Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮಿಲ್ಲತ್ ಡೈರೆಕ್ಟರಿ...

ಬೆಂಗಳೂರು: ಮಿಲ್ಲತ್ ಡೈರೆಕ್ಟರಿ ಡಿಜಿಟಲೀಕರಣಕ್ಕೆ ರಹ್ಮಾನ್‌ಖಾನ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ14 May 2018 9:52 PM IST
share

ಬೆಂಗಳೂರು, ಮೇ 14: ಬೇದಾರೆ ಮಿಲ್ಲತ್ ಪಬ್ಲಿಕೇಷನ್ ಹೊರತರುತ್ತಿರುವ ಮಿಲ್ಲತ್ ಡೈರೆಕ್ಟರಿಯನ್ನು ಮುಂದಿನ ದಿನಗಳಲ್ಲಿ ಡಿಜಿಟಲೀಕರಣಗೊಳಿಸುವಂತೆ ಕೇಂದ್ರದ ಮಾಜಿ ಸಚಿವ ಡಾ.ಕೆ.ರಹ್ಮಾನ್‌ಖಾನ್ ಸಲಹೆ ನೀಡಿದ್ದಾರೆ.

ಸೋಮವಾರ ನಗರದ ದಾರೂಲ್ ಉಲೂಮ್ ಸಬೀಲುರ್ರಶಾದ್(ಅರೇಬಿಕ್ ಕಾಲೇಜು)ನಲ್ಲಿರುವ ಗ್ರಂಥಾಲಯ ಸಭಾಂಗಣದಲ್ಲಿ ‘ಮಿಲ್ಲತ್ ಡೈರೆಕ್ಟರಿ 2018-19’ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಮುದಾಯದ ಎಲ್ಲ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಐಎಎಸ್, ಕೆಎಎಸ್, ಐಪಿಎಸ್ ಅಧಿಕಾರಿಗಳು, ಪತ್ರಕರ್ತರು, ಮದ್ರಸಾಗಳು, ಮಸೀದಿಗಳು, ಅನಾಥಾಶ್ರಮ, ಆಸ್ಪತ್ರೆಗಳು, ರಾಜಕಾರಣಿಗಳು ಸೇರಿದಂತೆ ಎಲ್ಲರ ದೂರವಾಣಿ ಸಂಖ್ಯೆಗಳನ್ನು ಹೊಂದಿರುವ ಈ ಡೈರೆಕ್ಟರಿಯು ಮಾಹಿತಿಯ ಕಣಜವಾಗಿದೆ ಎಂದು ಅವರು ಹೇಳಿದರು.

ಕಳೆದ 13 ವರ್ಷಗಳಿಂದ ಹೊರ ಬರುತ್ತಿರುವ ಈ ಡೈರೆಕ್ಟರಿಯಲ್ಲಿ ಪ್ರತಿ ವರ್ಷ ಹೊಸ ಹೊಸ ಮಾಹಿತಿಗಳು ಸೇರ್ಪಡೆಯಾಗುತ್ತಿರುತ್ತದೆ. ಇಡೀ ರಾಜ್ಯದಲ್ಲಿ ಸಮುದಾಯಕ್ಕೆ ಸಂಬಂಧಿಸಿದ ಅಗತ್ಯ ಸಂಪರ್ಕ ಮಾಹಿತಿಗಳು ಇದರಲ್ಲಿ ಲಭ್ಯವಿದೆ ಎಂದು ರಹ್ಮಾನ್‌ಖಾನ್ ತಿಳಿಸಿದರು.

ಇಂದು ನಾವು ಸಂಪರ್ಕ ಕ್ರಾಂತಿಯ ಯುಗದಲ್ಲಿದ್ದೇವೆ. ಮನುಷ್ಯನ ಜೀವನ ಕ್ರಮ ಬದಲಾಗಿದ್ದು, ಯಾರ ಬಳಿಯೂ ಸಮಯವಿಲ್ಲದಂತಾಗಿದೆ. ಪ್ರತಿಯೊಂದು ಮಾಹಿತಿಯನ್ನು ಅಂತರ್ಜಾಲ ತಾಣ, ಮೊಬೈಲ್ ಮೂಲಕ ಪಡೆಯಲು ಜನರು ಉತ್ಸುಕರಾಗಿದ್ದಾರೆ. ಆದುದರಿಂದ, ಈ ಡೈರೆಕ್ಟರಿಯನ್ನು ಡಿಜಿಟಲೀಕರಣಗೊಳಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದರು.

ಈ ಬಾರಿಯ ಚುನಾವಣೆಯಲ್ಲಿ ಮುಸ್ಲಿಮರು ಭಾವನಾತ್ಮಕವಾಗಿ ಪಾಲ್ಗೊಂಡಿದ್ದಾರೆ. ಚುನಾವಣೆಯ ಫಲಿತಾಂಶ ಏನೇ ಬರಲಿ, ನಾವು ಅದನ್ನು ಒಪ್ಪಬೇಕು. ಈ ನಾಗರಿಕ ಸಮಾಜದ ಬಹುದೊಡ್ಡ ಭಾಗ ಮುಸ್ಲಿಮರಾಗಿದ್ದಾರೆ. ನಮ್ಮ ದೇಶವು ಹಲವು ಸಮಾಜ, ಸಮುದಾಯಗಳ ಗುಚ್ಛ. ನಮ್ಮ ಸಂವಿಧಾನವು ಈ ಎಲ್ಲ ಸಮಾಜಗಳನ್ನು ಒಂದುಗೂಡಿಸಿದೆ ಎಂದು ರಹ್ಮಾನ್‌ಖಾನ್ ಹೇಳಿದರು.

ಆದರೆ, ಕೆಲವು ದುಷ್ಟ ಶಕ್ತಿಗಳು ಈ ಐಕ್ಯತೆಗೆ ಭಂಗ ತರುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ. ನಾವು ಇಂತಹ ಪ್ರಯತ್ನಗಳಿಗೆ ತಡೆಯೊಡ್ಡುವ ಕೆಲಸ ಮಾಡಬೇಕು. ಈ ಚುನಾವಣೆಯಲ್ಲಿ ಒಂದು ನಿರ್ದಿಷ್ಟ ಪಕ್ಷದ ಮುಖಂಡರು ನಮ್ಮ ಸಮುದಾಯವನ್ನೆ ಗುರಿಯನ್ನಾಗಿಸಿಕೊಂಡು ಭಾಷಣಗಳನ್ನು ಮಾಡಿರುವುದನ್ನು ನಾವು ಕಂಡಿದ್ದೇವೆ ಎಂದು ಅವರು ತಿಳಿಸಿದರು.

ಆದುದರಿಂದ, ಮುಂದಿನ ದಿನಗಳಲ್ಲಿ ನಮ್ಮ ಸಮುದಾಯದ ಜನಪ್ರತಿನಿಧಿಗಳು, ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಪರಸ್ಪರ ಚರ್ಚೆ ಮಾಡಿ ಮುಂದುವರೆಯುವುದು ಉತ್ತಮ. ನಮ್ಮ ಸ್ವಾರ್ಥಕ್ಕಾಗಿ ಕೈಗೊಳ್ಳುವ ತೀರ್ಮಾನಗಳು ಭವಿಷ್ಯದಲ್ಲಿ ಸಮುದಾಯದ ಪಾಲಿಗೆ ಮಾರಕವಾಗಬಾರದು ಎಂಬ ಎಚ್ಚರಿಕೆಯನ್ನು ಸದಾ ಗಮನದಲ್ಲಿಟ್ಟುಕೊಳ್ಳಬೇಕು ಎಂದು ರಹ್ಮಾನ್‌ಖಾನ್ ಹೇಳಿದರು.

ನಾವು ನಮ್ಮ ಸ್ವಾರ್ಥವನ್ನು ಬದಿಗಿಟ್ಟು ದೇಶದ ಐಕ್ಯತೆ, ಸಮಗ್ರತೆ ಹಾಗೂ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು. ಯಾವುದೆ ಧರ್ಮ, ಸಮುದಾಯದವರಿರಲಿ, ಈ ಸಮಾಜದ ಭಾಗವಾಗಿಯೆ ಬದುಕಬೇಕು. ಸಮಾಜವನ್ನು ಬಿಟ್ಟು ನಾವು ಬದುಕಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಉಲಮಾ ಹಾಗೂ ರಾಜಕೀಯ ಮುಖಂಡರು ಮಾಡಬೇಕು ಎಂದು ಅವರು ಕರೆ ನೀಡಿದರು.

ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಯಾವ ಸಂದೇಶಗಳನ್ನು ನಾವು ಕಳುಹಿಸುತ್ತಿದ್ದೇವೆ ಎಂಬ ಕನಿಷ್ಠ ಅರಿವು ಕೆಲವೊಮ್ಮೆ ನಮಗಿರುವುದಿಲ್ಲ. ಒಂದು ಕ್ಷಣದಲ್ಲಿ ಆದ ಆಚಾರ್ತುಯದಿಂದ ನಾವು ಟೀಕೆಗಳಿಗೆ ಗುರಿಯಾಗಬೇಕಾಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರದ ಹೆಸರಿನಲ್ಲಿ ಸ್ವೇಚ್ಛಾಚಾರ ಮಾಡಬಾರದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಅಮೀರೆ ಶರೀಅತ್ ವೌಲಾನ ಸಗೀರ್‌ಅಹ್ಮದ್‌ಖಾನ್, ಡೈಲಿ ಪಾಸ್ಬಾನ್ ಪತ್ರಿಕೆಯ ಪ್ರಧಾನ ಸಂಪಾದಕ ಮುಹಮ್ಮದ್ ಉಬೇದುಲ್ಲಾ ಶರೀಫ್, ರಾಜ್ಯ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಡಾ.ಮುಹಮ್ಮದ್ ಯೂಸುಫ್, ಬೇದಾರೆ ಮಿಲ್ಲತ್ ಪಬ್ಲಿಕೇಷನ್ ಮುಖ್ಯಸ್ಥ ಅಬ್ದುಲ್ ಖಾಲಿಖ್, ಸೈಯ್ಯದ್ ಶಾಹಿದ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X