Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್- ಜೆಡಿಎಸ್ ಚುನಾವಣಾ ಪೂರ್ವ...

ಕಾಂಗ್ರೆಸ್- ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದರೆ ಏನಾಗುತ್ತಿತ್ತು ?

ವಾರ್ತಾಭಾರತಿವಾರ್ತಾಭಾರತಿ17 May 2018 10:34 AM IST
share
ಕಾಂಗ್ರೆಸ್- ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದರೆ ಏನಾಗುತ್ತಿತ್ತು ?

ಬೆಂಗಳೂರು, ಮೇ 17: ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಅತಂತ್ರ ವಿಧಾನಸಭೆ ರಚನೆಯಾಗಿರುವ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಬಿರುಸಿನ ರಾಜಕೀಯ ಚಟುವಟಿಕೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಸರ್ಕಾರ ರಚಿಸುವಂತೆ ರಾಜ್ಯಪಾಲರು ನೀಡಿರುವ ಆಹ್ವಾನ ವಿವಾದಕ್ಕೆ ಕಾರಣವಾಗಿದೆ. ಆದರೆ ಫಲಿತಾಂಶ ಬಳಿಕ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್, ಚುನಾವಣಾಪೂರ್ವದಲ್ಲೇ ಮೈತ್ರಿ ಮಾಡಿಕೊಂಡಿದ್ದರೆ ರಾಜ್ಯ ವಿಧಾನಸಭೆಯ ಫಲಿತಾಂಶ ಏನಾಗುತ್ತಿತ್ತು ಗೊತ್ತೇ?

ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದರೆ, ಮೈತ್ರಿಕೂಟ 151 ಸ್ಥಾನಗಳನ್ನು ಗೆಲ್ಲುತ್ತಿತ್ತು ಹಾಗೂ ಬಿಜೆಪಿ 69 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿತ್ತು ಎಂಬ ಕುತೂಹಲಕರ ಅಂಶ, ಅಂಕಿ ಅಂಶಗಳ ವಿಶ್ಲೇಷಣೆಯಿಂದ ತಿಳಿದುಬಂದಿದೆ. ಇನ್ನೂ ಕುತೂಹಲದ ಅಂಶವೆಂದರೆ ಇದೇ ಪ್ರವೃತ್ತಿ ಮುಂದುವರಿದರೆ, ಮುಂದಿನ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಬಿಜೆಪಿಗೆ ಭಾರಿ ಹೊಡೆತ ನೀಡಲಿದೆ. ಪ್ರಸ್ತುತ ಅಂಕಿ ಅಂಶಗಳ ಪ್ರಕಾರ, ಈ ಮೈತ್ರಿಕೂಟ ಮುಂದುವರಿದರೆ ಬಿಜೆಪಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ, 7ಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ. ಕಳೆದ ಬಾರಿ ಬಿಜೆಪಿ 17 ಸ್ಥಾನ ಗೆದ್ದಿತ್ತು. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಲ್ಲಿ ಕಾಂಗ್ರೆಸ್ ಸ್ಥಾನಗಳ ಸಂಖ್ಯೆ 9 ರಿಂದ 17ಕ್ಕೆ ಏರಲಿದೆ. ನಾಲ್ಕು ಸ್ಥಾನಗಳು ಜೆಡಿಎಸ್ ಪಾಲಾಗಲಿವೆ.

ವಿರೋಧ ಪಕ್ಷಗಳು ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದರೆ, ಕಾಂಗ್ರೆಸ್ 78 ಸ್ಥಾನದ ಬದಲಾಗಿ 99 ಸ್ಥಾನಗಳನ್ನು ಬಗಲಿಗೆ ಹಾಕಿಕೊಳ್ಳುತ್ತಿತ್ತು ಹಾಗೂ ಜೆಡಿಎಸ್ 37ರ ಬದಲಾಗಿ 51 ಸ್ಥಾನಗಳಲ್ಲಿ ಜಯ ಗಳಿಸುತ್ತಿತ್ತು. ಆದರೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡರೂ, ಜೆಡಿಎಸ್ ಸ್ಥಾನಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇಲ್ಲ. ಅದು ಹಾಲಿ ಇರುವ ಹಾಸನ, ಮಂಡ್ಯ, ತುಮಕೂರು ಮತ್ತು ಕೋಲಾರ ಕ್ಷೇತ್ರಕ್ಕೇ ಸೀಮಿತವಾಗುತ್ತದೆ. ಆದರೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಲ್ಲಿ ಕಾಂಗ್ರೆಸ್ ಪಕ್ಷ ಚಿಕ್ಕೋಡಿ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಮತ್ತು ಚಿತ್ರದುರ್ಗ ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಪಡೆಯಬಹುದಾಗಿದೆ. ಆದರೆ ಬಿಜೆಪಿಗೆ ಇಂಥ ಮೈತ್ರಿ ಏರ್ಪಟ್ಟರೂ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿನ ಬಿಜೆಪಿ ಪ್ರಾಬಲ್ಯಕ್ಕೆ ತಡೆಯಾಗದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X