ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ
ಬೆಂಗಳೂರು, ಮೇ, 23: ವಿಧಾನಸೌಧದ ಸುತ್ತಮುತ್ತ ಸೇರಿದಂತೆ ಬೆಂಗಳೂರಿನ ಹಲವೆಡೆ ಅರ್ಧಗಂಟೆಯಿಂದ ಮಳೆ ಸುರಿಯುತ್ತಿದ್ದು, ಇಂದು ಸಂಜೆ 4:30ಕ್ಕೆ ನಿಗದಿಯಾಗಿರುವ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ.
ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾಗಲು ಜೆಡಿಎಸ್ ಹಾಗೂ ಕಾಂಗ್ರೆಸ್ನ ಕಾರ್ಯಕರ್ತರು ವಿಧಾನಸೌಧದ ಮುಂಭಾಗ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರು. ದಿಢೀರನೇ ಮಳೆ ಬಂದ ಕಾರಣ ಕಾರ್ಯಕರ್ತರು ಅಲ್ಲಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ ಶುಭ ಕೋರಿ ಹಾಕಲಾಗಿದ್ದ ಬ್ಯಾನರ್, ಕಟೌಟ್ ಹಾಗೂ ಕುರ್ಚಿಗಳ ಮೊರೆ ಹೋದರು.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಎಚ್ಡಿ ಕುಮಾರ ಸ್ವಾಮಿಗೆ ಶುಭ ಹಾರೈಸಲು ಕೇರಳ, ಆಂಧ್ರಪ್ರದೇಶ, ಪಶ್ಚಿಮಬಂಗಾಳ,ಪುದುಚೇರಿ ಮುಖ್ಯಮಂತ್ರಿಗಳು ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ.
Next Story