Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶ...

ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶ ರವಾನೆ: ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ18 May 2018 12:32 PM IST
share
ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶ ರವಾನೆ: ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಮಂಗಳೂರು, ಮೇ 18: ಕೆಲವು ವರ್ಷಗಳ ಹಿಂದೆ ಚರ್ಚ್‌ಗಳ ಮೇಲೆ ದುಷ್ಕರ್ಮಿಗಳು ನಡೆಸಿದ ದಾಂಧಲೆಯ ಚಿತ್ರವನ್ನು ಮುಂದಿಟ್ಟುಕೊಂಡು ನಿನ್ನೆ ಮೊನ್ನೆ ನಡೆದಿದೆ ಎಂದು ಬಿಂಬಿಸಿ ಕೆಲವರು ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶ ರವಾನೆ ಮಾಡಿರುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಇದೀಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ವಿಫುಲ್ ಕುಮಾರ್ ತನ್ನ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂತಹ ಸಂದೇಶ ರವಾನೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲಿದೆ. ಆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ಜರುಗಿಸಲಾಗುವುದು ಎಂದರು.

ಇತ್ತೀಚಿನ ಚುನಾವಣೆಯ ಬಳಿಕ ಚರ್ಚ್ ಮೇಲೆ ದಾಳಿ ನಡೆದಿಲ್ಲ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ ರವಾನಿಸಲಾಗುತ್ತದೆ. ಯಾರೋ ರವಾನಿಸಿದ್ದನ್ನು ಪರಾಮರ್ಶಿಸದೆ ಇತರರಿಗೆ ರವಾನೆ ಮಾಡಿದರೆ ಅಂತಹವರ ಮೇಲೂ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದೆ. ಇತ್ತೀಚೆಗೆ ಮದ್ರಾಸ್ ಹೈಕೋರ್ಟ್ ಈ ಬಗ್ಗೆ ತೀರ್ಪನ್ನು ಕೂಡ ನೀಡಿದೆ. ಹಾಗಾಗಿ ವಾಟ್ಸ್‌ಆ್ಯಪ್ ಮತ್ತಿತರ ಜಾಲತಾಣದಲ್ಲಿ ಸಂದೇಶ ರವಾನಿಸುವವರು ಎಚ್ಚರಿಕೆ ವಹಿಸಬೇಕು ಎಂದು ವಿಫುಲ್ ಕುಮಾರ್ ಹೇಳೀದರು.

ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡುವ ಸಲುವಾಗಿ ‘ಸೋಶಿಯಲ್ ಮೀಡಿಯಾ ಮೋನಿಟರ್ ಸೆಲ್’ವೊಂದನ್ನು ಆಯುಕ್ತಾಲಯದಲ್ಲಿ ಸ್ಥಾಪಿಸಲಾಗಿದೆ ಎಂದು ವಿಫುಲ್ ಕುಮಾರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

*ಟ್ರಾಫಿಕ್‌ಗಾಗಿ ಹೊಸ ವಾಟ್ಸ್‌ಆ್ಯಪ್ ಸಂಖ್ಯೆ: ಟ್ರಾಫಿಕ್ ಸಮಸ್ಯೆ, ಅವುಗಳಿಗೆ ಪರಿಹಾರ ಅಥವಾ ಸಲಹೆಗಳಿಗಾಗಿ ಆಯುಕ್ತಾಲಯವು ಹೊಸ ವಾಟ್ಸ್‌ಆ್ಯಪ್ (9480802303)ಸಂಖ್ಯೆಯೊಂದರ ಖಾತೆ ತೆರೆದಿದೆ. ಸಾರ್ವಜನಿಕರು ಆಯುಕ್ತಾಲಯ ವ್ಯಾಪ್ತಿಯ ಸಂಚಾರ ದಟ್ಟನೆ, ಉಲ್ಲಂಘನೆ ಇತ್ಯಾದಿ ಸಮಸ್ಯೆಗಳಲ್ಲದೆ, ಪರಿಹಾರಕ್ಕಾಗಿ ಈ ಸಂಖ್ಯೆಯನ್ನು ಬಳಸಿಕೊಳ್ಳಬಹುದು ಎಂದು ವಿಫುಲ್ ಕುಮಾರ್ ತಿಳಿಸಿದರು.

 ಈ ಸಂದರ್ಭ ಈ ಸಂಖ್ಯೆಯನ್ನು ಡಿಸಿಪಿ ಉಮಾಪ್ರಶಾಂತ್ ಅನಾವರಣಗೊಳಿಸಿದರು.

* 8 ಮಂದಿಗೆ ನ್ಯಾಯಾಂಗ ಬಂಧನ:

ಚುನಾವಣಾ ಫಲಿತಾಂಶದ ಬಳಿಕ ವಿಜಯೋತ್ಸವ ಸಂದರ್ಭ ಅಡ್ಯಾರ್‌ಪದವಿನಲ್ಲಿ ನಡೆದ ಕಲ್ಲು ತೂರಾಟ ಹಾಗೂ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಾದ ಹರೀಶ್ ಪೂಜಾರಿ, ನಿಶಾಂತ್, ನಿತೇಶ್, ಅಭಿಷೇಕ್, ದಾವೂದ್ ಯಾನೆ ದಾವೂದ್ ಹಕೀಂ, ಮುಹಮ್ಮದ್ ನೌಷಾದ್, ಶಾಹುಲ್ ಹಮೀದ್ ಹಾಗೂ ಮುಹಮ್ಮದ್ ಜುನೈದ್ ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಹನುಮಂತರಾಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X