Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶುದ್ಧ ಗಂಗಾ ಯೋಜನೆಯ ಪಾಲನ ವರದಿ ಸಲ್ಲಿಸದ...

ಶುದ್ಧ ಗಂಗಾ ಯೋಜನೆಯ ಪಾಲನ ವರದಿ ಸಲ್ಲಿಸದ ಕೇಂದ್ರ ಸರಕಾರಕ್ಕೆ ಎನ್‌ಜಿಟಿ ತರಾಟೆ

ವಾರ್ತಾಭಾರತಿವಾರ್ತಾಭಾರತಿ15 May 2018 11:08 PM IST
share
ಶುದ್ಧ ಗಂಗಾ ಯೋಜನೆಯ ಪಾಲನ ವರದಿ ಸಲ್ಲಿಸದ ಕೇಂದ್ರ ಸರಕಾರಕ್ಕೆ ಎನ್‌ಜಿಟಿ ತರಾಟೆ

ಹೊಸದಿಲ್ಲಿ, ಮೇ 15: ಶುದ್ಧ ಗಂಗೆ ರಾಷ್ಟ್ರೀಯ ಯೋಜನೆಯಡಿ ಕೈಗೊಳ್ಳಲಾದ ಕ್ರಮಗಳ ಕುರಿತು ಪಾಲನ ವರದಿ ಸಲ್ಲಿಸದ ಕೇಂದ್ರ ಸರಕಾರ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳ ಸರಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ತೀವ್ರ ತರಾಟೆಗೆತ್ತಿಕೊಂಡಿದೆ.

ಶುದ್ಧ ಗಂಗಾ ಯೋಜನೆಯಡಿ ಗೋಮುಖ ನದಿಪಾತ್ರದಿಂದ ಉನ್ನಾವೊವರೆಗಿನ ಪ್ರದೇಶದಲ್ಲಿ ನದಿ ನೀರನ್ನು ಸ್ವಚ್ಛಗೊಳಿಸಲು ಇದುವರೆಗೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ವಿವರ ಸಲ್ಲಿಸಬೇಕೆಂದು ಎಪ್ರಿಲ್ 3ರಂದು ಆದೇಶ ನೀಡಿದ್ದರೂ ಈ ಆದೇಶವನ್ನು ಪಾಲಿಸಲಾಗಿಲ್ಲ ಎಂದು ಎನ್‌ಜಿಟಿಯ ಹಂಗಾಮಿ ಅಧ್ಯಕ್ಷ ನ್ಯಾ.ರಹೀಂ ನೇತೃತ್ವದ ನ್ಯಾಯಪೀಠ ಅಸಮಾಧಾನ ಸೂಚಿಸಿದೆ.

ಚಿಕಿತ್ಸಾ ಘಟಕದ ಸ್ಥಾಪನೆ ಸೇರಿದಂತೆ ಕೈಗೊಳ್ಳಲಾದ ಹಲವು ಕ್ರಮಗಳ ಬಗ್ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸುವಂತೆ ನಿಮಗೆ ತಿಳಿಸಲಾಗಿತ್ತು. ಇದುವರೆಗೆ ಏನು ಮಾಡಿದಿರಿ.. ಯಾಕೆ ಸೂಚನೆಯನ್ನು ಪಾಲಿಸಿಲ್ಲ . ನೀವು ನಡೆಸಿದ ಸಭೆಗಳು ಅಥವಾ ನಿಮ್ಮ ವಾದದ ಬಗ್ಗೆ ನಾವು ಮಾತನಾಡುತ್ತಿಲ್ಲ. ನಾವು ಪಾಲನಾ ವರದಿ ಸಲ್ಲಿಸುವಂತೆ ತಿಳಿಸಿದ ಆದೇಶದ ಬಗ್ಗೆ ಹೇಳುತ್ತಿದ್ದೇವೆ. ನಮಗೆ ವರದಿ ಬೇಕು . ಮೇ 23ರ ಒಳಗೆ ವರದಿ ಸಲ್ಲಿಸಿ ಎಂದು ನ್ಯಾಯಪೀಠ ಸೂಚಿಸಿತು.

ಜೊತೆಗೆ, ತನ್ನ ನಿರ್ದೇಶನವನ್ನು ಪಾಲಿಸಿರುವ ಬಗ್ಗೆ ವರದಿ ಸಲ್ಲಿಸುವಂತೆ ಚರ್ಮ ಹದಗೊಳಿಸುವ ಕೈಗಾರಿಕೆಗಳಿಗೆ ಸೂಚಿಸಿದ ನ್ಯಾಯಮಂಡಳಿ, ಮೇ 23ರ ಕಲಾಪದಲ್ಲಿ ಉನ್ನಾವೊದಿಂದ ಉತ್ತರಪ್ರದೇಶದ ಗಡಿವರೆಗಿನ ಗಂಗಾನದಿ ನೀರು ಶುದ್ಧೀಕರಣ ಪ್ರಕ್ರಿಯೆಯ ಬಗ್ಗೆ ಗಮನ ಹರಿಸಲಾಗುವುದು ಎಂದು ತಿಳಿಸಿತು. ಅಲ್ಲದೆ ಬಿಹಾರದಿಂದ ಬಂಗಾಲದವರೆಗಿನ ಪ್ರದೇಶದಲ್ಲಿ ಹರಿಯುವ ಗಂಗಾ ನದಿ ನೀರಿನ ಶುದ್ಧೀಕರಣ ಕಾರ್ಯದ ಕುರಿತ ದಾಖಲೆಗಳನ್ನು ಸಲ್ಲಿಸುವಂತೆ ಎನ್‌ಜಿಟಿಯ ಪೂರ್ವವಿಭಾಗದ ಪೀಠಕ್ಕೆ ಸೂಚಿಸಿತು. ಕಾಸ್‌ಗಂಜ್, ಬರೇಲಿ, ಕನೌಜ್ ಮತ್ತು ರಾಂಪುರದಲ್ಲಿ ನಿರ್ವಹಿಸುವ ಕಾರ್ಯದ ಯೋಜನಾ ವಿವರವನ್ನು ಈ ಹಿಂದೆಯೇ ಸಲ್ಲಿಸಿರುವುದಾಗಿ ಉ.ಪ್ರದೇಶ ಜಲನಿಗಮವು ಎನ್‌ಜಿಟಿಗೆ ತಿಳಿಸಿತ್ತು.

  ಕಳೆದ ಎರಡು ವರ್ಷಗಳಲ್ಲಿ ಗಂಗೆ ಶುದ್ಧೀಕರಣ ಕಾರ್ಯಕ್ಕೆ ಸರಕಾರ 7,000 ಕೋಟಿ ರೂ.ಗೂ ಅಧಿಕ ಮೊತ್ತದ ಹಣ ವ್ಯಯಿಸಿದ್ದರೂ, ಗಂಗಾ ನದಿಯ ನೀರು ಇನ್ನೂ ಶುದ್ಧವಾಗಿಲ್ಲ ಎಂದು ಎನ್‌ಜಿಟಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X