Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಸಿಕೆ ವಂಚಿತರಿಗೆ ಲಸಿಕೆ ಹಾಕಲು ಮಿಷನ್...

ಲಸಿಕೆ ವಂಚಿತರಿಗೆ ಲಸಿಕೆ ಹಾಕಲು ಮಿಷನ್ ಇಂದ್ರಧನುಷ್ ಕಾರ್ಯಕ್ರಮ: ಶಿವಮೊಗ್ಗ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ20 May 2018 9:10 PM IST
share

ಶಿವಮೊಗ್ಗ, ಮೇ 20 : ಲಸಿಕೆಯಿಂದ ತಡೆಗಟ್ಟಬಹುದಾದ ಒಂಬತ್ತು ರೋಗಗಳ ವಿರುದ್ಧ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಲಸಿಕೆ ವಂಚಿತ ಮಕ್ಕಳ ಹಾಗೂ ಗರ್ಭಿಣಿಯರಿಗೆ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗ್ರಾಮ ಸ್ವರಾಜ್ ಅಭಿಯಾನ ಹಾಗೂ ತೀವ್ರತರಹದ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನದ ಕುರಿತ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಈ ಲಸಿಕೆಯನ್ನು ಗ್ರಾಮ ಸ್ವರಾಜ್ ಅಭಿಯಾನ, ಮಿಷನ್ ಇಂದ್ರಧನುಷ್ ಯೋಜನೆಯಡಿಯಲ್ಲಿ 0-2, 5-6ವರ್ಷದೊಳಗಿನ ಲಸಿಕೆ ವಂಚಿತರಾದವರು ಹಾಗೂ ಗರ್ಭಿಣಿ ಸ್ತ್ರೀಯರಿಗೆ ಮೂರು ಹಂತದಲ್ಲಿ ಲಸಿಕೆ ನೀಡಲಾಗುವುದು' ಎಂದರು.

ಮೇ.23, 25 ಮತ್ತು 26ರಂದು, ಜೂನ್.20, 22 ಮತ್ತು 23ರಂದು ಹಾಗೂ ಜುಲೈಯ 18, 20 ಮತ್ತು 21ರಂದು ಲಸಿಕೆ ಹಾಕಲಾಗುವುದು. ಜಿಲ್ಲೆಯ ಸೊರಬ, ಭದ್ರಾವತಿ, ಶಿವಮೊಗ್ಗ ಹಾಗೂ ಶಿಕಾರಿಪುರ ತಾಲೂಕಿನ ಅತಿ ಹಿಂದುಳಿದ ಗ್ರಾಮಗಳ ಆಯ್ದ 32ಗ್ರಾಮಗಳಲ್ಲಿ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದರು. 

ಪಾಕ್ಷಿಕ ಕಾರ್ಯಕ್ರಮ: ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಸದುದ್ದೇಶದಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಮೇ 28ರಿಂದ ಜೂನ್ 09ರವರೆಗೆ ತೀವ್ರತರಹದ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕವನ್ನು ಆಚರಿಸಲು ಉದ್ದೇಶಿಸಲಾಗಿದೆ. ದೇಶದಲ್ಲಿ ಅತಿಸಾರ ಭೇದಿಯಿಂದ 5 ವರ್ಷದೊಳಗಿನ ಶೇ.10 ರಷ್ಟು ಮಕ್ಕಳು ಮರಣವನ್ನಪ್ಪುತ್ತಿದ್ದಾರೆ. ಈ ಕಾಯಿಲೆ ಬೇಸಿಗೆ ಹಾಗೂ ಮಳೆಗಾಲದ ತಿಂಗಳುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದ್ದು, ಬಡ ಕುಟುಂಬಗಳ ಶಿಶುಗಳು ಇದಕ್ಕೆ ಬಲಿಯಾಗುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ನುಡಿದರು.

ನೈರ್ಮಲ್ಯ ಹಾಗೂ ಸ್ವಚ್ಚತೆಯ ಕೊರತೆ, ಅಶುದ್ಧ ನೀರು, ಚರಂಡಿ ಮಿಶ್ರಿತ ನೀರಿನ ಬಳಕೆ, ಕೈ ತೊಳೆಯುವ ಸರಿಯಾದ ವಿಧಾನ ಅನುಸರಿಸದೇ ಇರುವುದು, ಇಂತಹ ಅನೇಕ ಕಾರಣಗಳು ಅತಿಸಾರ ಬೇದಿಗೆ ಕಾರಣವಾಗಲಿವೆ. ಇಂತಹ ಸಂದರ್ಭದಲ್ಲಿ ಪೋಷಕರು ಮಕ್ಕಳಿಗೆ ಸಕಾಲಿಕ ಚಿಕಿತ್ಸೆ ಕೊಡಿಸುವುದಲ್ಲದೇ ಓ.ಆರ್.ಎಸ್.ನ್ನು ಬಳಸುವಂತೆ ಅವರು ಸೂಚಿಸಿದರು.

ಅತಿಸಾರ ಬೇದಿ ತಡೆಗಟ್ಟುವಲ್ಲಿ 2ವರ್ಷದೊಳಗಿನ ಮಕ್ಕಳಿಗೆ ನಿರಂತರವಾಗಿ ಹಾಲುಣಿಸುವುದು, ಆಹಾರ ಪದಾರ್ಥಗಳು ಕಲುಷಿತವಾಗದಂತೆ ನೋಡಿಕೊಳ್ಳಬೇಕೆಂದವರು ನುಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ಆರ್.ಸಿ.ಹೆಚ್.ಅಧಿಕಾರಿ ಡಾ.ನಟರಾಜ್, ಡಾ.ಸತೀಶ್ಚಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್.ಮಚ್ಛಾಡೋ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X