Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಷ್ಯಾದ ಅತ್ಯಂತ ಉದ್ದವಾದ ಝೋಜಿಲಾ ಸುರಂಗದ...

ಏಷ್ಯಾದ ಅತ್ಯಂತ ಉದ್ದವಾದ ಝೋಜಿಲಾ ಸುರಂಗದ ಕಾಮಗಾರಿಗೆ ಪ್ರಧಾನಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 May 2018 8:14 PM IST
share
ಏಷ್ಯಾದ ಅತ್ಯಂತ ಉದ್ದವಾದ ಝೋಜಿಲಾ ಸುರಂಗದ ಕಾಮಗಾರಿಗೆ ಪ್ರಧಾನಿ ಚಾಲನೆ

ಲೇಹ್(ಜಮ್ಮು-ಕಾಶ್ಮೀರ),ಮೇ 19: 6,800 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ,ಏಷ್ಯಾದಲ್ಲಿಯೇ ಅತ್ಯಂತ ಉದ್ದವಾದ ಝೋಜಿಲಾ ಸುರಂಗ ಮಾರ್ಗದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು. ರಾಜ್ಯಕ್ಕೆ ತನ್ನ ಒಂದು ದಿನದ ಭೇಟಿಯ ಅವಧಿಯಲ್ಲಿ ಒಟ್ಟು 25,000 ಕೋ.ರೂ.ಗಳ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸಗಳನ್ನು ನೆರವೇರಿಸಿದ ಅವರು,ಇದು ಜಮ್ಮು-ಕಾಶ್ಮೀರದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರದ ಬದ್ಧತೆಯನ್ನು ಸೂಚಿಸುತ್ತಿದೆ ಎಂದು ಹೇಳಿದರು.

ಇಲ್ಲಿ ಬೌದ್ಧರ ಆಧ್ಯಾತ್ಮಿಕ ಗುರು 19ನೇ ಕುಷೊಕ್ ಬಕುಲ ರಿಂಪೋಷೆ ಅವರ ಜನ್ಮ ಶತಾಬ್ದಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದ ಮೋದಿ ಅವರು,ಲಡಾಖ್ ಪ್ರದೇಶವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ರಿಂಪೋಷೆಯವರ ಕನಸನ್ನು ನನಸಾಗಿಸುವಲ್ಲಿ ಈ ಸುರಂಗ ಮಾರ್ಗವು ನೆರವಾಗಲಿದೆ ಎಂದರು.

11,578 ಅಡಿ ಎತ್ತರದಲ್ಲಿ ಶ್ರೀನಗರ-ಕಾರ್ಗಿಲ್-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಝೋಜಿಲಾ ಪಾಸ್ ಅನ್ನು ಭಾರೀ ಹಿಮಪಾತದ ಸಂದರ್ಭಗಳಲ್ಲಿ ಮುಚ್ಚಲಾಗುತ್ತದೆ ಮತ್ತು ಲಡಾಖ್ ಪ್ರದೇಶವು ಕಾಶ್ಮೀರ ಪ್ರದೇಶದೊಂದಿಗೆ ಸಂಪರ್ಕವನ್ನು ಕಡಿದುಕೊಳ್ಳುತ್ತದೆ.

ಲಡಾಖ್ ಪ್ರದೇಶದ ಇತಿಹಾಸ ಮತ್ತು ಸಂಪ್ರದಾಯವನ್ನು ಜಗತ್ತಿಗೆ ಬಿಂಬಿಸುವ ವರ್ಚ್ಯುವಲ್ ಮ್ಯೂಸಿಯಂ ಅನ್ನು ಸೃಷ್ಟಿಸುವುದಾಗಿಯೂ ಮೋದಿ ಈ ಸಂದರ್ಭದಲ್ಲಿ ಪ್ರಕಟಿಸಿದರು.

ರಿಂಪೋಷೆ ಅವರಿಗೆ ಪುಷ್ಪನಮನಗಳನ್ನು ಸಲ್ಲಿಸಿದ ಮೋದಿ,ಸ್ಥಳೀಯ ಭಾಷೆಯಲ್ಲಿ ತನ್ನ ಭಾಷಣವನ್ನು ಆರಂಭಿಸಿದಾಗ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಅದನ್ನು ಸ್ವಾಗತಿಸಿದರು.

ಝೋಜಿಲಾ ಸುರಂಗದ ಕಾಮಗಾರಿಯ ನಾಮಫಲಕವನ್ನು ಅನಾವರಣಗೊಳಿಸಿದ ಮೋದಿ,ಇದು ಬರಿಯ ಸುರಂಗ ಮಾತ್ರವಲ್ಲ,ಆಧುನಿಕ ಯುಗದ ಅದ್ಭುತವಾಗಲಿದೆ ಎಂದರು.

ಕುತುಬ್ ಮಿನಾರ್‌ಗಿಂತ ಏಳು ಪಟ್ಟು ಹೆಚ್ಚು ಎತ್ತರದ ಗೋಪುರದ ಮೂಲಕ ಸುರಂಗದಲ್ಲಿನ ಕಾರ್ಬನ್ ಡೈಯಾಕ್ಸೈಡ್‌ನ್ನು ನಿವಾರಣೆಯಾಗಲಿದೆ ಎಂದರು. ಈ ಸುರಂಗವು ಪ್ರದೇಶದಲ್ಲಿ ಸಂಪರ್ಕವನ್ನು ಕಲ್ಪಿಸುವ ಜೊತೆಗೆ ಸ್ಥಳೀಯ ಯುವಜನರಿಗೆ ಉದ್ಯೋಗಗಳನ್ನು ಒದಗಿಸಲಿದೆ ಎಂದ ಅವರು,ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯಸರಕಾರಗಳು ಒಂದಾಗಿ ಶ್ರಮಿಸುತ್ತಿವೆ ಎಂದರು.

ಲಡಾಖ್ ಪ್ರದೇಶದಲ್ಲಿ ಕೃಷಿ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳಿವೆ. ರಾಜ್ಯವು ಸವಾಂಗೀಣ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸುವಲ್ಲಿ ಪ್ರಮಖ ಪಾತ್ರವನ್ನು ನಿರ್ವಹಿಸಬಹುದಾಗಿದೆ,ಅಲ್ಲದೆ ಸ್ಥಳೀಯವಾಗಿ ಸುಗಂಧ ದ್ರವ್ಯ ಉದ್ಯಮವನ್ನು ಆರಂಭಿಸಬಹುದಾಗಿದೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ ಅವರು,ತಾನು ಅಧಿಕಾರ ವಹಿಸಿಕೊಂಡಾಗ ಸಾವಿರಾರು ಗ್ರಾಮಗಳು ವಿದ್ಯುತ್ ಸಂಪರ್ಕದಿಂದ ವಂಚಿತವಾಗಿದ್ದವು. ತನ್ನ ಸರಕಾರವು ವಿದ್ಯುದೀಕರಣ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಂಡು ಈ ಗ್ರಾಮಗಳನ್ನು ಅಂಧಕಾರದಿಂದ ಮುಕ್ತಗೊಳಿಸಿದೆ. ಒಂದೂವರೆ ವರ್ಷಗಳಲ್ಲಿ ಸುಮಾರು ನಾಲ್ಕು ಕೋಟಿ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುವುದು ಎಂದರು.

ರಿಂಪೋಷೆ ಅವರು ಮಹಾಯಾನ ಬೌದ್ಧ ಪಂಥದ ವಿದ್ವಾಂಸರಾಗಿದ್ದು, ಸ್ಪಿಟುಕ್ ಗೊಂಪಾದ ಮುಖ್ಯ ಅರ್ಚಕರಾಗಿದ್ದರು. 2003ರಲ್ಲಿ ನಿಧನರಾದ ಅವರು 1951ರಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯ ಶಾಸಕರಾಗಿ ಆಯ್ಕೆಯಾಗಿದ್ದರು ಮತ್ತು ಆಗಿನ ರಾಜ್ಯ ಸರಕಾರದಲ್ಲಿ ಸಚಿವರಾಗಿದ್ದರು. 1989ರಲ್ಲಿ ಅವರು ಮಂಗೋಲಿಯಾದಲ್ಲಿ ಭಾರತೀಯ ರಾಯಭಾರಿಯಾಗಿ ನೇಮಕಗೊಳ್ಳುವ ಮೂಲಕ ವಿಶ್ವದ ಮೊದಲ ಮತ್ತು ಏಕೈಕ ಬೌದ್ಧ ಸನ್ಯಾಸಿ ರಾಯಭಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

14.15 ಕಿ.ಮೀ.ಉದ್ದದ ಝೋಜಿಲಾ ಸುರಂಗ ಮಾರ್ಗವು ದ್ವಿಪಥಗಳನ್ನು ಹೊಂದಿದ್ದು, ಝೋಜಿಲಾ ಪಾಸ್ ಮೂಲಕ ಮೂರೂವರೆ ಗಂಟೆ ಪ್ರಯಾಣದ ಅವಧಿಯನ್ನು 15 ನಿಮಿಷಗಳಿಗೆ ತಗ್ಗಿಸಲಿದೆ.

 ಸುರಂಗದ ನಿರ್ಮಾಣ ಕಾಮಗಾರಿಯಲ್ಲಿ ಶೇ.90ರಷ್ಟು ಉದ್ಯೋಗಗಳನ್ನು ಸ್ಥಳೀಯ ಯುವಜನರಿಗೆ ನೀಡಲಾಗುವುದು ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತನ್ನ ಭಾಷಣದಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X