Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಪಂಜಾಬ್ ವಿರುದ್ಧ ಮುಂಬೈಗೆ...

ಇಂದು ಪಂಜಾಬ್ ವಿರುದ್ಧ ಮುಂಬೈಗೆ ಮಾಡು-ಮಡಿ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ16 May 2018 12:06 AM IST
share
ಇಂದು ಪಂಜಾಬ್ ವಿರುದ್ಧ ಮುಂಬೈಗೆ ಮಾಡು-ಮಡಿ ಪಂದ್ಯ

ಹೊಸದಿಲ್ಲಿ, ಮೇ 15: ಈ ವರ್ಷದ ಐಪಿಎಲ್ ಟೂರ್ನಿಯು ತುಂಬಾ ಸ್ಪರ್ಧಾತ್ಮಕವಾಗಿದ್ದು ಎಲ್ಲ ತಂಡಗಳು ಸ್ಥಿರ ಪ್ರದರ್ಶನ ನೀಡಲು ಪರದಾಡುತ್ತಿವೆ. ಇಲ್ಲಿ ತಪ್ಪು ಮಾಡಲು ಯಾವುದೇ ಅವಕಾಶವಿಲ್ಲ. ಸಣ್ಣ ತಪ್ಪು ಕೂಡ ದುಬಾರಿಯಾಗಬಹುದು. ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಸಾಕಷ್ಟು ಪಾಠ ಕಲಿತಿವೆ.

ಟೂರ್ನಿಯ ಅಂತ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಖ್ಯಾತಿ ಪಡೆದಿರುವ ಮುಂಬೈ ತಂಡ ಬುಧವಾರ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ಮುಂಬೈನ ಪ್ಲೇ-ಆಫ್ ತೇರ್ಗಡೆಯಾಗುವ ಅವಕಾಶ ಅತಂತ್ರವಾಗಿದೆ. ಪಂಜಾಬ್ ತಂಡ ಪ್ಲೇ-ಆಫ್‌ಗೆ ತೇರ್ಗಡೆಯಾಗಲು ಹೋರಾಟ ನಡೆಸುತ್ತಿದೆ. ಇನ್ನು ಎರಡು ಪಂದ್ಯಗಳನ್ನು ಆಡಲಿರುವ ಮುಂಬೈ 12 ಪಂದ್ಯಗಳಲ್ಲಿ ಒಟ್ಟು 10 ಅಂಕ ಗಳಿಸಿದೆ. ಪಂಜಾಬ್ ತಂಡ 12 ಪಂದ್ಯಗಳಲ್ಲಿ 12 ಅಂಕ ಗಳಿಸಿದೆ.

ಮುಂಬೈ ತಂಡ ಬುಧವಾರದ ಪಂದ್ಯದಲ್ಲಿ ಸೋತರೆ ಟೂರ್ನಿಯಲ್ಲಿ ಅದರ ಹೋರಾಟ ಕೊನೆಗೊಳ್ಳುತ್ತದೆ. ಮುಂಬೈ ತಂಡ ಮೊದಲ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋತಿದೆ. ಎಲ್ಲ ನಾಲ್ಕೂ ಪಂದ್ಯಗಳನ್ನು ಕೊನೆಯ ಓವರ್‌ನಲ್ಲಿ ಸೋತಿತ್ತು. ಮತ್ತೊಂದೆಡೆ, ಪಂಜಾಬ್ ತಂಡ ಟೂರ್ನಿಯ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಆದರೆ, ಕಳೆದ ಆರು ಪಂದ್ಯಗಳಲ್ಲಿ 5ರಲ್ಲಿ ಸೋತಿದ್ದು, ಮಧ್ಯಮ ಓವರ್‌ನಲ್ಲಿ ಕಳಪೆ ಪ್ರದರ್ಶನ ನೀಡಿದೆ.

ಮುಂಬೈ ತಂಡ ಉಳಿದೆರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕ ಗಳಿಸುತ್ತದೆ. ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಪ್ಲೇ-ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇನ್ನೆರಡು ಸ್ಥಾನಗಳು ಖಾಲಿ ಉಳಿದಿವೆ. ಈ ಎರಡು ಸ್ಥಾನಕ್ಕಾಗಿ ಐದು ತಂಡಗಳು ಸ್ಪರ್ಧೆಯಲ್ಲಿವೆ. ಮುಂಬೈ, ಪಂಜಾಬ್ ತಂಡವಲ್ಲದೆ, ಕೋಲ್ಕತಾ, ರಾಜಸ್ಥಾನ, ಬೆಂಗಳೂರು ತಂಡಗಳು ಅವಕಾಶಕ್ಕಾಗಿ ಕಾಯುತ್ತಿವೆ.

ರವಿವಾರ ನಡೆದ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೂರ್ಯಕುಮಾರ್ ಯಾದವ್ ಹಾಗೂ ಎವಿನ್ ಲೂವಿಸ್ ಮೊದಲ ವಿಕೆಟ್‌ಗೆ ವಿಕೆಟ್ ನಷ್ಟವಿಲ್ಲದೆ 87 ರನ್ ಗಳಿಸಿ ಉತ್ತಮ ಆರಂಭ ನೀಡಿದ್ದರು. ಟೂರ್ನಮೆಂಟ್‌ನಲ್ಲಿ ಉತ್ತಮ ಆರಂಭ ಪಡೆದಿದ್ದ ಮುಂಬೈ 168 ರನ್ ಗಳಿಸಿತ್ತು. ಆದರೆ, 7 ವಿಕೆಟ್‌ಗಳಿಂದ ಸೋಲುಂಡಿತ್ತು.

ಟೂರ್ನಮೆಂಟ್‌ನಲ್ಲಿ ಭರ್ಜರಿ ಆರಂಭ ಪಡೆದಿದ್ದ ಪಂಜಾಬ್ ತಂಡ ಟೂರ್ನಿಯ ಕೊನೆಯ ಹಂತದಲ್ಲಿ ತನ್ನ ಹಿಡಿತ ಕಳೆದುಕೊಂಡಿದೆ. ಪಂಜಾಬ್ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಹಾಟ್ ಫೇವರಿಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಮುಂಬೈ ತಂಡ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಎದುರಿಸಲಿದೆ.

 ಕಳೆದ ಬಾರಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಪಂದ್ಯ ರೋಚಕವಾಗಿ ಕೊನೆಗೊಂಡಿತ್ತು. 16 ಎಸೆತಗಳಲ್ಲಿ 31 ರನ್ ಅಗತ್ಯವಿದ್ದಾಗ ಕೃನಾಲ್ ಪಾಂಡ್ಯ(31ರನ್, 12 ಎಸೆತ)ಪಂಜಾಬ್ ಕೈಯಿಂದ ಪಂದ್ಯವನ್ನು ಕಸಿದುಕೊಂಡರು. ಮುಂಬೈ ಆರು ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X