Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ: ಉಯ್ಘರ್ ಮುಸ್ಲಿಮರ ಮೇಲೆ...

ಚೀನಾ: ಉಯ್ಘರ್ ಮುಸ್ಲಿಮರ ಮೇಲೆ ನಿಯಂತ್ರಾಣಕ್ಕಾಗಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರಿಂದ ‘ಮನೆ ವಾಸ್ತವ್ಯ’

ವಾರ್ತಾಭಾರತಿವಾರ್ತಾಭಾರತಿ17 May 2018 10:56 PM IST
share
ಚೀನಾ: ಉಯ್ಘರ್ ಮುಸ್ಲಿಮರ ಮೇಲೆ ನಿಯಂತ್ರಾಣಕ್ಕಾಗಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರಿಂದ ‘ಮನೆ ವಾಸ್ತವ್ಯ’

ಬೀಜಿಂಗ್, ಮೇ 17: ಕ್ಸಿನ್‌ಜಿಯಾಂಗ್ ಪ್ರಾಂತದಲ್ಲಿ ಇರುವ ಮುಸ್ಲಿಮರ ಕುರಿತಂತೆ ಚೀನಾ ಅನುಸರಿಸುತ್ತಿರುವ ಕಠಿಣ ನಿಲುವು ರಮಝಾನ್ ತಿಂಗಳ ಅವಧಿಯಲ್ಲಿ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ವ್ಯಕ್ತವಾಗಿವೆ.

ಈ ಪ್ರಾಂತದಲ್ಲಿನ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯಗಳ ಮೇಲೆ ಸರಕಾರ ಇಡುತ್ತಿರುವ ನಿಗಾ ‘ಆಕ್ರಮಣ’ ಎನ್ನುವಷ್ಟರ ಮಟ್ಟಿಗೆ ಹೋಗಿವೆ ಎಂದು ಒಂದು ವರದಿ ಹೇಳಿದರೆ, ಹಲವು ಸಾವಿರ ಮುಸ್ಲಿಮರನ್ನು ‘ಮರುಶಿಕ್ಷಣ ಶಿಬಿರ’ಗಳಲ್ಲಿ ಕೂಡಿ ಹಾಕಲಾಗಿದೆ ಎಂದು ಇನ್ನೊಂದು ವರದಿ ಹೇಳಿದೆ.

 ‘ಸಾಮಾಜಿಕ ಸ್ಥಿರತೆಯನ್ನು ರಕ್ಷಿಸುವ’ ಉದ್ದೇಶದ ಪ್ರಸಕ್ತ ಕಾರ್ಯಕ್ರಮವೊಂದರ ಪ್ರಕಾರ, ಚೀನಾ ಕಮ್ಯುನಿಸ್ಟ್ ಪಕ್ಷದ ಸಾವಿರಾರು ಕಾರ್ಯಕರ್ತರಿಗೆ ಕ್ಸಿನ್‌ಜಿಯಾಂಗ್ ಉಯ್ಘರ್ ಸ್ವಾಯತ್ತ ಪ್ರದೇಶ (ಎಕ್ಸ್‌ಯುಎಆರ್)ದಲ್ಲಿರುವ ಮುಸ್ಲಿಮ್ ಉಯ್ಘರ್ ಕುಟುಂಬಗಳ ಜೊತೆ ‘ಮನೆ ವಾಸ್ತವ್ಯ’ ಮಾಡುವ ಹೊಣೆಯನ್ನು ವಹಿಸಲಾಗಿದೆ.

  ‘‘ಈ ಮನೆ ವಾಸ್ತವ್ಯಗಳ ಸಂದರ್ಭದಲ್ಲಿ, ಈ ಕುಟುಂಬಗಳು ತಮ್ಮ ಬದುಕು ಮತ್ತು ರಾಜಕೀಯ ನಿಲುವುಗಳನ್ನು ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರಿಗೆ ತಿಳಿಸಬೇಕಾಗುತ್ತದೆ ಹಾಗೂ ಅವರಿಗೆ ರಾಜಕೀಯ ಸಿದ್ಧಾಂತಗಳ ಮರುಬೋಧನೆ ಮಾಡಲಾಗುತ್ತದೆ’’ ಎಂದು ಈ ವಾರ ಬಿಡುಗಡೆ ಮಾಡಿದ ವರದಿಯೊಂದರಲ್ಲಿ ‘ಹ್ಯೂಮನ್ ರೈಟ್ಸ್ ವಾಚ್’ ಹೇಳಿದೆ.

 ‘‘ಕ್ಸಿನ್‌ಜಿಯಾಂಗ್ ಪ್ರಾಂತದಾದ್ಯಂತ ಇರುವ ಮುಸ್ಲಿಮ್ ಕುಟುಂಬಗಳು ಈಗ ತಮ್ಮದೇ ಮನೆಗಳಲ್ಲಿ ಅಕ್ಷರಶಃ ಸರಕಾರದ ಕಣ್ಗಾವಲಿನಲ್ಲಿ ತಿನ್ನುತ್ತಿವೆ ಹಾಗೂ ಮಲಗುತ್ತಿವೆ. ಈ ಅಭಿಯಾನವು ಕ್ಸಿನ್‌ಜಿಯಾಂಗ್‌ನಲ್ಲಿನ ದೈನಂದಿನ ಬದುಕಿನ ಮೇಲಿನ ದಾಳಿಯಾಗಿದೆ’’ ಎಂದು ವಾಚ್‌ನ ಚೀನಾ ಸಂಶೋಧಕಿ ಮಾಯಾ ವಾಂಗ್ ಹೇಳಿದ್ದಾರೆ.

 ‘‘ನಿಯಮಿತವಾಗಿ ಜನರನ್ನು ಭೇಟಿಯಾಗಿ ಸಮೀಕ್ಷೆ ಮಾಡುವುದಕ್ಕಾಗಿ, ಕ್ಸಿನ್‌ಜಿಯಾಂಗ್ ಅಧಿಕಾರಿಗಳು 2014ರಿಂದ ಸರಕಾರಿ ಸಂಸ್ಥೆಗಳ 2 ಲಕ್ಷಕ್ಕೂ ಅಧಿಕ ಸಿಬ್ಬಂದಿಯನ್ನು ಮುಸ್ಲಿಮರ ಮನೆಗಳಿಗೆ ಕಳುಹಿಸಿದ್ದಾರೆ. ಸಾಮಾಜಿಕ ಸ್ಥಿರತೆಯನ್ನು ಕಾಯ್ದುಕೊಳ್ಳುವುದಕ್ಕಾಗಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ’’ ಎಂದು ಹ್ಯೂಮನ್ ರೈಟ್ಸ್ ವಾಚ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X