ಬಿಜೆಪಿಯಿಂದ ಮೇ.23 ರಂದು ಕರಾಳ ದಿನ
ಉಡುಪಿ, ಮೇ 22: ರಾಜ್ಯದ ಜನತೆ ಭಾರತೀಯ ಜನತಾ ಪಾರ್ಟಿಗೆ 5 ವರ್ಷಗಳ ಕಾಲ ಆಡಳಿತ ನಡೆಸಲು ಅವಕಾಶ ನೀಡಿಯೂ ಕೂಡ ಕಾಂಗ್ರೆಸ್ ಮತ್ತು ಜೆಡಿಎಸ್ ಜನರ ತೀರ್ಪಿಗೆ ವಿರುದ್ಧವಾಗಿ ಸರಕಾರ ರಚನೆ ಮಾಡಿ ಮೇ.23ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆಕೊಟ್ಟ ಮೇರೆಗೆ ರಾಜ್ಯಾದ್ಯಂತ ಕರಾಳ ದಿನಾಚರಣೆ ಆಚರಿಸಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 11ರಿಂದ 12 ರವರೆಗೆ ಕರಾಳ ದಿನಾಚರಣೆ ನಡೆಸಿ ಪ್ರತಿಭಟನೆ ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಶಾಸಕರು, ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಈ ಕರಾಳ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಟ್ಟಾರ್ ತಿಳಿಸಿದ್ದಾರೆ.
Next Story