ಮಿಜಾರು: ಕಾರುಗಳ ಮುಖಾಮುಖಿ ಢಿಕ್ಕಿ ; ಚಾಲಕ ಮೃತ್ಯು

ಮೂಡುಬಿದಿರೆ, ಮೇ 17: ಮಾರುತಿ 800 ಕಾರಿಗೆ ಶಿಪ್ಟ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮಾರುತಿ ಕಾರಿನ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಗುರುವಾರ ಸಂಜೆ ಮಿಜಾರು ಮೈಟ್ ಕಾಲೇಜು ಬಳಿ ನಡೆದಿದೆ.
ಮೂಡುಪೆರಾರ ನಿವಾಸಿ ಶಿವಾನಂದ ಶೆಟ್ಟಿ (65) ಮೃತರು ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಸಂಪಿಗೆ ನಿವಾಸಿ ಕಲಾವಿದ ಲೊಕೇಶ್ ಎಂಬವರು ತನ್ನ ಶಿಪ್ಟ್ ಕಾರಿನಲ್ಲಿ ಮೂಡುಬಿದಿರೆಯಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಸಂದರ್ಭ ಮಿಜಾರಿನ ಬಳಿ ನಿಯಂತ್ರಣ ತಪ್ಪಿದ ಕಾರು ಮಂಗಳೂರು ಕಡೆಯಿಂದ ಮೂಡುಬಿದಿರೆಯತ್ತ ಹೋಗುತ್ತಿದ್ದ ಶಿವಾನಂದ ಶೆಟ್ಟಿಯವರ ಕಾರಿಗೆ ಢಿಕ್ಕಿ ಹೊಡೆದಿದ್ದು, ಘಟನೆಯಿಂದ ಶಿವಾನಂದ ಶೆಟ್ಟಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story