ಮೇ 20: ಯುನಿವೆಫ್ ನಿಂದ ಕುದ್ರೋಳಿಯಲ್ಲಿ ರಮಝಾನ್ ಪ್ರವಚನ
ಮಂಗಳೂರು, ಮೇ 19: ಯುನಿವೆಫ್ ಕರ್ನಾಟಕ ದ.ಕ. ಘಟಕದ ವತಿಯಿಂದ ಜಾಮಿಯಾ ಮಸೀದಿ ಕುದ್ರೋಳಿಯಲ್ಲಿ ಮೇ 20 ರಂದು ಝುಹರ್ ನಮಾಝಿನ ಬಳಿಕ ರಮಝಾನ್ ಪ್ರವಚನ ಕಾರ್ಯಕ್ರಮ ನಡೆಯಲಿದೆ.
ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿಯವರು "ಆಧ್ಯಾತ್ಮಿಕ ಬದುಕು" ಎಂಬ ವಿಷಯದಲ್ಲಿ ಪ್ರವಚನ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಯುನಿವೆಫ್ ಜಿಲ್ಲಾಧ್ಯಕ್ಷ ಸೈಫುದ್ದೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story