Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಝಾದಲ್ಲಿ ಇಸ್ರೇಲಿ ಹತ್ಯಾಕಾಂಡ:...

ಗಾಝಾದಲ್ಲಿ ಇಸ್ರೇಲಿ ಹತ್ಯಾಕಾಂಡ: ಪಿಎಫ್‌ಐ ಖಂಡನೆ

ವಾರ್ತಾಭಾರತಿವಾರ್ತಾಭಾರತಿ16 May 2018 6:03 PM IST
share

ಮಂಗಳೂರು, ಮೇ 16: ಗಾಝಾದಲ್ಲಿ ಇಸ್ರೇಲಿ ಸೇನೆಯು ಫೆಲೆಸ್ತೀನ್ ಜನರ ವಿರುದ್ಧ ನಡೆಸುತ್ತಿರುವ ಕ್ರೂರ ಹಿಂಸೆಯನ್ನು ಪಿಎಫ್‌ಐ ಅಧ್ಯಕ್ಷ ಇ. ಅಬೂಬಕರ್ ಹೇಳಿಕೆಯೊಂದರಲ್ಲಿ ತೀವ್ರವಾಗಿ ಖಂಡಿಸಿದ್ದಾರೆ.

ಮುಗ್ಧ ಫೆಲೆಸ್ತೀನಿಯರನ್ನು ಸಾಮೂಹಿಕ ಹತ್ಯೆಗೈಯ್ಯಲಾಗುತ್ತಿದೆಯಲ್ಲದೆ ಅವರ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ. ಈ ಮಧ್ಯೆ ಅಮೆರಿಕವು ಹಲವು ದಶಕಗಳಿಂದ ಇಸ್ರೇಲ್‌ಗೆ ಆರ್ಥಿಕ ಹಾಗೂ ಸೇನಾ ನೆರವನ್ನು ನೀಡುತ್ತಾ ಬಂದಿದೆ. ಇಸ್ರೇಲ್ ವಿರುದ್ಧ ಪ್ರತಿಭಟಿಸಲು ಗಾಝಾದಲ್ಲಿ ಒಟ್ಟುಗೂಡಿದಂತಹ ಫೆಲೆಸ್ತೀನಿಯರ ಮೇಲೆ ಇಸ್ರೇಲಿ ಸೈನ್ಯವು ಗುಂಡಿನ ದಾಳಿ ನಡೆಸಿದ್ದು, ಮಹಿಳೆಯರು ಮಕ್ಕಳು ಸೇರಿದಂತೆ 60 ಮಂದಿ ಮೃತಪಟ್ಟಿದ್ದಾರೆ. ಸುಮಾರು 2,000 ಮಂದಿ ಗಾಯಗೊಂಡಿದ್ದಾರೆ. ಪ್ರತಿಭಟನಕಾರರಿಂದ ಇಸ್ರೇಲ್‌ಗೆ ಯಾವುದೇ ನಷ್ಟ ಸಂಭವಿಸಿಲ್ಲದಿದ್ದರೂ ಎಂದಿನಂತೆ ಈ ಬಾರಿ ಕೂಡ ಇಸ್ರೇಲ್ ಸ್ವರಕ್ಷಣೆ ಎಂದು ಕರೆಯುವ ಮೂಲಕ ಹತ್ಯಾಕಾಂಡವನ್ನು ಸಮರ್ಥಿಸಿಕೊಂಡಿದೆ.

ವಾಸ್ತವದಲ್ಲಿ ಇಸ್ರೇಲ್, ಸಹಿಷ್ಣು ಫೆಲೆಸ್ತೀನಿಯರ ಯಾವುದೇ ಹೋರಾಟಗಳನ್ನು ಸಹಿಸುವುದಿಲ್ಲ ಹಾಗೂ ತಾನು ನಿಯಂತ್ರಣ ಹೊಂದಿರುವ ಕಡೆಗಳಲ್ಲಿ ಅವರನ್ನು ಬಹಿರಂಗವಾಗಿ ಬಂದೀಖಾನೆಯಲ್ಲಿರುವಂತೆ ನಿರ್ಬಂಧಿಸುತ್ತಿದೆ. ಎಲ್ಲಾ ಕಡೆಗಳಿಂದಲೂ ಫೆಲೆಸ್ತೀನಿಯರನ್ನು ಮುತ್ತಿಗೆ ಹಾಕುತ್ತಾ ಅವರನ್ನು ಸಂಕಷ್ಟಕ್ಕೊಳಪಡಿಸುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ.

ತನ್ನ ದೂತವಾಸವನ್ನು ಟೆಲ್‌ಈವ್‌ನಿಂದ ಜೆರುಸಲೇಂಗೆ ಸ್ಥಳಾಂತರಿಸುವ ಅಮೆರಿಕಾದ ನಿರ್ಧಾರ ಕೂಡಾ ಸರಿಯಲ್ಲ. ವಿಶೇಷವಾಗಿ ಇದು ಇಸ್ರೇಲ್ ಮತ್ತು ಫೆಲೆಸ್ತೀನ್ ನಡುನ ಶಾಂತಿ ಮಾತುಕತೆ ನಡೆಸುವ ಮಧ್ಯವರ್ತಿ ದೇಶ ಎಂದು ಸ್ವತಃ ಪ್ರಸ್ತುತಪಡಿಸುತ್ತಿರುವಾಗ, ಇದು ಫೆಲೆಸ್ತೀನಿಯರಿಗೆ ಮತ್ತೊಂದು ಅವಮಾನಕಾರಿ ದ್ರೋಹವಾಗಿದೆ. ಅಲ್ಲದೆ ಇದು ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ ನಿರ್ಣಯಗಳನ್ನು ಕಡೆಗಣಿಸುವ ಮುಕ್ತ ಪ್ರದರ್ಶನವಾಗಿ ಗೋಚರಿಸುತ್ತಿದೆ. ಇದರಿಂದಾಗಿ ಈ ಪ್ರದೇಶದಲ್ಲಿ ಈಗಾಗಲೇ ಇರುವ ಅಸ್ಥಿರ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಲಿದೆ ಎಂದು ಇ.ಅಬೂಬಕರ್ ಹೇಳಿದ್ದಾರೆ.

ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಸಮುದಾಯ ಇಸ್ರೇಲ್ ನಡೆಸುತ್ತಿರುವ ಅನ್ಯಾಯ ಹಾಗೂ ಮಾನವಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿಗೂಡಿಸಬೇಕು ಮತ್ತು ಫೆಲೆಸ್ತೀನಿಯರ ಹಕ್ಕು ಮತ್ತು ಘನತೆಯನ್ನು ಪುನಃಸ್ಥಾಪಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ವಿಶ್ವದ ದೇಶಗಳು ಮುಂದಾಗಬೇಕು ಎಂದು ಪಿಎಫ್‌ಐ ಆಗ್ರಹಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X