Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾತಿ ಪದ್ಧತಿಯ ಸೂಕ್ಷತೆ ಅರಿತಾಗ ಜಾತಿ...

ಜಾತಿ ಪದ್ಧತಿಯ ಸೂಕ್ಷತೆ ಅರಿತಾಗ ಜಾತಿ ವ್ಯವಸ್ಥೆ ನಿರ್ಮೂಲನೆ ಸಾಧ್ಯ: ಜಿ.ಎನ್.ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ20 May 2018 7:43 PM IST
share

ಬೆಂಗಳೂರು, ಮೇ 20 : ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕು ಎಂದು ತೋರಿಕೆಗೆ ಸೀಮಿತವಾಗದೇ, ಜಾತಿ ಪದ್ಧತಿಯನ್ನು ಆಳಕ್ಕಿಳಿದು ಅರ್ಥ ಮಾಡಿಕೊಂಡಾಗ ಮಾತ್ರ ಅದನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಹಾಗೂ ಚಿಂತಕ ಜಿ.ಎನ್. ನಾಗರಾಜ್ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ಗಾಂಧಿ ಭವನದಲ್ಲಿ ಕ್ರಿಯಾ-ನವಕರ್ನಾಟಕ ಜಂಟಿಯಾಗಿ ಆಯೋಜಿಸಿದ್ದ ಜಾತಿ ದಮನ-ಅಸ್ಪಶ್ಯತೆಗಳ ವಿನಾಶ ಮತ್ತು ವರ್ಗ ಹೋರಾಟ-ಮಾರ್ಕ್ಸ್‌ವಾದಿ ಕಣ್ಣೋಟ’ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭೂ ಮಾಲಕತ್ವ ಹಾಗೂ ಜಾತಿ ವ್ಯವಸ್ಥೆ ಮತ್ತು ಆಧುನಿಕ ಬಂಡವಾಳಶಾಹಿ ವ್ಯವಸ್ಥೆ ಒಂದಕ್ಕೊಂದು ಆಂತರಿಕವಾಗಿ ತಳಕು ಹಾಕಿಕೊಂಡಿದೆ. ಅದನ್ನು ಅರ್ಥ ಮಾಡಿಕೊಂಡು ನಿವಾರಿಸಿಕೊಳ್ಳಬೇಕಿದೆ ಎಂದರು.

ಉತ್ಪಾದನಾ ಸಂಬಂಧ, ಉತ್ಪಾದನಾ ಪ್ರಕ್ರಿಯೆ, ಸಾಮಾಜಿ ರಚನೆಯೊಳಗೆ ಒಳ ಸಂಬಂಧವಿದ್ದು, ಅದನ್ನು ಅರ್ಥ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು, ಒಕ್ಕಲಿಗ, ದಲಿತ, ಕುರುಬ ಎಂಬ ಜಾತಿ ಆಧಾರದ ಮೇಲೆ ವಿಶ್ಲೇಷಣೆ ಮಾಡುತ್ತಿದ್ದರೆ ಏನೂ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಜಾತಿ ವ್ಯವಸ್ಥೆಯನ್ನು ಕೇವಲ ಜಾತಿಗಳ ಆಧಾರದ ಮೇಲೆ ವಿಂಗಡಿಸುವ ಬದಲಿಗೆ, ಸೂಕ್ಷ್ಮ ವಿಶ್ಲೇಷಣೆ ಮಾಡಬೇಕು ಎಂದು ಅವರು ಹೇಳಿದರು.

ಆಧುನಿಕ ಕಾಲಘಟ್ಟದಲ್ಲಿ ವರ್ಣ ವ್ಯವಸ್ಥೆ ಎಂದರೆ ಬಂಡವಾಳಶಾಹಿ ಹಾಗೂ ದುಡಿಯುವ ವರ್ಗ ಎಂದು ಬಿಂಬಿಸಲಾಗಿದೆ. ಆದರೆ, ಜಾತಿ ವ್ಯವಸ್ಥೆಯೂ ವರ್ಣ ವ್ಯವಸ್ಥೆಯ ಭಾಗವಾಗಿದೆ. ಅದನ್ನು ಮಾರ್ಕ್ಸ್ ಮಾತ್ರವಲ್ಲ, ಅಂಬೇಡ್ಕರ್ ಅವರೂ ಅರ್ಥ ಮಾಡಿಕೊಂಡಿದ್ದರು. ಸವರ್ಣ ಹಿಂದೂಗಳು ಎಲ್ಲರನ್ನು ಕಪಿಮುಷ್ಟಿಯಲ್ಲಿಟ್ಟುಕೊಂಡಿದ್ದು, ದಲಿತರು ಶೋಷಣೆಗೆ, ದಮನಕ್ಕೆ ಒಳಗಾಗುತ್ತಿದ್ದಾರೆ ಎಂದು ಅಂಬೇಡ್ಕರ್ ಹೇಳಿದ್ದರು ಎಂದು ನಾಗರಾಜ್ ತಿಳಿಸಿದರು.

ವರ್ಣ ಹಾಗೂ ಜಾತಿ ವ್ಯವಸ್ಥೆಯು ಅಂದಿನ ಕಾಲಘಟ್ಟದಲ್ಲಿ ಉದಯವಾದ ಭಾರತೀಯ ವರ್ಗ ವ್ಯವಸ್ಥೆಯಾಗಿದ್ದು, ಆರ್ಯರ ಕಾಲಘಟ್ಟದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ ಎಂಬ ಮೂರು ವರ್ಣಗಳು ಮಾತ್ರ ಇದ್ದವು. ಅನಂತರ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆ ವಿಸ್ತಾರವಾದಂತೆ ಶೂದ್ರ ಎಂಬ ವರ್ಣವನ್ನು ಸೃಷ್ಟಿಸಿಕೊಂಡಿದ್ದು, ದುಡಿಯುವ ವರ್ಗವಾಗಿದ್ದ ವೈಶ್ಯರು ತಮ್ಮ ವೃತ್ತಿಯನ್ನು ಶೂದ್ರರಿಗೆ ವರ್ಗಾಯಿಸಿದ್ದರು ಎಂದು ಅವರು ಹೇಳಿದರು.

ಬ್ರಾಹ್ಮಣರು ಕರ್ನಾಟಕಕ್ಕೆ ಪ್ರವೇಶ ಮಾಡುವ ಮೂಲಕ ತಮ್ಮ ಪ್ರಭುತ್ವವನ್ನು ವಿಸ್ತರಿಸಿಕೊಂಡರು. ಇಲ್ಲಿ ಆಡಳಿತ ನಡೆಸುತ್ತಿದ್ದ ಕುಲ ಪ್ರಭುತ್ವ ಹಾಗೂ ರಾಜಪ್ರಭುತ್ವಗಳಿಗೆ ವೈದಿಕಶಾಹಿ ಸಿದ್ಧಾಂತ ಆಕರ್ಷವಾಗಿ ಕಾಣಲಾರಂಭಿಸಿತು. ಕಾಲ ಕಳೆದಂತೆ ಎಲ್ಲರೂ ವರ್ಣ ವ್ಯವಸ್ಥೆಯನ್ನು ಅಪ್ಪಿಕೊಳ್ಳಲಾರಂಭಿಸಿದರು. ವೀರಶೈವರಾಗಿದ್ದ ಕೆಳದಿ ರಾಜವಂಶಸ್ಥರೂ ವೈದಿಕರನ್ನು ಅಪ್ಪಿಕೊಂಡರು ಎಂಬುದು ಶಿಲಾಶಾಸನಗಳಲ್ಲಿ ಉಲ್ಲೇಖವಾಗಿದೆ. ಅಲ್ಲದೆ, ಜೈನ ಧರ್ಮವೂ ಅವರನ್ನು ಒಪ್ಪಿಕೊಂಡಿದ್ದರಿಂದ ತಮ್ಮ ಪ್ರಾಭಲ್ಯವನ್ನು ವಿಸ್ತರಿಸಲು ಹೆಚ್ಚು ಸಮಯಾವಕಾಶ ಹಿಡಿಸಲಿಲ್ಲ ಎಂದರು.

ಕರ್ನಾಟಕದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರಭು ಗಾಮಂಡರು ಎಂಬ ಬುಡಕಟ್ಟು ಜನರು ಅಧಿಕಾರ ನಡೆಸುತ್ತಿದ್ದರು. ಆದರೆ, ವೈದಿಕರು ಪ್ರವೇಶ ಮಾಡುತ್ತಿದ್ದಂತೆ, ಅವರ ನಡುವೆ ಮೇಲ್ವರ್ಗ-ಕೆಳವರ್ಗ ಎಂದು ವಿಂಗಡಿಸಲಾಯಿತು. ಅನಂತರ ಶೂದ್ರರ ಒಳಗೆ ಮೇಲ್ವರ್ಗದವರು ಅತಿ ಹಿಂದುಳಿದವರನ್ನು ಶೋಷಣೆ ಮಾಡುವ ಮೂಲಕ ಭೂ ಮಾಲಕತ್ಪವನ್ನು ಕಾಪಾಡಿಕೊಳ್ಳಲು ಆರಂಭಿಸಿದರು ಎಂದ ಅವರು ಹೇಳಿದರು.

ಹಿಂದಿನ ಪಾಳೇಗಾರಿ ವರ್ಣ, ಜಾತಿ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದಲ್ಲಿ ನಾಶ ಮಾಡದೇ ಇಂದಿನ ಪ್ರಜಾಪ್ರಭುತ್ವಕ್ಕೆ ಪೂರಕವಾಗಿ ನಿರ್ಮಾಣವಾಗಿರುವ ಆಧುನಿಕ ಬಂಡವಾಳಶಾಹಿ ಜಾತಿ ಪದ್ಧತಿ ನಿರ್ಮೂಲನೆ ಮಾಡಲು ಅಸಾಧ್ಯ. ಹಳೆಯ ಶೋಷಣೆಯ ಮೇಲೆಯೇ ಆಧುನಿಕ ಶೋಷಣೆ ಪದ್ಧತಿ ರೂಪುಗೊಂಡಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X