Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕದಲ್ಲಿ ‘ಕುದುರೆ ವ್ಯಾಪಾರ’ದ...

ಕರ್ನಾಟಕದಲ್ಲಿ ‘ಕುದುರೆ ವ್ಯಾಪಾರ’ದ ಬಿಜೆಪಿ ಪ್ರಯತ್ನದ ಬಗ್ಗೆ ಪ್ರಧಾನಿ ತನಿಖೆ ನಡೆಸಲಿ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ20 May 2018 7:32 PM IST
share
ಕರ್ನಾಟಕದಲ್ಲಿ ‘ಕುದುರೆ ವ್ಯಾಪಾರ’ದ ಬಿಜೆಪಿ ಪ್ರಯತ್ನದ ಬಗ್ಗೆ ಪ್ರಧಾನಿ ತನಿಖೆ ನಡೆಸಲಿ: ಕಾಂಗ್ರೆಸ್

ಹೊಸದಿಲ್ಲಿ,ಮೇ 20: ಕರ್ನಾಟಕದಲ್ಲಿ ‘ಕುದುರೆ ವ್ಯಾಪಾರ’ಕ್ಕೆ ಪ್ರಯತ್ನಿಸಿದ್ದಕ್ಕಾಗಿ ರವಿವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್,ರಾಜ್ಯ ವಿಧಾನಸಭೆಯಲ್ಲಿ ಶನಿವಾರ ವಿಶ್ವಾಸ ಮತಕ್ಕೆ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಲಂಚದ ಆಮಿಷ ಒಡ್ಡಲು ತನ್ನ ಪಕ್ಷದ ನಾಯಕರು ನಡೆಸಿದ್ದ ಪ್ರಯತ್ನಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಯನ್ನು ಮುರಿಯಲು ಉಭಯ ಪಕ್ಷಗಳ ಶಾಸಕರಿಗೆ ಬಹಿರಂಗ ಕರೆಗಳನ್ನು ಮಾಡಿ ಲಂಚದ ಆಮಿಷವನ್ನು ಒಡ್ಡಿದ್ದ ತನ್ನ ಪಕ್ಷದ ಶಾಸಕರ ವಿರುದ್ಧ ತನಿಖೆಯನ್ನು ಆರಂಭಿಸುವ ಮೂಲಕ ಮೋದಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ತನ್ನ ಬದ್ಧತೆಯನ್ನು ಸಾಬೀತುಗೊಳಿಸಬೇಕು ಎಂದು ಕಾಂಗ್ರೆಸ್ ವಕ್ತಾರ ಜೈವೀರ್ ಶೇರಗಿಲ್ ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯವರು ಈ ಹಿಂದೆ ಹೇಳಿರುವಂತೆ ಕೇಂದ್ರ ಸರಕಾರವನ್ನು ಬಿಜೆಪಿಯಿಂದ ಮತ್ತು ದ್ವೇಷ ರಾಜಕಾರಣದಿಂದ ಮುಕ್ತಗೊಳಿಸಲು ಕಾಂಗ್ರೆಸ್ ತನ್ನ ಪಾಲುದಾರ ಪಕ್ಷಗಳೊಂದಿಗೆ ಸೇರಿಕೊಂಡು ಮೈತ್ರಿಕೂಟವನ್ನು ರಚಿಸಲು ಶ್ರಮಿಸಲಿದೆ ಎಂದ ಅವರು,2014ರಲ್ಲಿ ‘ಘರ್ ಘರ್ ಮೋದಿ’ ಘೋಷಣೆಯಿದ್ದರೆ 2019ರಲ್ಲಿ ಅದು ‘ಬೈ ಬೈ ಮೋದಿ’ ಎಂದಾಗುವಂತೆ ಕಾಂಗ್ರೆಸ್ ನೋಡಿಕೊಳ್ಳಲಿದೆ. ಇಂದು ನಾವು ಸ್ನೇಹಿತರನ್ನು ಮಾಡಿಕೊಳ್ಳುತ್ತಿದ್ದರೆ ಎನ್‌ಡಿಎ ಶತ್ರುಗಳನ್ನು ಮಾಡಿಕೊಳ್ಳುತ್ತಿದೆ ಎಂದರು.

ಪೆಟ್ರೋಲ್ ಮತ್ತು ಡೀಸೆಲ್‌ಗಳ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುವ ಮೂಲಕ ಸರಕಾರವು ದೇಶದ 10 ಲ.ಕೋ.ರೂ.ಗಳನ್ನು ಲೂಟಿ ಮಾಡಿದೆ ಮತ್ತು ಈ ಲೂಟಿಯ ಹಣವನ್ನು ಕರ್ನಾಟಕದಲ್ಲಿ ಶಾಸಕರನ್ನು ಬೇಟೆಯಾಡಲು ಬಳಸಲಾಗಿತ್ತು ಎಂದು ಆರೋಪಿಸಿದರು.

ಕರ್ನಾಟಕ ಚುನಾವಣೆಯ ಹಿನ್ನೆಲೆಯಲ್ಲಿ ಇಂಧನ ದರಗಳನ್ನು ಹೆಚ್ಚಿಸಿರಲಿಲ್ಲ ಎನ್ನುವುದನ್ನು ಬೆಟ್ಟು ಮಾಡಿದ ಅವರು,ಪ್ರಧಾನಿಗಳು ಸ್ವಂತ ಹಿತಾಸಕ್ತಿಯಿಂದ ಇಂಧನ ಬೆಲೆ ಏರಿಕೆಯನ್ನು ನಿಯಂತ್ರಿಸಬಹುದಾದರೆ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ವರ್ಷವಿಡೀ ಇಂಧನ ದರಗಳನ್ನೇಕೆ ನಿಯಂತ್ರಿಸಬಾರದು?, ಅಂದರೆ ಇಂಧನ ದರಗಳು ಪ್ರಧಾನಿಯ ಪಾಲಿಗೆ ಕೇವಲ ಚುನಾವಣಾ ಸಾಧನಗಳಾಗಿವೆ ಎಂದರು.

18 ಜೀವಗಳನ್ನು ಬಲಿ ತೆಗದುಕೊಂಡ ವಾರಣಾಸಿ ಸೇತುವೆ ಕುಸಿತ ದುರಂತವನ್ನು ಪ್ರಸ್ತಾಪಿಸಿದ ಶೇರಗಿಲ್,ನೊಂದವರಿಗೆ ಸಾಂತ್ವನ ಹೇಳಲು ಮೋದಿಯವರು ತನ್ನ ಲೋಕಸಭಾ ಕ್ಷೇತ್ರಕ್ಕೆ ಹೋಗದಿರುವುದು ತನಗೆ ಚುನಾವಣಾ ಲಾಭಗಳನ್ನು ನೀಡದ ಯಾವುದೇ ಘಟನೆಯ ಬಗ್ಗೆ ಅವರಿಗೆ ಆಸಕ್ತಿಯಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ಕುಟುಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X