Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಹೆಸರಿಗೆ ಮೇಲ್ಜಾತಿಯ 'ಉಪನಾಮೆ'...

ಗುಜರಾತ್: ಹೆಸರಿಗೆ ಮೇಲ್ಜಾತಿಯ 'ಉಪನಾಮೆ' ಸೇರಿಸಿದ್ದಕ್ಕೆ ದಲಿತ ಯುವಕನಿಗೆ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ23 May 2018 7:52 PM IST
share
ಗುಜರಾತ್: ಹೆಸರಿಗೆ ಮೇಲ್ಜಾತಿಯ ಉಪನಾಮೆ ಸೇರಿಸಿದ್ದಕ್ಕೆ ದಲಿತ ಯುವಕನಿಗೆ ಹಲ್ಲೆ

ಅಹ್ಮದಾಬಾದ್, ಮೇ 23: ಜಿಲ್ಲೆಯ ಧೊಲ್ಕಾ ಪಟ್ಟಣದಲ್ಲಿ 'ಸಿನ್ಹ್' ಎಂಬ ಉಪನಾಮೆಯನ್ನು ಹೆಸರಿನ ಜತೆ ಬಳಸುವ ವಿಚಾರವಾಗಿ ದಲಿತ ಮತ್ತು ಮೇಲ್ಜಾತಿಯವರ ನಡುವೆ ಸಂಘರ್ಷ ನಡೆದಿದೆ. 

'ಸಿನ್ಹ್' ಉಪನಾಮೆಯನ್ನು ಸಂಪ್ರದಾಯದಂತೆ ರಾಜ್ಯದಲ್ಲಿ ಕ್ಷತ್ರಿಯರು ತಮ್ಮ ಹೆಸರಿನ ಜತೆ ಜೋಡಿಸುತ್ತಾರೆ. ಪೊಲೀಸರು ಈ ಸಂಘರ್ಷದ ಸಂಬಂಧ ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಎರಡು  ಪ್ರಕರಣಗಳು ದೌರ್ಜನ್ಯಕ್ಕೆ ಸಂಬಂಧಿಸಿದ್ದಾಗಿದ್ದರೆ ಇನ್ನೊಂದು ಪ್ರಕರಣ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಗೊಳಿಸಿದ್ದಕ್ಕೆ  ಸಂಬಂಧಿಸಿದ್ದಾಗಿದೆ. ಈ ಘಟನೆಯ ನಂತರ ಪಟ್ಟಣದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲದೇ ಇದ್ದರೂ ಎರಡೂ ಗುಂಪುಗಳು ಪರಸ್ಪರ ದೂರು, ಪ್ರತಿ ದೂರು ದಾಖಲಿಸಿವೆ.

ಇಪ್ಪತ್ತೆರಡು ವರ್ಷದ ದಲಿತ ಯುವಕ ಮೌಲಿಕ್ ಜಾಧವ್ ತನ್ನ ಹೆಸರಿಗೆ 'ಸಿನ್ಹ್' ಸೇರಿಸಿ ತನ್ನ ಫೇಸ್ ಬುಕ್ ಪುಟದಲ್ಲಿ ಹಾಕಿದ್ದೇ ಮೇಲ್ಜಾತಿಯ ದರ್ಬಾರ್ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಆರಂಭದಲ್ಲಿ ಸಾಮಾಜಿಕ ಜಾಲತಾಣದಲ್ಲಿಯೇ  ಗುಂಪುಗಳು ಪರಸ್ಪರ ದೋಷಾರೋಪದಲ್ಲಿ ತೊಡಗಿದ್ದವು. ಆದರೆ ಮಂಗಳವಾರ ಮೇಲ್ಜಾತಿಗೆ ಸೇರಿದವರೆನ್ನಲಾದ ಕೆಲವರು ಜಾಧವ್ ಮನೆಗೆ ನುಗ್ಗಿ ಆತನಿಗೆ ಹಲ್ಲೆ ನಡೆಸಿದ್ದೇ ತಡ ದಲಿತರ ಗುಂಪೊಂದು ದರ್ಬಾರ್ ಸಮುದಾಯದ ವ್ಯಕ್ತಿಯೊಬ್ಬನ ಮನೆಯಲ್ಲಿ ದಾಂಧಲೆಗೈದಿತ್ತು.

ಮಕ್ಕಳಿಗೆ ಟ್ಯೂಷನ್ ತರಗತಿಗಳನ್ನು ನಡೆಸುವ ಜಾಧವ್  ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದ ಶಾಸಕ ಜಿಗ್ನೇಶ್ ಮೇವಾನಿ ಬೆಂಬಲಿಗನಾಗಿದ್ದಾನೆ. ಕೆಲವು ಮಂದಿ ಕಾರಿನಲ್ಲಿ ಬಂದು ತನ್ನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾಗಿ ನಂತರ ಮನೆಯ ಮೇಲೂ ದಾಳಿ ನಡೆಸಿದ ಪರಿಣಾಮ ಕುಟುಂಬದ ಇನ್ನೊಬ್ಬ ಸದಸ್ಯನಿಗೂ ಗಾಯಗಳುಂಟಾಗಿವೆ ಎಂದು ಆತ ಆರೋಪಿಸಿದ್ದಾನೆ.

ತಾನು ತನ್ನ ಫೇಸ್ ಬುಕ್ ಪುಟದಲ್ಲಿ ತನ್ನ ಹೆಸರನ್ನು ಮೌಲಿಕ್ ನಿಂದ ಮೌಲಿಕ್ ಸಿನ್ಹ್ ಎಂದು ಬದಲಿಸಿದಂದಿನಿಂದ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆತ ಹೇಳಿಕೊಂಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X