Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೆಹರೂ ಆರೆಸ್ಸೆಸ್ ಶಾಖಾ ಸಭೆಯಲ್ಲಿ...

ನೆಹರೂ ಆರೆಸ್ಸೆಸ್ ಶಾಖಾ ಸಭೆಯಲ್ಲಿ ಭಾಗವಹಿಸಿದ್ದರೆಂದು ಹೇಳಿದ ಫೋಟೋ ವೈರಲ್ ; ವಾಸ್ತವವೇನು ?

ವಾರ್ತಾಭಾರತಿವಾರ್ತಾಭಾರತಿ14 May 2018 5:31 PM IST
share
ನೆಹರೂ ಆರೆಸ್ಸೆಸ್ ಶಾಖಾ ಸಭೆಯಲ್ಲಿ ಭಾಗವಹಿಸಿದ್ದರೆಂದು ಹೇಳಿದ ಫೋಟೋ ವೈರಲ್ ; ವಾಸ್ತವವೇನು ?

ಹೊಸದಿಲ್ಲಿ,ಮೇ.14: ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಆರೆಸ್ಸೆಸ್ ಶಾಖಾ ಸಭೆಯೊಂದರಲ್ಲಿ ಭಾಗವಹಿಸಿದ್ದರೇ ? ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಅಭಿಮಾನಿಗಳ 'ಐ ಸಪೋರ್ಟ್ ದಾವಲ್' ಎಂಬ ಫೇಸ್ ಬುಕ್ ಪುಟದಲ್ಲಿನ ಪೋಸ್ಟ್ ಒಂದನ್ನು  ನಂಬುವುದಾದರೆ ಇದು ನಿಜ.

ಈ ಪುಟದಲ್ಲಿ ನೆಹರೂ ಅವರ ಫೋಟೋ ಒಂದನ್ನು ಪೋಸ್ಟ್ ಮಾಡಿ "ಈ ಫೋಟೋ ಬಹಳ ಕಷ್ಟದಿಂದ ದೊರಕಿದೆ. ಆರೆಸ್ಸೆಸ್ ಶಾಖಾವೊಂದರಲ್ಲಿ ನೆಹರೂಜಿ ನಿಂತ ಫೋಟೋ/ ನೆಹರೂಜಿ ಕೂಡ ಕೇಸರಿ ಉಗ್ರರಾಗಿದ್ದರೇ?'' ಎಂದು ಅದಕ್ಕೆ ಶೀರ್ಷಿಕೆ ನೀಡಲಾಗಿದೆ.

ಈ ಫೋಟೋದಲ್ಲಿ ನೆಹರೂ ಅವರು ಆರೆಸ್ಸೆಸ್ ಸಮವಸ್ತ್ರದಂತೆಯೇ ಶಾಟ್ರ್ಸ್, ಟೋಪಿ ಹಾಗೂ ಕೈಯ್ಯಲ್ಲಿ ಬೆತ್ತ ಹಿಡಿದಿದ್ದಾರೆ. ಮೇ 11ರಂದು ಅಪ್ ಲೋಡ್ ಮಾಡಲ್ಪಟ್ಟ ಈ ಪೋಸ್ಟ್ ಇಲ್ಲಿಯ ತನಕ 6800ಕ್ಕೂ ಅಧಿಕ ಬಾರಿ ಶೇರ್ ಆಗಿದೆ. ಇದೇ ಫೋಟೋವನ್ನು ಆರೆಸ್ಸೆಸ್ ಸ್ವಯಂಸೇವಕ್ ಫ್ಯಾನ್ಸ್ ಪುಟದಲ್ಲೂ ಪೋಸ್ಟ್ ಮಾಡಲಾಗಿದ್ದು ಹೀಗೆಂದು ಬರೆಯಲಾಗಿದೆ "ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಆರೆಸ್ಸೆಸ್ಸನ್ನು ದ್ವೇಷಿಸುತ್ತದೆ. ಆದರೆ ಪ್ಲೇಬಾಯ್ ನೆಹರೂ  ಕೂಡ ಒಂದು ಕಾಲದಲ್ಲಿ ಶಾಖಾದಲ್ಲಿದ್ದರು. ಆದರೆ ಇಲ್ಲಿ ಅವರಿಗೆ ನಿಲ್ಲಲಾಗಲಿಲ್ಲ. ಚಾಚಾ ಅವರಿಗೆ ಇಲ್ಲಿನ ನಿಯಮಗಳು ಬಹಳ ಕಠಿಣವಾಗಿ ಪರಿಣಮಿಸಿತ್ತು.''

ಸತ್ಯಾಂಶವೇನು ?

ಆ ಫೋಟೋದಲ್ಲಿ ಕಾಣಿಸುತ್ತಿರುವವರು ನೆಹರೂ. ಆದರೆ ಅದು ಆರೆಸ್ಸೆಸ್ ಶಾಖಾ ಆಗಿರಲಿಲ್ಲ. ಈ ಫೋಟೋವನ್ನು1939ರಲ್ಲಿ ಉತ್ತರ ಪ್ರದೇಶದ ನೈನಿಯಲ್ಲಿ ತೆಗೆಯಲಾಗಿತ್ತು. ಚಿತ್ರದಲ್ಲಿ  ನೆಹರೂ ಅವರು ಬಿಳಿ ಟೋಪಿ ಧರಿಸಿರುವುದು ಸ್ಪಷ್ಟ. ಆದರೆ ಆರೆಸ್ಸೆಸ್ 1925ರಲ್ಲಿ ಜಾರಿಗೊಳಿಸಿದ ಸಮವಸ್ತ್ರ ಸಂಹಿತೆಯಲ್ಲಿ ಅದರ ಟೋಪಿ ಕಪ್ಪು ಬಣ್ಣದ್ದಾಗಿದೆ.

ನ್ಯೂಸ್ 18 ವಾಹಿನಿ ಈ ಫೋಟೋ ಬಗ್ಗೆ ಡಿಸೆಂಬರ್ 2017ರಲ್ಲಿಯೇ ಮಾಹಿತಿ ಸಂಗ್ರಹಿಸಿದ್ದು ಅದರ ಪ್ರಕಾರ ನೆಹರೂ ಅವರು ಸೇವಾ ದಳ ಸಭೆಯೊಂದರಲ್ಲಿ ಭಾಗವಹಿಸಿದ್ದರು.

ಇದು ಕಾಂಗ್ರೆಸ್ಸಿನ ತಳಮಟ್ಟದ ಸಂಘಟನೆಯಾಗಿದೆ. 1924ರಲ್ಲಿ ಸ್ಥಾಪಿತವಾಗಿದ್ದ ಹಿಂದುಸ್ತಾನಿ ಸೇವಾ ದಳ ಬ್ರಿಟಿಷರ ವಿರುದ್ಧ ಹೋರಾಡುವ ಉದ್ದೇಶ ಹೊಂದಿತ್ತು. ನೆಹರೂ ಅವರು ಸೇವಾ ದಳ ಸಮವಸ್ತ್ರ ಧರಿಸಿರುವ ಹಲವಾರು ಚಿತ್ರಗಳು ಅಂತರ್ಜಾಲದಲ್ಲಿ ಲಭ್ಯವಿವೆ.

ಕೃಪೆ :altnews.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X