Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಪ್ರವಾಸಿಗರನ್ನು ಅಡ್ಡಗಟ್ಟಿ ಭಯ...

ಮಡಿಕೇರಿ: ಪ್ರವಾಸಿಗರನ್ನು ಅಡ್ಡಗಟ್ಟಿ ಭಯ ಮೂಡಿಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ18 May 2018 10:47 PM IST
share
ಮಡಿಕೇರಿ: ಪ್ರವಾಸಿಗರನ್ನು ಅಡ್ಡಗಟ್ಟಿ ಭಯ ಮೂಡಿಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ

ಮಡಿಕೇರಿ,ಮೇ.18: ರಾತ್ರಿ ವೇಳೆ ಮಡಿಕೇರಿ ನಗರಕ್ಕೆ ಆಗಮಿಸುವ ಪ್ರವಾಸಿಗರನ್ನು ಏಕಾಏಕಿ ರಸ್ತೆಗಳಲ್ಲಿ ಅಡ್ಡಗಟ್ಟಿ ತಾವು ಹೇಳಿದ ಹೋಂಸ್ಟೇಗೆ ಬರುವಂತೆ ಒತ್ತಾಯಿಸಿ ಭಯದ ವಾತಾವರಣವನ್ನು ಉಂಟು ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಬಂಧಿತರನ್ನು ರಿಜ್ವಾನ್ ಎಂ.ಹೆಚ್, ಝೈನುದ್ದೀನ್, ಮುಸ್ತಫ ಹಾಗೂ ರಾಜೇಶ್ ಕೆ. ಎಂದು ಗುರುತಿಸಲಾಗಿದೆ.

ಮೇ 10ರಂದು ಬೆಳಗಿನ ಜಾವ 2 ಗಂಟೆಗೆ ಮಡಿಕೇರಿ ನಗರದ ಫೋರ್ಟ್ ವ್ಯೂ ಲಾಡ್ಜ್ ಗೆ ಹೋದ ಕೆಲವು ಪ್ರವಾಸಿಗರನ್ನು ಅಶ್ರಫ್ ಎಂಬ ಹೋಂ ಸ್ಟೇ ಮಧ್ಯವರ್ತಿ ಫೋರ್ಟ್ ವ್ಯೂ ಲಾಡ್ಜ್ ನ ಕಾಂಪೌಂಡ್‍ನ ಒಳಗೆ ಹೋಗಿ ಪ್ರವಾಸಿಗರು ತನ್ನೊಂದಿಗೆ ಹೋಂಸ್ಟೇಗೆ ಬರಬೇಕೆಂದು ಒತ್ತಾಯಿಸಿದ್ದನೆನ್ನಲಾಗಿದೆ.  ಈ ವಿಚಾರವಾಗಿ ಫೋರ್ಟ್ ವ್ಯೂ ಲಾಡ್ಜ್ ವ್ಯವಸ್ಥಾಪಕ ಜುಬೇರ್ ಎಂಬವರು ಅಶ್ರಫ್‍ರವರನ್ನು ಪ್ರಶ್ನಿಸಿದಾಗ ಅಶ್ರಫ್, ಜುಬೇರ್ ರವರಿಗೆ ಬೈದು ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾಗಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅದೇ ರೀತಿ ಮೇ 16 ರಂದು ರಿಜ್ವಾನ್ ಎಂ.ಹೆಚ್, ಝೈನುದ್ದೀನ್, ಮುಸ್ತಫ ಹಾಗೂ ರಾಜೇಶ್ ಕೆ. ಮುಂತಾದವರು ಮಡಿಕೇರಿ ನಗರದಲ್ಲಿ ಹೋಂ ಸ್ಟೇಗಾಗಿ ಗಿರಾಕಿಗಳನ್ನು ಹುಡುಕುತ್ತಾ ಪ್ರವಾಸಿಗರನ್ನು ಅಡ್ಡಗಟ್ಟಿ ಭಯದ ವಾತಾವರಣ ಮೂಡಿಸುತ್ತಿದ್ದುದನ್ನು ಗಮನಿಸಿ ಅವರಿಗೆ ಪೊಲೀಸ್ ಠಾಣೆಯಲ್ಲಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ಆದರೂ ಸಹ ರಿಜ್ವಾನ್ ಎಂ.ಹೆಚ್, ಜೈನುದ್ದೀನ್, ಮುಸ್ತಫ, ರಾಜೇಶ್ ಕೆ ಅವರು ಗುರುವಾರ ಬೆಳಗಿನ ಜಾವ ಮತ್ತೆ ಮಡಿಕೇರಿ ನಗರಕ್ಕೆ ರಾತ್ರಿ ವೇಳೆ ಬರುವಂತಹ ಪ್ರವಾಸಿಗರನ್ನು ರಸ್ತೆಗಳಲ್ಲಿ ಏಕಾಏಕಿ ಅಡ್ಡಗಟ್ಟಿ ತಮ್ಮೊಂದಿಗೆ ಬರುವಂತೆ ಒತ್ತಾಯಿಸಿ ಪ್ರವಾಸಿಗರಿಗೆ ಭಯದ ವಾತಾವರಣ ಉಂಟು ಮಾಡಿದ್ದಾಗಿ ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರಪ್ರಸಾದ್ ಅವರು ತಿಳಿಸಿದ್ದಾರೆ.

ಮಡಿಕೇರಿ ನಗರದಲ್ಲಿ ಯಾವುದೇ ಸಮಯದಲ್ಲಿ ಯಾರೇ ಹೋಂ ಸ್ಟೇ ಮಧ್ಯವರ್ತಿಗಳು ಪ್ರವಾಸಿಗರನ್ನು ಅಡ್ಡಗಟ್ಟಿ ತೊಂದರೆ ನೀಡುವುದು ಕಂಡು ಬಂದಲ್ಲಿ ಸಾರ್ವಜನಿಕರು ಮಡಿಕೇರಿ ನಗರ ಪೊಲೀಸ್ ಠಾಣೆಗೆ (08272-229333), ಪಿಎಸ್‍ಐ ಮಡಿಕೇರಿ ನಗರ ಠಾಣೆ (9480804945) ಅಥವಾ ಪೊಲೀಸ್ ಕಂಟ್ರೋಲ್ ರೂಂ (08272-229330)ಗೆ ಮಾಹಿತಿ  ನೀಡಿದರೆ ಕಾನೂನು ಉಲ್ಲಂಘಿಸಿ ವರ್ತಿಸುವ ಹೋಂ ಸ್ಟೇ ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X