Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ಈ ಗ್ರಾಮಸ್ಥರ ಮೇಲ್ಮನವಿಯ ವಿಚಾರಣೆ...

ಭಾರತದ ಈ ಗ್ರಾಮಸ್ಥರ ಮೇಲ್ಮನವಿಯ ವಿಚಾರಣೆ ನಡೆಸಲಿದೆ ಅಮೆರಿಕದ ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ22 May 2018 9:23 PM IST
share
ಭಾರತದ ಈ ಗ್ರಾಮಸ್ಥರ ಮೇಲ್ಮನವಿಯ ವಿಚಾರಣೆ ನಡೆಸಲಿದೆ ಅಮೆರಿಕದ ಸುಪ್ರೀಂಕೋರ್ಟ್

ವಾಷಿಂಗ್ಟನ್,ಮೇ 22: ವಾಷಿಂಗ್ಟನ್ ಡಿಸಿ ಮೂಲದ ಇಂಟರ್‌ನ್ಯಾಷನಲ್ ಫೈನಾನ್ಸ್ ಕಾರ್ಪೊರೇಷನ್(ಐಎಫ್‌ಸಿ)ನ ಆರ್ಥಿಕ ನೆರವಿನಲ್ಲಿ ಗುಜರಾತ್‌ನ ಕಛ್ ಜಿಲ್ಲೆಯ ತುಂಡಾ ಗ್ರಾಮದಲ್ಲಿ ಸ್ಥಾಪಿಸಲಾಗಿರುವ ಉಷ್ಣ ವಿದ್ಯುತ್ ಸ್ಥಾವರದ ವಿರುದ್ಧ ಅಲ್ಲಿಯ ಗ್ರಾಮಸ್ಥರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಅಮೆರಿಕದ ಸರ್ವೋಚ್ಚ ನ್ಯಾಯಾಲಯವು ಸೋಮವಾರ ಒಪ್ಪಿಕೊಂಡಿದೆ.

 ಅಕ್ಟೋಬರ್‌ನಲ್ಲಿ ಈ ವಿಚಾರಣೆಯು ಆರಂಭಗೊಳ್ಳಲಿದೆ. ಈ ಸ್ಥಾವರವು ಸ್ಥಳೀಯ ಪರಿಸರಕ್ಕೆ ಭಾರೀ ಹಾನಿಯನ್ನುಂಟು ಮಾಡಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

 ಬುಧಾ ಇಸ್ಮಾಯೀಲ್ ಜಾಮ್ ನೇತೃತ್ವದಲ್ಲಿ ಹಲವಾರು ರೈತರು ಮತ್ತು ಮೀನುಗಾರರು ಸೇರಿದಂತೆ ಗ್ರಾಮಸ್ಥರು ವಿದ್ಯುತ್ ಉತ್ಪಾದನೆಗಾಗಿ ಕಲ್ಲಿದ್ದಲು ಬಳಕೆಯಾಗುತ್ತಿರುವ ಈ ಸ್ಥಾವರದಿಂದಾಗಿ ಪರಿಸರಕ್ಕೆ ಅಪಾರ ಹಾನಿಯುಂಟಾಗಿದೆ ಎಂದು ಆರೋಪಿಸಿದ್ದಾರೆ.

ವಿಶ್ವ ಬ್ಯಾಂಕಿನ ಸಾಲ ನೀಡಿಕೆ ಘಟಕವಾಗಿರುವ ಐಎಫ್‌ಸಿಯು ತುಂಡಾದ ಟಾಟಾ ಮುಂದ್ರಾ ವಿದ್ಯುತ್ ಸ್ಥಾವರಕ್ಕೆ 40 ಮಿಲಿಯನ್ ಡಾಲರ್‌ಗಳ ಆರ್ಥಿಕ ನೆರವನ್ನು ಒದಗಿಸಿದೆ.

ಐಎಫ್‌ಸಿಯು 1945ರ ಇಂಟರ್‌ನ್ಯಾಷನಲ್ ಆರ್ಗನೈಸೇಶನ್ಸ್ ಇಮ್ಯುನಿಟಿ ಕಾಯ್ದೆಯಡಿ ಕಾನೂನು ಕ್ರಮಗಳಿಂದ ವಿನಾಯಿತಿಯನ್ನು ಹೊಂದಿದೆಯೇ ಎನ್ನುವುದನ್ನು ತಾನು ನಿರ್ಧರಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

  ಐಎಫ್‌ಸಿಯು ಇತರ ದೇಶಗಳಲ್ಲಿಯಂತೆ ಭಾರತದಲ್ಲಿಯೂ ಈ ಕಾಯ್ದೆಯಡಿ ವಿನಾಯಿತಿ ಹೊಂದಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದ ಕೆಳ ನ್ಯಾಯಾಲಯಗಳು ತಮ್ಮ ಅರ್ಜಿಗಳನ್ನು ವಜಾಗೊಳಿಸಿದ ಬಳಿಕ ಜಾಮ್ ಮತ್ತು ಇತರ ಅರ್ಜಿದಾರರು ಸುಪ್ರೀಂ ಕೋರ್ಟ್‌ನ ಮೆಟ್ಟಿಲನ್ನೇರಿದ್ದಾರೆ.

ಟಾಟಾ ಮುಂದ್ರಾ ವಿದ್ಯುತ್ ಸ್ಥಾವರವು ಅಂತರರಾಷ್ಟ್ರೀಯ ಪರಿಸರ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲಗೊಂಡಿದೆ ಮತ್ತು ಇದು ಸ್ಥಳೀಯ ಪರಿಸರವನ್ನು ನಾಶಗೊಳಿಸಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

2015ರಲ್ಲಿ ಅರ್ಜಿದಾರರಾದ ಭಾರತೀಯ ರೈತರು,ಮೀನುಗಾರರು,ಮೀನುಗಾರರ ಕಾರ್ಮಿಕ ಒಕ್ಕೂಟ ಮತ್ತು ಸ್ಥಳೀಯ ಸರಕಾರಿ ಸಂಸ್ಥೆ ಕೊಲಂಬಿಯಾ ಜಿಲ್ಲಾ ನ್ಯಾಯಾಲಯದಲ್ಲಿ ಐಎಫ್‌ಸಿ ವಿರುದ್ಧ ದಾವೆಯನ್ನು ಹೂಡಿದ್ದರಾದರೂ 2016ರಲ್ಲಿ ಅದರಲ್ಲಿ ಸೋಲಾಗಿತ್ತು. ಕಳೆದ ವರ್ಷ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಕೊಲಂಬಿಯಾ ಜಿಲ್ಲೆಯ ಮೇಲ್ಮನವಿಗಳ ಅಮೆರಿಕನ್ ನ್ಯಾಯಾಲಯವೂ ತಿರಸ್ಕರಿಸಿತ್ತು. ಐಎಫ್‌ಸಿ ಕಾಯ್ದೆಯಡಿ ವಿನಾಯಿತಿಯನ್ನು ಹೊಂದಿದೆ ಎಂದು ಅವು ಎತ್ತಿ ಹಿಡಿದಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X