Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀನಗರ ಹೋಟೆಲ್ ನಲ್ಲಿ ಯುವತಿ ಜೊತೆ...

ಶ್ರೀನಗರ ಹೋಟೆಲ್ ನಲ್ಲಿ ಯುವತಿ ಜೊತೆ ಇದ್ದ ಸೇನಾಧಿಕಾರಿ ಪೊಲೀಸ್ ವಶಕ್ಕೆ

ಮಾನವ ಗುರಾಣಿ ಬಳಸಿ ಸೇನಾ ಮುಖ್ಯಸ್ಥರ ಪ್ರಶಂಸೆ ಗಿಟ್ಟಿಸಿದ್ದ ಮೇಜರ್ ಗೊಗೋಯಿ

ವಾರ್ತಾಭಾರತಿವಾರ್ತಾಭಾರತಿ23 May 2018 5:00 PM IST
share
ಶ್ರೀನಗರ ಹೋಟೆಲ್ ನಲ್ಲಿ ಯುವತಿ ಜೊತೆ ಇದ್ದ ಸೇನಾಧಿಕಾರಿ ಪೊಲೀಸ್ ವಶಕ್ಕೆ

ಶ್ರೀನಗರ, ಮೇ 23: ಕಳೆದ ವರ್ಷ ಯುವಕನೊಬ್ಬನನ್ನು ತನ್ನ ಜೀಪ್‌ನ ಮುಂದೆ ಮಾನವ ಕವಚದಂತೆ ಕಟ್ಟಿಹಾಕಿ ಸುದ್ದಿ ಮಾಡಿದ್ದ ಮೇಜರ್ ಲೀತುಲ್ ಗೊಗೊಯಿಯನ್ನು ಶ್ರೀನಗರದ ಹೊಟೇಲೊಂದರಿಂದ ಯುವತಿ ಜೊತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪೊಲೀಸ್ ಮೂಲಗಳ ಪ್ರಕಾರ, ಕೇಂದ್ರ ಕಾಶ್ಮೀರದ ಬುಡ್ಗಾಂಮ್ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಗೊಗೊಯಿ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಹೊಟೇಲ್ ಗ್ರಾಂಡ್ ಮಮ್ತಾದಲ್ಲಿ ಗಲಾಟೆ ನಡೆಯುತ್ತಿದೆ ಎಂದು ಖನ್ಯಾರ್ ಪೊಲೀಸ್ ಠಾಣೆಗೆ ಬೆಳಿಗ್ಗೆ ಹನ್ನೊಂದು ಗಂಟೆಗೆ ಹೊಟೇಲ್‌ನಿಂದ ಕರೆ ಬಂದಿತ್ತು.

 ಅದಾಗಲೇ ಆ ಹೊಟೇಲ್‌ನಲ್ಲಿ ಕೋಣೆಯನ್ನು ಗೊತ್ತುಪಡಿಸಿದ್ದ ಮೇಜರ್ ಗೊಗೊಯಿಯನ್ನು ಭೇಟಿ ಮಾಡಲು ಸಮೀರ್ ಅಹಮದ್ ಎಂಬ ವ್ಯಕ್ತಿ ಯುವತಿಯ ಜೊತೆ ಆಗಮಿಸಿದ್ದ. ಆದರೆ ಹೊಟೇಲ್ ಮ್ಯಾನೇಜರ್ ಆ ಯುವತಿಯನ್ನು ಕೋಣೆಗೆ ಹೋಗಲು ಬಿಡಲಿಲ್ಲ. ಇದು ಘರ್ಷಣೆಗೆ ಕಾರಣವಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೇಜರ್ ಸೇರಿದಂತೆ ಘರ್ಷಣೆಗೆ ಕಾರಣರಾದ ಎಲ್ಲರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯು ಸೇನಾ ಅಧಿಕಾರಿಯನ್ನು ಭೇಟಿ ಮಾಡಲು ಆಗಮಿಸಿದ್ದಳು ಎಂದು ನಂತರ ಪೊಲೀಸರಿಗೆ ತಿಳಿದುಬಂದಿದೆ.

ಪೊಲೀಸರು ಸೇನಾ ಅಧಿಕಾರಿಯ ಗುರುತು ಮತ್ತು ಇತರ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಮೇಜರ್ ಅವರ ಹೇಳಿಕೆಯನ್ನು ಪಡೆದ ನಂತರ ಪೊಲೀಸರು ಅವರನ್ನು ಸೇನಾ ವಿಭಾಗಕ್ಕೆ ಒಪ್ಪಿಸಿದ್ದಾರೆ. ಯುವತಿಯ ಹೇಳಿಕೆಯನ್ನೂ ಪಡೆಯಲಾಗಿದ್ದು ಸದ್ಯ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಡುಕೋರ ನಿಗ್ರಹ ಕಾರ್ಯಾಚರಣೆಗಳನ್ನು ಸಮರ್ಥವಾಗಿ ನಡೆಸಿದ ಕಾರಣಕ್ಕಾಗಿ ಮೇಜರ್ ಗೊಗೊಯಿಗೆ ಇತ್ತೀಚೆಗೆ ಸೇನಾ ಮುಖ್ಯಸ್ಥರ ಶ್ಲಾಘನಾ ಪತ್ರವನ್ನು ನೀಡಿ ಗೌರವಿಸಲಾಗಿತ್ತು. ಈ ಪತ್ರವು, ಮೇಜರ್ ಗೊಗೊಯಿ ವ್ಯಕ್ತಿಯೊಬ್ಬನನ್ನು ತಮ್ಮ ವಾಹನದ ಮುಂಭಾಗಕ್ಕೆ ಕವಚದಂತೆ ಕಟ್ಟಿಹಾಕಿದ ಘಟನೆಯ ಸಮರ್ಥನೆಯಾಗಿದೆ ಎಂದೇ ತಿಳಿಯಲಾಗಿದೆ. ಕಳೆದ ವರ್ಷ ಎಪ್ರಿಲ್ 9ರಂದು ಶ್ರೀನಗರ ಲೋಕಸಭಾ ಉಪಚುನಾವಣೆಯ ಸಮಯದಲ್ಲಿ ನಡೆದ ಈ ಘಟನೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X