Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಡಿ ಸಮೀಪದ ತಟಸ್ಥ ನೆಲದಿಂದ ಹೋಗಿ

ಗಡಿ ಸಮೀಪದ ತಟಸ್ಥ ನೆಲದಿಂದ ಹೋಗಿ

ರೊಹಿಂಗ್ಯಾ ಮುಸ್ಲಿಮರಿಗೆ ಮ್ಯಾನ್ಮಾರ್ ಸೈನಿಕರಿಂದ ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ20 May 2018 11:25 PM IST
share
ಗಡಿ ಸಮೀಪದ ತಟಸ್ಥ ನೆಲದಿಂದ ಹೋಗಿ

ಟೊಂಬ್ರು (ಬಾಂಗ್ಲಾದೇಶ), ಮೇ 20: ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಗಳ ನಡುವಿನ ತಟಸ್ಥ ನೆಲವನ್ನು ತಕ್ಷಣ ತೊರೆಯುವಂತೆ ರೊಹಿಂಗ್ಯಾ ಮುಸ್ಲಿಮರಿಗೆ ಮ್ಯಾನ್ಮಾರ್ ಸೈನಿಕರು ಆದೇಶಿಸಿದ್ದಾರೆ. ಈ ಸಂಬಂಧ ಸೈನಿಕರು ಗಡಿ ಸಮೀಪ ಧ್ವನಿವರ್ಧಕಗಳ ಮೂಲಕ ಘೋಷಣೆಗಳನ್ನು ಮಾಡಿದ್ದಾರೆ ಎಂದು ನಿರಾಶ್ರಿತರು ರವಿವಾರ ಹೇಳಿದ್ದಾರೆ.

 ಕಳೆದ ವರ್ಷದ ಆಗಸ್ಟ್‌ನಲ್ಲಿ ಮ್ಯಾನ್ಮಾರ್ ಸೈನಿಕರು ನಡೆಸಿದ ಅಮಾನುಷ ದಮನ ಕಾರ್ಯಾಚರಣೆಗೆ ಬೆದರಿ ಸುಮಾರು 7 ಲಕ್ಷ ರೊಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಪಲಾಯನಗೈದಿರುವುದನ್ನು ಸ್ಮರಿಸಬಹುದಾಗಿದೆ. ಈ ಪೈಕಿ ಸುಮಾರು 6,000 ನಿರಾಶ್ರಿತರು ಉಭಯ ದೇಶಗಳ ನಡುವೆ ಯಾರಿಗೂ ಸೇರದ ಕಿರಿದಾದ ಜಮೀನಿನಲ್ಲಿ ವಾಸಿಸುತ್ತಿದ್ದಾರೆ.

ರೊಹಿಂಗ್ಯಾ ನಿರಾಶ್ರಿತರ ಪೈಕಿ ಹೆಚ್ಚಿನವರು ಬಾಂಗ್ಲಾದೇಶದ ಬೃಹತ್ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ತಟಸ್ಥ ನೆಲದಲ್ಲಿ ವಾಸಿಸುತ್ತಿರುವ ನಿರಾಶ್ರಿತರು ಅಲ್ಲಿಂದ ಬಾಂಗ್ಲಾದೇಶಕ್ಕೆ ಹೋಗಬೇಕೆಂದು ಈ ಹಿಂದೆಯೂ ಮ್ಯಾನ್ಮಾರ್ ಧ್ವನಿವರ್ಧಕಗಳ ಮೂಲಕ ಸೂಚನೆಗಳನ್ನು ನೀಡಿತ್ತು. ಆದಾಗ್ಯೂ, ಈ ರೀತಿಯಾಗಿ ಧ್ವನಿವರ್ಧಕಗಳ ಮೂಲಕ ಆದೇಶ ನೀಡುವುದನ್ನು ನಿಲ್ಲಿಸಲು ಮ್ಯಾನ್ಮಾರ್ ಫೆಬ್ರವರಿಯಲ್ಲಿ ಒಪ್ಪಿತ್ತು.

ತಟಸ್ಥ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಭಾರೀ ಪ್ರಮಾಣದ ಸೈನಿಕರನ್ನೂ ಮ್ಯಾನ್ಮಾರ್ ಹಿಂದಕ್ಕೆ ಪಡೆದುಕೊಂಡಿತ್ತು. ಈ ಸೈನಿಕರು ತಂತಿ ಬೇಲಿಯ ಮತ್ತೊಂದು ಬದಿಯಲ್ಲಿ ವಾಸಿಸುತ್ತಿದ್ದ ತಮಗೆ ಬೆದರಿಕೆಯುಡ್ಡುತ್ತಿದ್ದರು ಎಂಬುದಾಗಿ ರೊಹಿಂಗ್ಯಾ ಮುಸ್ಲಿಮರು ಆರೋಪಿಸಿದ್ದರು.

ಆದರೆ, ಈ ವಾರಾಂತ್ಯದಲ್ಲಿ ಮ್ಯಾನ್ಮಾರ್ ಸೈನಿಕರು ಧ್ವನಿವರ್ಧಕಗಳ ಮೂಲಕ ಸ್ಥಳ ಬಿಟ್ಟು ಹೋಗುವಂತೆ ಆದೇಶಿಸುವುದನ್ನು ಮುಂದುವರಿಸಿದ್ದಾರೆ ಎಂದು ರೊಹಿಂಗ್ಯಾ ಸಮುದಾಯದ ನಾಯಕರು ಆರೋಪಿಸಿದ್ದಾರೆ. ಇದರೊಂದಿಗೆ, ಈಗಾಗಲೇ ಉದ್ವಿಗ್ನತೆ ನೆಲೆಸಿರುವ ಬಾಂಗ್ಲಾದೇಶ-ಮ್ಯಾನ್ಮಾರ್ ಗಡಿಯ ಪರಿಸ್ಥಿತಿ ಹದಗೆಟ್ಟಿದೆ.

‘‘ಅವರು ನಿನ್ನೆ ಹಲವು ಬಾರಿ ಈ ಘೋಷಣೆಗಳನ್ನು ಕೇಳಿಸಿದ್ದಾರೆ. ಇಂದು ಬೆಳಗ್ಗೆಯೂ ಅದನ್ನು ಪುನರಾವರ್ತಿಸಿದ್ದಾರೆ. ಇದು ತುಂಬಾ ಆತಂಕಕಾರಿಯಾಗಿದೆ ಹಾಗೂ ನಾವು ಹೆದರಿದ್ದೇವೆ’’ ಎಂದು ತಟಸ್ಥ ಪ್ರದೇಶದಲ್ಲಿ ನೆಲೆಸಿರುವ ರೊಹಿಂಗ್ಯಾ ಸಮುದಾಯದ ನಾಯಕ ಮುಹಮ್ಮದ್ ಆರಿಫ್ ಹೇಳಿದರು.

ಅದು ನಮ್ಮ ತಾಯ್ನೆಲ, ನಾವ್ಯಾಕೆ ಹೋಗಬೇಕು?

‘‘ಮ್ಯಾನ್ಮಾರ್ ವ್ಯಾಪ್ತಿಯಲ್ಲಿ ಬರುವ ಸ್ಥಳದಿಂದ ಹೋಗಿ, ಇಲ್ಲವೇ ಶಿಕ್ಷೆ ಎದುರಿಸಿ’’ ಎಂಬ ಘೋಷಣೆಗಳನ್ನು ಬರ್ಮಿಶ್ ಮತ್ತು ರೊಹಿಂಗ್ಯಾ ಭಾಷೆಗಳಲ್ಲಿ ಪ್ರಸಾರಿಸಲಾಗುತ್ತಿದೆ.

‘‘ನಾವು ಮ್ಯಾನ್ಮಾರ್‌ನ ಪ್ರಜೆಗಳು. ಅದು ನಮ್ಮ ತಾಯ್ನೆಲ. ಅಲ್ಲಿರುವ ಎಲ್ಲ ಹಕ್ಕುಗಳು ನಮಗಿವೆ. ನಾವು ಬೇರೆ ಕಡೆ ಯಾಕೆ ಹೋಗಬೇಕು?’’ ಎಂದು ಸಮುದಾಯದ ಇನ್ನೋರ್ವ ನಾಯಕ ದಿಲ್ ಮುಹಮ್ಮದ್ ಪ್ರಶ್ನಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X