Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೆಸ್ತೀನೀಯರ ವಿರುದ್ಧದ ಅಪರಾಧಕ್ಕಾಗಿ...

ಫೆಲೆಸ್ತೀನೀಯರ ವಿರುದ್ಧದ ಅಪರಾಧಕ್ಕಾಗಿ ಇಸ್ರೇಲ್ ವಿರುದ್ಧ ತನಿಖೆ: ಅರಬ್ ಲೀಗ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ18 May 2018 11:48 PM IST
share
ಫೆಲೆಸ್ತೀನೀಯರ ವಿರುದ್ಧದ ಅಪರಾಧಕ್ಕಾಗಿ ಇಸ್ರೇಲ್ ವಿರುದ್ಧ ತನಿಖೆ: ಅರಬ್ ಲೀಗ್ ಒತ್ತಾಯ

ಕೈರೋ (ಈಜಿಪ್ಟ್), ಮೇ 18: ಗಾಝಾ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಫೆಲೆಸ್ತೀನೀಯರ ವಿರುದ್ಧ ನಡೆಸಿದ 'ಅಪರಾಧ'ಗಳಿಗಾಗಿ ಇಸ್ರೇಲ್ ಸೈನಿಕರನ್ನು ವಿಚಾರಣೆಗೆ ಗುರಿಪಡಿಸಬೇಕು ಎಂದು ಅರಬ್ ಲೀಗ್ ಒತ್ತಾಯಿಸಿದೆ.

ಸೋಮವಾರ ಇಸ್ರೇಲ್-ಗಾಝಾ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಫೆಲೆಸ್ತೀನೀಯರ ಮೇಲೆ ಇಸ್ರೇಲ್ ಸೈನಿಕರು ಹಾರಿಸಿದ ಗುಂಡಿಗೆ 60ಕ್ಕೂ ಅಧಿಕ ಪ್ರತಿಭಟನಕಾರರು ಬಲಿಯಾಗಿದ್ದರು.

ಅಮೆರಿಕವು ತನ್ನ ಇಸ್ರೇಲ್ ರಾಯಭಾರ ಕಚೇರಿಯನ್ನು ಟೆಲ್ ಅವೀವ್‌ನಿಂದ ಜೆರುಸಲೇಂಗೆ ವರ್ಗಾಯಿಸುವುದನ್ನು ವಿರೋಧಿಸಿ ಅವರು ಪ್ರತಿಭಟಿಸುತ್ತಿದ್ದರು.

ಇದು 2014ರ ಇಸ್ರೇಲ್-ಫೆಲೆಸ್ತೀನ್ ಸಂಘರ್ಷದ ಬಳಿಕ, ಗಾಝಾದಲ್ಲಿ ನಡೆದ ಅತ್ಯಂತ ಭೀಕರ ಹಿಂಸಾಚಾರವಾಗಿದೆ.

ಈಜಿಪ್ಟ್ ರಾಜಧಾನಿ ಕೈರೋದಲ್ಲಿ ನಡೆದ ಅರಬ್ ವಿದೇಶ ಸಚಿವರ ವಿಶೇಷ ಸಭೆಯಲ್ಲಿ ಮಾತನಾಡಿದ ಅರಬ್ ಲೀಗ್ ಮುಖ್ಯಸ್ಥ ಅಹ್ಮದ್ ಅಬುಲ್, ಈ ಹಿಂಸಾಚಾರದ ಬಗ್ಗೆ ಸ್ವತಂತ್ರ ತನಿಖೆ ನಡೆಯಬೇಕೆಂದು ಒತ್ತಾಯಿಸಿದರು.

''ಆಕ್ರಮಣಶಾಹಿ ಶಕ್ತಿಗಳು ನಡೆಸಿದ ಈ ಅಪರಾಧದ ಬಗ್ಗೆ ವಿಶ್ವಾಸಾರ್ಹ ಅಂತಾರಾಷ್ಟ್ರೀಯ ತನಿಖೆ ನಡೆಯಬೇಕೆಂದು ನಾವು ಒತ್ತಾಯಿಸುತ್ತೇವೆ'' ಎಂದು ಅವರು ಹೇಳಿದರು.

''ಅಂತಾರಾಷ್ಟ್ರೀಯ ಕಾನೂನು ಮತ್ತು ವ್ಯವಸ್ಥೆ ವಿರುದ್ಧ ಸಾರಾಸಗಟು ಆಕ್ರಮಣ ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದಕ್ಕೆ ಇಸ್ರೇಲ್‌ನ ಅಮೆರಿಕ ರಾಯಭಾರ ಕಚೇರಿಯು ಆಕ್ರಮಿತ ಜೆರುಸಲೇಂಗೆ ಸ್ಥಳಾಂತರವಾಗಿರುವುದೇ ಉದಾಹರಣೆ'' ಎಂದರು.

ಗಾಝಾ ನಿವಾಸಿಗಳನ್ನು ಕೊಳೆಗೇರಿಗಳಲ್ಲಿ ಕೂಡಿ ಹಾಕಿದ ಇಸ್ರೇಲ್:  ವಿಶ್ವಸಂಸ್ಥೆಯ ಮಾನವಹಕ್ಕುಗಳ ಮುಖ್ಯಸ್ಥ

ಜಿನೇವ (ಸ್ವಿಟ್ಸರ್‌ಲ್ಯಾಂಡ್), ಮೇ 18: ಇಸ್ರೇಲ್ ವ್ಯವಸ್ಥಿತವಾಗಿ ಫೆಲೆಸ್ತೀನೀಯರನ್ನು ಅವರ ಮಾನವಹಕ್ಕುಗಳಿಂದ ವಂಚಿತಗೊಳಿಸಿದೆ ಹಾಗೂ ಗಾಝಾದಲ್ಲಿರುವ 19 ಲಕ್ಷ ಮಂದಿಯನ್ನು ಹುಟ್ಟಿನಿಂದ ಸಾವಿನವರೆಗೆ ವಿಷಕಾರಿ ಕೊಳೆಗೇರಿಗಳಲ್ಲಿ ಕೂಡಿ ಹಾಕಲಾಗಿದೆ ಎಂದು ವಿಶ್ವಸಂಸ್ಥೆಯ ಮಾನವಹಕ್ಕುಗಳ ಮುಖ್ಯಸ್ಥ ಝೈದ್ ರಅದ್ ಅಲ್-ಹುಸೈನ್ ಶುಕ್ರವಾರ ಹೇಳಿದ್ದಾರೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯ ವಿಶೇಷ ಅಧಿವೇಶನವನ್ನು ಉದ್ಘಾಟಿಸಿದ ಝೈದ್, ಇಸ್ರೇಲನ್ನು ಕಟುವಾಗಿ ಟೀಕಿಸಿದರು. ಇಸ್ರೇಲ್ ಭದ್ರತಾ ಪಡೆಗಳು ಸೋಮವಾರ ಒಂದೇ ದಿನ 60 ಫೆಲೆಸ್ತೀನೀಯರನ್ನು ಕೊಂದಿವೆ ಎಂದು ಅವರು ಹೇಳಿದರು. ''ಆಕ್ರಮಣವನ್ನು ಕೊನೆಗೊಳಿಸಿ, ಆಗ ಹಿಂಸಾಚಾರ ಮತ್ತು ಅಭದ್ರತೆ ಬಹುತೇಕ ಹೋಗುತ್ತದೆ'' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X