Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗರಿಕ ಸೇವೆ ಉದ್ಯೋಗ ಅರ್ಹತೆಗೆ ಹೊಸ...

ನಾಗರಿಕ ಸೇವೆ ಉದ್ಯೋಗ ಅರ್ಹತೆಗೆ ಹೊಸ ಮಾನದಂಡಕ್ಕೆ ಚಿಂತನೆ: ಕೇಂದ್ರ ಸರಕಾರದ ವಿರುದ್ಧ ಅಭ್ಯರ್ಥಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 May 2018 11:09 PM IST
share
ನಾಗರಿಕ ಸೇವೆ ಉದ್ಯೋಗ ಅರ್ಹತೆಗೆ ಹೊಸ ಮಾನದಂಡಕ್ಕೆ ಚಿಂತನೆ: ಕೇಂದ್ರ ಸರಕಾರದ ವಿರುದ್ಧ ಅಭ್ಯರ್ಥಿಗಳ ಆಕ್ರೋಶ

ಹೊಸದಿಲ್ಲಿ, ಮೇ 22: ಈ ಹಿಂದೆ ಐಎಎಸ್ ಅಥವಾ ಐಪಿಎಸ್ ಸೇವೆಗೆ ಅರ್ಹರಾಗಲು ಕೇವಲ ಕೇಂದ್ರ ಸಾರ್ವಜನಿಕ ಸೇವಾ ಆಯೋಗ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದರೆ ಸಾಕಾಗುತ್ತಿತ್ತು. ಆದರೆ ಇದೀಗ ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಗಮನಾರ್ಹ ಬದಲಾವಣೆಯನ್ನು ಮಾಡಲು ಹೊರಟಿದ್ದು ಈ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ.

 ವಿವಿಧ ಸೇವಾ ವಲಯಗಳಾದ ಐಪಿಎಸ್, ಇಎಫ್‌ಎಸ್ ಅಥವಾ ಐಎಎಸ್‌ಗೆ ಅರ್ಹತೆ ಪಡೆಯಲು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡರೆ ಸಾಕಾಗುವುದಿಲ್ಲ ಬದಲಿಗೆ ಸರಕಾರ ಮೂರು ತಿಂಗಳ ಕಾಲ ನಡೆಸುವ ಫೌಂಡೇಶನ್ ಕೋರ್ಸ್‌ನಲ್ಲಿ ಈ ಅಭ್ಯರ್ಥಿಗಳ ನಿರ್ವಹಣೆಯ ಆಧಾರದಲ್ಲಿ ಅವರ ಆಯ್ಕೆ ಮಾಡಲಾಗುವುದು ಎಂದು ಕಳೆದ ವಾರ ಪ್ರಧಾನ ಮಂತ್ರಿ ಕಚೇರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಆದರೆ ಈ ತರಬೇತಿಯ ವೇಳೆ ಅಭ್ಯರ್ಥಿಗಳಿಗೆ ಅಂಕವನ್ನು ನೀಡುವವರು ಯಾರು ಎಂಬ ಕುರಿತು ಸರಕಾರ ಸ್ಪಷ್ಟನೆಯನ್ನು ನೀಡಿಲ್ಲ. ಕೆಲವು ಅಭ್ಯರ್ಥಿಗಳ ಪ್ರಕಾರ, ಈ ಕೋರ್ಸ್‌ಗಳು ನಡೆಯುವ ಮಸ್ಸೂರಿಯ ಅಕಾಡೆಮಿಯ ತರಬೇತುದಾರರೇ ಅಭ್ಯರ್ಥಿಗಳಿಗೆ ಅಂಕ ನೀಡುವ ತೀರ್ಪುಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಆದರೆ ಈ ವರ್ಷ ಯುಪಿಎಸ್‌ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಮತ್ತು ಹಿಂದಿನ ಟಾಪರ್‌ಗಳ ಪ್ರಕಾರ ಈ ವಿಧಾನವು ಒಂದು ಅನಿಯಂತ್ರಿತ ಮೌಲ್ಯಮಾಪನವಾಗಿದ್ದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದ ಈ ಹಿಂದಿನ ಪಾರದರ್ಶಕ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಲಿದೆ.

ಈ ಹಿಂದೆ ಭಾರತೀಯ ಆಡಳಿತಾತ್ಮಕ ಸೇವೆಗೆ ಅತ್ಯಧಿಕ ಅಂಕಗಳ ವಿದ್ಯಾರ್ಥಿಗಳು ಆಯ್ಕೆಯಾದರೆ ಭಾರತೀಯ ವಿದೇಶ ಸೇವೆಗೆ ನಂತರದ ಸ್ಥಾನ ಹಾಗೂ ಕೊನೆಯಲ್ಲಿ ಭಾರತೀಯ ಪೊಲೀಸ್ ಸೇವೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು. ಈ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುವ ಸಾಧ್ಯತೆಯಿದೆ. ಈಗಿನ ವ್ಯವಸ್ಥೆಯಲ್ಲಿ ಉತ್ತಮ ಅಂಕ ಪಡೆದವರಷ್ಟೇ ಆಯಾ ಪದವಿಗೆ ಆಯ್ಕೆಯಾಗುತ್ತಾರೆ. ಆದರೆ ಸರಕಾರದ ಹೊಸ ಯೋಜನೆ ಜಾರಿಗೆ ಬಂದರೆ ನಮಗೆ ಬೇಕಾದ ಅಭ್ಯರ್ಥಿಯನ್ನು ತೀರ್ಪುಗಾರರ ಮೇಲೆ ಒತ್ತಡ ಹೇರುವ ಮೂಲಕ ಫೌಂಡೇಶನ್ ಕೋರ್ಸ್‌ನಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯುವ ಮೂಲಕ ಆಯ್ಕೆ ಮಾಡಿಕೊಳ್ಳಬಹುದಾದ ಅಪಾಯವಿದೆ ಎಂದು ಯುಪಿಎಸ್‌ಸಿಯ ಮಾಜಿ ಸದಸ್ಯರು ಅಭಿಪ್ರಾಯಪಡುತ್ತಾರೆ. ಸದ್ಯ ಇದು ಕೇವಲ ಪ್ರಸ್ತಾವನೆ ಮಾತ್ರ. ಈ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದ ನಂತರವೇ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನ ಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X