Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಎಲ್ಲರ...

ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ: ಹಾಸನ ಜಿಲ್ಲಾಧಿಕಾರಿ ಜಾಫರ್

ವಾರ್ತಾಭಾರತಿವಾರ್ತಾಭಾರತಿ22 May 2018 10:06 PM IST
share
ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ: ಹಾಸನ ಜಿಲ್ಲಾಧಿಕಾರಿ ಜಾಫರ್

ಹಾಸನ,ಮೇ.22: ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಜೊತೆಗೆ ಸೊಳ್ಳೆ ಉತ್ಪತ್ತಿ ನಿಯಂತ್ರಣ ತಡೆಗಟ್ಟಲು ಯಾವ ಕಡೆಯೂ ನೀರು ನಿಲ್ಲದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಾಫರ್ ತಿಳಿಸಿದರು.

ನಗರದ ಗಂಧದ ಕೋಟೆ ಆವರಣದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು(ವಿಭಜಿತ) ಬಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂಗವಾಗಿ ಅರಿವು ಮೂಡಿಸುವ ಜಾಗೃತಿ ಜಾಥವನ್ನು ಹಸಿರು ಭಾವುಟ ಪ್ರದರ್ಶಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಜನತೆ ಮುಂಜಾಗೃತೆ ವಹಿಸಿ ನಿಯಮ ಪಾಲಿಸಿದರೆ ಇಂತಹ ಜ್ವರದಿಂದ ದೂರ ಇರಬಹುದು. ಮಲಗುವಾಗ ಸೊಳ್ಳೆ ಪರದೆ, ಯಾವ ಸ್ಥಳದಲ್ಲೂ ನೀರು ನಿಲ್ಲದಂತೆ ಜಾಗೃತೆ ಮಾಡಿದರೆ ಡೆಂಗ್ಯೂನಿಂದ ದೂರ ಇರಲು ಸಾಧ್ಯ ಎಂದು ಕಿವಿಮಾತು ಹೇಳಿದರು.

ಈಗಾಗಲೇ ಮಳೆ ಆರಂಭವಾಗಿದೆ. ಅಲ್ಲಲ್ಲಿ ನೀರು ನಿಲ್ಲದ ಹಾಗೆ ಗಮನ ಕೊಡಬೇಕು. ನೀರು ನಿಲ್ಲುವ ತೊಟ್ಟಿ, ಡ್ರಮ್, ಬ್ಯಾರೆಲ್, ಏರ್ ಕೂಲರ್ ಮೊದಲಾದ ಸ್ಥಳಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿದ ಬಳಿಕ ಮತ್ತೆ ನೀರು ತುಂಬಬೇಕು. ಡೆಂಗ್ಯೂ ಜ್ಚರದ ನಿಯಂತ್ರಣಕ್ಕೆ ಸರಿಯಾದ ಕ್ರಮ ಅನುಸರಿಸಿದರೆ ಸಾಕು ಎಂದು ಸಲಹೆ ನೀಡಿದರು. 

ಡೆಂಗ್ಯು ನಿಯಂತ್ರಣಕ್ಕಾಗಿ ನಗರಸಭೆ ಮತ್ತು ಗ್ರಾಮ ಪಂಚಾಯತ್ ಮೂಲಕ ಅಲ್ಲಿನ ಜನರಿಗೆ ಜಾಗೃತಿ ಮೂಡಿಸಬೇಕು. ಹಾಗೆಯೇ ಆರೋಗ್ಯ ಇಲಾಖೆ ಮೂಲಕ ಸಾಕಷ್ಟು ಪ್ರಚಾರವನ್ನು ಮಾಡಲಾಗುತ್ತಿದೆ ಎಂದು ಹೇಳಿದರು. ಹಾಸನದಲ್ಲಿ ಡೆಂಗ್ಯೂ ಬಗ್ಗೆ ಹೆಚ್ಚಿನ ಮುಂಜಾಗ್ರತೆ ವಹಿಸಿರುವುದರಿಂದ ರೋಗಗಳು ಕಾಣಿಸಿಕೊಂಡಿರುವುದಿಲ್ಲ ಎಂದರು. ಡೆಂಗ್ಯೂ ಜ್ವರ ನಿಯಂತ್ರಣ ಆರೋಗ್ಯ ಇಲಾಖೆ ಒಂದರಿಂದಲೇ ಸಾಧ್ಯವಿಲ್ಲ. ಜೊತೆಗೆ ಇತರೆ ಇಲಾಖೆ ಮತ್ತು ಸಾರ್ವಜನಿಕರು ಮುಂದಾಗಬೇಕು ಎಂದು ಕರೆ ನೀಡಿದರು.

ಜಾಥವು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು(ವಿಭಜಿತ) ಬಳಿಯಿಂದ ಹೊರಟು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕರಪತ್ರಗಳು, ನಾಮ ಫಲಕಗಳು ಗಮನ ಸೆಳೆದವು.

ಇದೆ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ವೆಂಕಟೇಶ್, ಮಲೇರಿಯಾ ನಿಯಂತ್ರಣಾಧಿಕಾರಿ ರಾಜಗೋಪಾಲ್, ನಾಗೇಶ್ ಆರಾಧ್ಯ, ವಾರ್ತಾಧಿಕಾರಿ ವಿನೋದ್ ಚಂದ್ರ ಇತರರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X