ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ: ಪ್ರಬಂಧ ಸ್ಪರ್ಧೆ
ಮಂಗಳೂರು, ಮೇ 20: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಮೇ 22 ಅಂತಾರಾಷ್ಟ್ರೀಯ ಜೀವಿವೈವಿಧ್ಯ ದಿನಾಚರಣೆ ಅಂಗವಾಗಿ 18 ವರ್ಷ ಮೇಲ್ಪಟ್ಟವರಿಗಾಗಿ ‘ಪರಿಸರ ಸಮತೋಲನೆಯಲ್ಲಿ ಜೀವಿವೈವಿಧ್ಯತೆಯ ಪಾತ್ರ’ ಅಥವಾ ‘ಜೀವಿವೈವಿಧ್ಯತೆಯ ಸಂರಕ್ಷಣೆಯಲ್ಲಿ ಸಮುದಾಯದ ಪಾತ್ರ’ ಎಂಬ ವಿಷಯಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ಆಸಕ್ತರು ಮೇ 21ರ ಸಂಜೆ 5 ಗಂಟೆಯ ಒಳಗಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ಗೆ 500 ಪದಗಳು ಮೀರದಂತೆ ಕನ್ನಡದಲ್ಲಿ ಪ್ರಬಂಧವನ್ನು ಬರೆದು ಇ-ಮೇಲ್ ಅಥವಾ ಪತ್ರ ಮುಖೇನ ತಲುಪಿಸಬೇಕೆಂದು ಗೌರವ ಕಾರ್ಯದರ್ಶಿ ಗಿರೀಶ್ ಬಿ. ಕಡ್ಲೇವಾಡ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅತ್ಯುತ್ತಮವಾದ 3 ಪ್ರಬಂಧಗಳಿಗೆ ಬಹುಮಾನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9483549159 / ಮೊ. 9449530245 / ಕರಾವಿಪ ಕಚೇರಿ ದೂ. 080-26718939 ಇವರನ್ನು ಸಂಪರ್ಕಿಸಲು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಪ್ರಕಟನೆ ತಿಳಿಸಿದೆ.
Next Story