Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಎರಡು ಕೋಟಿ ನೀಡಿದರೆ ಇವಿಎಂ ಹ್ಯಾಕ್...

"ಎರಡು ಕೋಟಿ ನೀಡಿದರೆ ಇವಿಎಂ ಹ್ಯಾಕ್ ಮಾಡುವುದಾಗಿ ಕರೆ ಬಂದಿತ್ತು"

ತರೀಕೆರೆ ಪರಾಜಿತ ಜೆಡಿಎಸ್ ಅಭ್ಯರ್ಥಿ ಶಿವಶಂಕರಪ್ಪ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ18 May 2018 7:18 PM IST
share
ಎರಡು ಕೋಟಿ ನೀಡಿದರೆ ಇವಿಎಂ ಹ್ಯಾಕ್ ಮಾಡುವುದಾಗಿ ಕರೆ ಬಂದಿತ್ತು

ತರೀಕೆರೆ, ಮೇ 18: ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯವರು ತಮ್ಮ ಮೋಸದ ಕೃತ್ಯವನ್ನು ಪ್ರದರ್ಶಿಸಿ ರಾಜ್ಯಾದ್ಯಂತ  ಪ್ರಜಾತಂತ್ರ ವ್ಯವಸ್ಥೆಗೆ ಮೋಸ ಮಾಡಿದಂತೆ, ತರೀಕೆರೆಯಲ್ಲೂ ಇ.ವಿ.ಎಂ ಮತಯಂತ್ರಗಳ ದುರ್ಬಳಕೆಯಿಂದ ಬಿಜೆಪಿ ಗೆಲುವು ಸಾಧಿಸಿದೆಯೆಂದು ತರೀಕೆರೆ ಕ್ಷೇತ್ರದ ಪರಾಜಿತ ಅಭ್ಯರ್ಥಿ ಟಿ.ಹೆಚ್ ಶಿವಶಂಕರಪ್ಪ ಗಂಭೀರವಾಗಿ ಆರೋಪಿಸಿದ್ದಾರೆ. 

ಶುಕ್ರವಾರ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇವಿಎಂ ಹ್ಯಾಕ್ ಮಾಡಿದ ಆರೋಪ ಸಂಬಂಧ ಮೈಸೂರಿನಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳ ಪೈಕಿ ವೆಂಕಟೇಶ್ ಎಂಬಾತನಿಂದ 'ಮತಯಂತ್ರ ಹ್ಯಾಕ್ ಮಾಡಿ ಅಧಿಕ ಮತ ಬರುವಂತೆ ಮಾಡುತ್ತೇವೆ. ಇದಕ್ಕಾಗಿ ಎರಡು ಕೋಟಿ ರೂಪಾಯಿ ನೀಡಬೇಕು' ಎಂಬ ಆಹ್ವಾನ ಬಂದಿತ್ತು ಎಂದು ಆರೋಪಿಸಿದರು.

'ಈ ಆಹ್ವಾನವನ್ನು ತಾನು ನಯವಾಗಿ ತಿರಸ್ಕರಿಸಿದ್ದೆ. ಇದರಿಂದಾಗಿ ಬಿಜೆಪಿಯವರು ಅದರ ಲಾಭ ಪಡೆದಿದ್ದಾರೆಂಬ ಶಂಕೆ ನನಗಿದೆ. ಮತದಾನದ ಸಮಯದಲ್ಲಿ 100 ಅಡಿ ವ್ಯಾಪ್ತಿಯಲ್ಲಿ ಮೆಮೊರಿ ಕಾರ್ಡ್ ಬಳಸಿ ಇವಿಎಂ ದುರ್ಬಳಕೆ ಮಾಡಲಾಗಿದೆ. ಈ ಇವಿಎಂ ಮತಯಂತ್ರಗಳ ಜೋಡಣೆಯಿಂದ ಉಡೇವಾ, ತಣಿಗೇಬೈಲು, ಶಾಂತವೇರಿ, ಕೋಡಿಕ್ಯಾಂಪ್ ಹಾಗೂ ತರೀಕೆರೆಯ ಸುತ್ತಮುತ್ತಲ ಊರುಗಳಾದ ಕೆಂಚಾಪುರ, ಚೌಡೇಶ್ವರಿ ಕಾಲೋನಿ, ಅತ್ತಿಗನಾಳು ಭಾಗದ ಜೆಡಿಎಸ್, ಕಾಂಗ್ರೆಸ್ ಮತಗಳು ಬಿಜೆಪಿಗೆ ಹೋಗಿವೆ ಎಂದು ಗಂಭೀರವಾಗಿ ಆರೋಪಿಸಿದ ಅವರು, ಭವಿಷ್ಯದಲ್ಲಿ ಭಾರತೀಯ ಜನತಾ ಪಾರ್ಟಿಯವರು ಇದನ್ನು ನಿರಂತರವಾಗಿ ಪಡೆದುಕೊಂಡು ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದರು.

ಈ ಚುನಾವಣೆಯಲ್ಲಿ ಬಿಜೆಪಿಯವರು 18 ರಿಂದ 20 ಸಾವಿರ ಮತ ಪಡೆಯಲು ಶಕ್ತರಿದ್ದರು. ಜೆಡಿಎಸ್ 35 ಸಾವಿರ, ಕಾಂಗ್ರೆಸ್ 30 ಸಾವಿರ ಹಾಗೂ ಪಕ್ಷೇತರ ಅಭ್ಯರ್ಥಿ ಗೋಪಿ 25 ಸಾವಿರ ಮತಪಡೆಯುವ ನಿರೀಕ್ಷೆ ಇದ್ದು, ಬಿಜೆಪಿಯವರ ಮೋಸಕ್ಕೆ ನಾವು ಬಲಿಯಾಗಿದ್ದೇವೆ. ಬಿಜೆಪಿವರು ಕಾಂಗ್ರೆಸ್, ಜೆಡಿಎಸ್‍ನ ಮತಗಳನ್ನು ಕದ್ದಿದ್ದಾರೆಯೇ ಹೊರತು ಸಹಜವಾಗಿ ಮತದಾರರಿಂದ ಅವರಿಗೆ ಬಂದ ಮತಗಳು ಅಲ್ಲ ಎಂದ ಅವರು, ಬಿಜೆಪಿಗೆ ರಾಜ್ಯದಲ್ಲಿ 70 ರಿಂದ 80 ಸ್ಥಾನ ಮಾತ್ರ ಗಳಿಸಲು ಆರ್ಹತೆಯಿತ್ತು. ಮತಯಂತ್ರಗಳ ದುರ್ಬಳಕೆ ಮಾಡಿ 104 ಸೀಟು ಬಂದಿದೆ. ಮುಂದಿನ ಎಂ.ಪಿ ಚುನಾವಣೆಯಲ್ಲಿ ಈ ತಂತ್ರ ನಡೆಯುವುದಿಲ್ಲ. ನಾನು ಸೋತಿರುವ ಬಗ್ಗೆ ಬೇಸರವಿಲ್ಲ ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇನೆ. ನನ್ನ ಬಲ ಏನೆಂದು ತೋರಿಸುತ್ತೇನೆಂದು ಹೇಳಿದರು.

ಸಭೆಯಲ್ಲಿ ಮುಖಂಡರಾದ ಗೋವಿಂದಪ್ಪ, ಜಿ.ಟಿ. ರಮೇಶ್ ಹಾಗೂ ಇತರರು ಇದ್ದರು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X