Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 19ರಂದು ಉಳ್ಳಾಲ ಬಂಟರ ಭವನ ಉದ್ಘಾಟನೆ

ಮೇ 19ರಂದು ಉಳ್ಳಾಲ ಬಂಟರ ಭವನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ17 May 2018 8:45 PM IST
share
ಮೇ 19ರಂದು ಉಳ್ಳಾಲ ಬಂಟರ ಭವನ ಉದ್ಘಾಟನೆ

ಕೊಣಾಜೆ, ಮೇ 17: ಕೊಣಾಜೆ ಗ್ರಾಮದ ಅಸೈಗೋಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಉಳ್ಳಾಲ ಬಂಟರ ಭವನ’ ದ ಉದ್ಘಾಟನೆ ಮೇ. 19ರಂದು ಬೆಳಗ್ಗೆ 10.30ಕ್ಕೆ ನಡೆಯಲಿದ್ದು, ಮೇ 20ರಂದು ‘ಉಳ್ಳಾಲ ಬಂಟೋತ್ಸವ‘ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿದೆ.

ಕೊಣಾಜೆ ಅಸೈಗೋಳಿಯಲ್ಲಿರುವ ಉಳ್ಳಾಲ ಬಂಟರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಂಟರ ಸಂಘ ಉಳ್ಳಾಲ ವಲಯದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು ಮಾತನಾಡಿ ಕಳೆದ 18 ವರ್ಷಗಳಿಂದ ಬಂಟರ ಸಂಘ ಉಳ್ಳಾಲ ವಲಯ ಮತ್ತು ಅದರ ಸಹ ಸಂಘಟನೆಗಳು ಸಂಘಟನೆಯೊಂದಿಗೆ ಶೈಕ್ಷಣಿಕ ಸಹಕಾರ, ಆರೋಗ್ಯ, ಹಾಗೂ ಆರ್ಥಿಕ ಸಬಲೀಕರಣದೊಂದಿಗೆ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ.

ಸಂಘದ ಧ್ಯೇಯೋದ್ಧೇಶಗಳಲ್ಲಿ ಒಂದಾಗಿರುವ ಸಮಾಜಿಕ ಚಟುವಟಿಕೆಯ ಅಂಗವಾಗಿ ಸಮಾಜಕ್ಕೆ ಸಹಕಾರ ಕೊಡುವ ನಿಟ್ಟಿನಲ್ಲಿ ಸಂಘದಲ್ಲಿ ಅಧಿಕಾರ ನಡೆಸಿದ್ದ ಎಲ್ಲಾ ಅಧ್ಯಕ್ಷರು ಪ್ರಯತ್ನ ಪಟ್ಟಿದ್ದು, ಈ ಯೋಜನೆಯ ಅಂಗವಾಗಿ 20 ಸೆಂಟ್ಸ್ ಜಾಗದಲ್ಲಿ ಸುಸಜ್ಜಿತ ಬಂಟರ ಭವನ ನಿರ್ಮಾಣಕ್ಕೆ ಪ್ರಾರಂಬಿಸಿ ಇದೀಗ ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದು, ಮೇ. 19ರಂದು ಬೆಳಗ್ಗೆ ಮುಂಬೈ ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಪಯ್ಯಡೆ ಬಂಟರ ಭವನವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬಂಟರ ಸಂಘ ಉಳ್ಳಾಲ ವಲಯ ಕಟ್ಟಡ ಸಮಿತಿ ಅಧ್ಯಕ್ಷ ಬಿ. ವಿವೇಕ್ ಶೆಟ್ಟಿ ಬೊಲ್ಯಗುತ್ತು ವಹಿಸಲಿದ್ದಾರೆ. ನಾಮಫಲಕ ಅನಾವರಣವನ್ನು ಮಂಗಳೂರು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ನೆರವೇರಿಸಲಿದ್ದು, ಮಂಗಳೂರಿನ ಶ್ರೀ ದೇವಿ ಎಜ್ಯಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಬಂಟೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಬಾಲಿವುಡ್ ಚಲನಚಿತ್ರ ನಟ ಸುನಿಲ್ ಶೆಟ್ಟಿ ಸಂಘದ ಲಾಂಛನ ಬಿಡುಗಡೆ ಮಾಡಲಿದ್ದು, ಪುಣೆಯ ಉದ್ಯಮಿ ಜಗನ್ನಾಥ ಶೆಟ್ಟಿ ಪುಣೆ ಭೋಜನ ಶಾಲೆಯನ್ನು ಉದ್ಘಾಟಿಸಲಿದ್ದು, ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ, ಸಂಜೆ 5.30ಕ್ಕೆ ವಿವಿಧ ಜಾತಿ ಸಮುದಾಯಗಳ ಪ್ರಮುಖರ ಸಮಾಗಮವಾದ ತುಳುವೆರೆ ಕೂಟ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಕಾರ್ಯಕ್ರಮದ ಎರಡನೇ ದಿನವಾದ ಮೇ. 20ರಂದು ಬೆಳಗ್ಗೆ 9.30ಕ್ಕೆ ತುಳು ಬದುಕು, ಚರಿತ್ರೆ, ಕಥೆ ನಡವಳಿಕೆಯ ‘ಪೆರ್ಮೆದ ತುಳುವೆರ್’ ವಿಷಯದಲ್ಲಿ ನಡೆಯುವ ಕಲೋತ್ಸವ ಸ್ಪರ್ಧೆ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ನೆರವೇರಿಸಲಿದ್ದು, ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಜಿತೇಂದ್ರ ಶೆಟ್ಟಿ ತಿಳಿಸಿದರು.

ಉಳ್ಳಾಲ ಬಂಟರ ಭವನ ನಿರ್ಮಾಣದ ರುವಾರಿ ಹಾಗೂ ಕಟ್ಟಡ ಸಮಿತಿ ಅಧ್ಯಕ್ಷ ಅಧ್ಯಕ್ಷ ಬಿ. ವಿವೇಕ್ ಶೆಟ್ಟಿ ಬೊಲ್ಯಗುತ್ತು ಮಾತನಾಡಿ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಬಂಟರ ಸಂಘ ಅತ್ಯಂತ ಬಲಿಷ್ಠ ಸಮುದಾಯವಾಗಿದ್ದು ಮಾತೃ ಸಂಘ 100 ವರ್ಷವನ್ನು ಪೂರೈಸಿದ್ದು, ಮುಂಬಯಿ ಸೇರಿದಂತೆ ದೇಶದ ವಿವಿದೆಡೆ ಇರುವ ಬಂಟರ ಸಂಘಗಳು ಹಲವಾರು ವರ್ಷಗಳಿಂದ ಸಂಘಟಿತವಾಗಿದ್ದು, ಉಳ್ಳಾಲ ವಲಯದಲ್ಲಿ ನೂತನ ಸಭಾಂಗಣ ನಿರ್ಮಾಣ ಮಾಡುವಲ್ಲಿ ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ.

ಸುಸಜ್ಜಿತ ಬಂಟರ ಭವನ : ಅಸೈಗೋಳಿಯ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾಗಿರುವ ಉಳ್ಳಾಲ ಬಂಟರ ಭವನದ ಸುಸಜ್ಜಿತ ಹವಾನಿಯಂತ್ರಿತ 700 ಆಸನಗಳಿರುವ ಸಭಾಂಗಣವಾಗಿದ್ದು, ವಿಶಾಲವಾದ ಪಾಕಶಾಲೆ, ಎಂಟುನೂರು ಆಸನಗಳಿರುವ ‘ಬಂಟ್ಸ್ ಗ್ಯಾಲರಿ’ಯನ್ನು ಹೊಂದಿದ್ದು ವಿಶಿಷ್ಟವಾದ ವಾಸ್ತುವಿನ್ಯಾಸದೊಂದಿಗೆ ನಿರ್ಮಾಣವಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಟ್ಟಡ ಸಮಿತಿಯ ಗೌರವಾಧ್ಯಕ್ಷ ರಘುರಾಮ ಕಾಜವ ಪಟ್ಟೋರಿ, ಪ್ರಧಾನ ಕಾರ್ಯದರ್ಶಿ ಕೆ.ರವೀಂದ್ರ ರೈ ಕಲ್ಲಿಮಾರು, ಕೋಶಾಧಿಕಾರಿ ಸಂಜೀವ ಶೆಟ್ಟಿ ಪಡ್ಯಾರಮನೆ, ಬಂಟರ ಸಂಘ ಉಳ್ಳಾಲ ವಲಯದ ಕೋಶಾಧಿಕಾರಿ ಪುರುಷೋತ್ತಮ ಮಾಣಾ, ಸಂಘಟನಾ ಕಾರ್ಯದರ್ಶಿ ಜಗದೀಶ್ ರೈ ಬೆಳ್ಮ ಹೊಸಮನೆ, ಜೊತೆ ಕಾರ್ಯದರ್ಶಿ ನಾರಾಯಣ ರೈ ಕಕ್ಕೆಮಜಲು, ಯುವ ವಿಭಾಗದ ಅಧ್ಯಕ್ಷ ಅಶೋಕ್ ರೈ ಮಡ್ಯಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X