Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 19- ಜೂ.30: 'ಸಿಟಿ ಸೆಂಟರ್‌'ನಲ್ಲಿ...

ಮೇ 19- ಜೂ.30: 'ಸಿಟಿ ಸೆಂಟರ್‌'ನಲ್ಲಿ ಶಾಪಿಂಗ್ ಉತ್ಸವ

ವಾರ್ತಾಭಾರತಿವಾರ್ತಾಭಾರತಿ18 May 2018 1:40 PM IST
share
ಮೇ 19- ಜೂ.30: ಸಿಟಿ ಸೆಂಟರ್‌ನಲ್ಲಿ ಶಾಪಿಂಗ್ ಉತ್ಸವ

ಮಂಗಳೂರು, ಮೇ 18: ನಗರದ ಪ್ರಮುಖ ಶಾಪಿಂಗ್ ಮಾಲ್ ಸಿಟಿ ಸೆಂಟರ್‌ನಲ್ಲಿ ಮೇ 19ರಿಂದ ಜೂನ್ 30ರವರೆಗೆ ‘ಇಂಡಲ್ಜ್’ ಎಂಬ ಹೆಸರಿನಲ್ಲಿ ವಿಶೇಷ ಶಾಪಿಂಗ್ ಉತ್ಸವವನ್ನು ಆಯೋಜಿಸಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿಂದು ಉತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಸಿಟಿ ಸೆಂಟರ್ ಆಡಳಿತ ನಿರ್ದೇಶಕ ಎಸ್.ಎಂ.ಅರ್ಶದ್, ಸಿಟಿ ಸೆಂಟರ್‌ನ 8ನೆ ವಾರ್ಷಿಕೋತ್ಸವದ ಅಂಗವಾಗಿ ಉತ್ಸವ ನಡೆಸಲಾಗುತ್ತಿದೆ ಎಂದರು.

ಗ್ರಾಹಕರನ್ನು ಶಾಪಿಂಗ್‌ಗೆ ಆಕರ್ಷಿಸಲು 42 ದಿನಗಳ ಈ ಉತ್ಸವದಲ್ಲಿ ಆಕರ್ಷಕ ಉಡುಗೊರೆಗಳನ್ನು ಗೆಲ್ಲಲು ಅವಕಾಶ ಕಲ್ಪಿಸಲಾಗಿದೆ. ಶಾಪಿಂಗ್ ಉತ್ಸವದ ಎಲ್ಲಾ ದಿನಗಳಲ್ಲೂ ಆಕರ್ಷಕ ಗಿಫ್ಟ್ ಗ್ರಾಹಕರಿಗೆ ಲಭ್ಯವಿರುತ್ತದೆ. ಬೇಸಿಗೆ ರಜಾ ಕೊನೆಯ ಹಂತದಲ್ಲಿ ಮಕ್ಕಳಿಗಾಗಿ ಒಂದು ವಾರದ ವಿಶೇಷ ಮಕ್ಕಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನಪ್ರಿಯ ಕಾರ್ಟೂನ್ ಪಾತ್ರಗಳಾದ ಡೊರೆಮನ್, ವಿನ್ನಿ ದಿ ಪೂಹ್ ಮತ್ತು ಛೋಟಾ ಭೀಮ್ ಸಿಟಿ ಸೆಂಟರ್‌ಗೆ ಭೇಟಿ ನೀಡಿ ಮಕ್ಕಳನ್ನು ರಂಜಿಸಲಿದ್ದಾರೆ ಎಂದು ಅವರು ಹೇಳಿದರು.

ರಮಝಾನ್ ತಿಂಗಳ ಗೌರವಾರ್ಥವಾಗಿ ಸಿಟಿ ಸೆಂಟರ್‌ನಲ್ಲಿ ಆಹಾರ ಉತ್ಸವವನ್ನು ಆಯೋಜಿಸಲಾಗಿದೆ. ಸಿಟಿ ಸೆಂಟರ್‌ನಲ್ಲಿ ಇರುವ ಎಲ್ಲ ಆಹಾರ ಕೌಂಟರ್‌ಗಳು ತಮ್ಮಲ್ಲಿ ತಯಾರಿಸಲಾಗುವ ವಿಶೇಷ ಆಹಾರಗಳನ್ನು ಉಚಿತವಾಗಿ ಮಂಗಳೂರು ನಗರದ ಎನ್‌ಜಿಓ ಒಂದಕ್ಕೆ ನೀಡುವ ಕೆಲಸವನ್ನು ಕೂಡಾ ಮಾಡಲಿದೆ. ಸಂಸ್ಥೆಯ ಸಾಮಾಜಿಕ ಜವಾಬ್ದಾರಿಯ ಅಂಗವಾಗಿ ನಗರದ ಹಲವು ಪ್ರಮುಖ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕೇಂದ್ರಗಳ ನೆರವಿನೊಂದಿಗೆ ಸಿಎಸ್‌ಆರ್ ಚಟುವಟಿಕೆಗಳನ್ನು ವ್ಯವಸ್ಥೆ ಮಾಡಿದ್ದೇವೆ. ಎಂಸಿಒಡಿಎಸ್‌ನಲ್ಲಿ ಡೆಂಟಲ್ ಚೆಕ್ ಅಪ್ ಜೂ. 20ರಂದು ಡಾ.ಮೋಹನ್ ಅವರ ಕ್ಲಿನಿಕ್‌ನಲ್ಲಿ ರಕ್ತದಾನ ಶಿಬಿರ ಜೂ. 23ರಂದು, ಎಜೆ ಆಸ್ಪತ್ರೆ ವತಿಯಿಂದ ಅಂಗಾಗ ದಾನ ಜಾಗೃತಿ ಶಿಬಿರ ಜೂನ್ 16ರಂದು, ಎಜೆ ಆಸ್ಪತ್ರೆಯ ವತಿಯಿಂದ ಕ್ಯಾನ್ಸರ್ ಜಾಗೃತಿ ಶಿಬಿರ ಜೂ.10ರಂದು ಇಂಡಿಯಾನಾ ಆಸ್ಪತ್ರೆಯ ವತಿಯಿಂದ ಹೃದಯ ಕಾಯಿಲೆಗಳ ಬಗ್ಗೆ ಜಾಗೃತಿ ಜೂ.3ರಂದು ನಡೆಯಲಿದೆ. ಮತ್ತೊಂದು ಸಿಎಸ್‌ಆರ್ ಕಾರ್ಯಕ್ರಮವಾಗಿ ಕಲೆಯಿಂದ ನಿಧಿ ಸಂಗ್ರಹ ಕಾರ್ಯಕ್ರಮ ನಡೆಯಲಿದೆ. ನಗರದ ಹಲವಾರು ಎನ್‌ಜಿಓಗಳ ಸದಸ್ಯರು ತಮ್ಮ ಕರಕುಶಲ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಲಾಗುವುದು.

* ಮೇ 19ರಂದು ತಾಮಾಷಾ ಫ್ಯಾಕ್ಟರಿಯಿಂದ ಸ್ಟಾಂಡ್ ಅಪ್ ಹಾಸ್ಯ.

* ಮೇ 20-27ರವರೆಗೆ ಕಾರ್ಟೂನ್ ಪಾತ್ರಗಳೊಂದಿಗೆ ಕಿಡ್ಸ್ ಈವೆಂಟ್.

* ಜೂ. 2ರಂದು ವಿಶ್ವ ಪರಿಸರ ದಿನದ ರಸಪ್ರಶ್ನೆ.

* ಜೂ.9ರಂದು ಅಗತ್ಯವಿರುವವರಿಗಾಗಿ ಚಾರಿಟಿಗೆ ಚಾಲನೆ.

* ಜೂ. 17ರಂದು ಮಸಾಲ ಕಾಫಿ ತಂಡದಿಂದ ಸಂಗೀತ ಕಾರ್ಯಕ್ರಮ.

* ಜೂ. 24ರಂದು ಫ್ಲಾಶ್ ಮಾಬ್.

* ಜೂ. 30ರಂದು ರೋಲ್ ಬ್ಯಾಂಡ್ ತಂಡದಿಂದ ಸಂಗೀತ ಕಾರ್ಯಕ್ರಮ.

ಇದಲ್ಲದೆ ಉತ್ಸವದ ಸಂದರ್ಭ ಶಾಂಪಿಂಗ್ ಮಾಡುವ ಗ್ರಾಹಕರಿಗೆ ನಾಲ್ಕು ದ್ವಿಚಕ್ರ ವಾಹನಗಳನ್ನು ಗೆಲ್ಲುವ ಅವಕಾಶವಿದೆ. ರೆನಾಲ್ಟ್ ಕ್ವಿಡ್ ಅನ್ನು ಬಂಪರ್ ಬಹುಮಾನವಾಗಿ ಗೆಲ್ಲಲು ಅವಕಾಶವಿದೆ. ಪ್ರತಿದಿನ ಗಿಫ್ಟ್ ವೋಚರ್ ಪಡೆಯುವ ಮತ್ತು ವಾರಕ್ಕೊಮ್ಮೆ ವಿಶೇಷ ಉಡುಗೊರೆ ಗೆಲ್ಲುವ ಅವಕಾಶವಿದೆ ಎಂದು ಅವರು ವಿವರ ನೀಡಿದರು.

ಸ್ಪಿನ್ನಿಂಗ್ ದಿ ಸ್ಪಿನ್ನರ್‌ನಡಿ 3,000 ರೂ. ಮತ್ತು ಹೆಚ್ಚಿನ ಶಾಪಿಂಗ್ ಮಾಡುವ ಗ್ರಾಹಕರು ಇದರಲ್ಲಿ ಭಾಗವಹಿಸಬಹುದು. 5,000 ರೂ. ವೌಲ್ಯದ ಶಾಪಿಂಗ್ ಮಾಡುವ ಗ್ರಾಹಕರಿಗೆ ಅದೃಷ್ಟ ಡ್ರಾದಲ್ಲಿ ದ್ವಿಚಕ್ರ ವಾಹನ ಗೆಲ್ಲುವ ಅವಕಾಶ. 7,000 ರೂ.ಗಳಿಗಿಂತ ಹೆಚ್ಚಿನ ಖರೀದಿ ಮಾಡುವ ಗ್ರಾಹಕರಿಗೆ ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಗೆಲ್ಲುವ ಅವಕಾಶವಿದೆ. ಜೂ. 13, 14 ಮತ್ತು 15ರಂದು ಈದ್ ಮುಂಚಿತವಾಗಿ ಗ್ರಾಹಕರ ಅನೂಕೂಲಕ್ಕಾಗಿ ಮಾಲ್ ಸಮಯವನ್ನು 11 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಅರ್ಶದ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಸಕ ಎಸ್.ಎಂ.ಸವೂದ್, ಕ್ರೈಸಿಸ್ ಮ್ಯಾನೇಜರ್ ಹರೀಶ್ ಶೆಟ್ಟಿ, ಮಾಲ್ ಮ್ಯಾನೇಜರ್ ನಿಶ್ಚಿತಾ ಸದಾನಂದ, ಡೆಪ್ಯುಟಿ ಜನರಲ್ ಮ್ಯಾನೇಜರ್ ಸೌಮ್ಯಾ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X