಗಿ ಈ ಬಾರಿಯೂ ನಾನೇ ಗೆಲ್ಲುತ್ತೇನೆ. ಜೆಡಿಎಸ್ ಪಕ್ಷ ರಾಜ್ಯಾಧಿಕಾರ ಪಡೆಯಲಿದೆ. ಕುಮಾರಸ್ವಾಮಿ ಸಿಎಂ ಆಗಲಿದ್ದಾರೆಂಬುದು ಮಂಗಳವಾರ ಸ್ಪಷ್ಟವಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಮಂಜಪ್ಪ, ಎಚ್.ಎಚ್.ದೇವರಾಜ್, ಲಕ್ಷ್ಮಣ್, ಹೊಲಗದ್ದೆ ಗಿರೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X