Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಳಂಗರೆ ಶಿಲಾಶಾಸನ ಸಂರಕ್ಷಿಸಲು ಅಧ್ಯಾಪಕ...

ತಳಂಗರೆ ಶಿಲಾಶಾಸನ ಸಂರಕ್ಷಿಸಲು ಅಧ್ಯಾಪಕ ಸಂಘದಿಂದ ಶಾಸಕರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ23 May 2018 8:27 PM IST
share
ತಳಂಗರೆ ಶಿಲಾಶಾಸನ ಸಂರಕ್ಷಿಸಲು ಅಧ್ಯಾಪಕ ಸಂಘದಿಂದ ಶಾಸಕರಿಗೆ ಮನವಿ

ಕಾಸರಗೋಡು, ಮೇ 23: ಸುಮಾರು 10ನೇ ಶತನಮಾನದ ಜಯಸಿಂಹ ಅರಸನ ಆಳ್ವಿಕೆಗೆ ಸಂಬಂಧಿಸಿದ ಮತ್ತು ಕನ್ನಡ ಭಾಷೆ, ಸಾಹಿತ್ಯ ಹಾಗೂ ಚರಿತ್ರೆಗೆ ಸಂಬಂಧಿಸಿದ ಮಹತ್ವಪೂರ್ಣ ವಿಚಾರಗಳಿಗೆ ಬೆಳಕು ಚೆಲ್ಲುವ ಸುಮಾರು ಸಾವಿರ ವರ್ಷಕ್ಕಿಂತಲೂ ಹಳೆಯದಾದ ತಳಂಗರೆ ಶಾಸನವು ಪುರಾತತ್ತ್ವ ಇಲಾಖೆಯ ಗಮನಕ್ಕೆ ಬಂದಿದ್ದರೂ ಅದು ಬಿಸಿಲು ಮಳೆಗೆ ತೆರೆದಿರುವ ಪ್ರದೇಶದಲ್ಲಿದೆ. ಇದನ್ನು ಆ ಸ್ಥಳದಲ್ಲಿಯೇ ಅಥವಾ ಇತರ ಯಾವುದಾದರೂ ಅಧ್ಯಯನ ಕೇಂದ್ರಕ್ಕೆ ಸ್ಥಳಾಂತರಿಸಿ ಸಂರಕ್ಷಿಸಬೇಕು ಎಂದು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘವು ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಅವರನ್ನು ಒತ್ತಾಯಿಸಿದೆ.

ಕಲ್ಲಕಟ್ಟ ಶಾಲಾ ಮುಖ್ಯಶಿಕ್ಷಕ ಶ್ಯಾಮ ಪ್ರಸಾದ್ ಹಾಗೂ ಇತರ ಅಧ್ಯಾಪಕ ತಂಡವು ಇತ್ತೀಚೆಗೆ ಶಾಸನವನ್ನು ಕಾಣಲು ತಳಂಗರೆಗೆ ಭೇಟಿ ನೀಡಿತ್ತು. ಅದು ತೆರೆದ ಸ್ಥಳದಲ್ಲಿರುವುದನ್ನು ಗಮನಿಸಿದ್ದರು.

ಎಫಿಗ್ರಾಫಿಯಾದಲ್ಲಿರುವ ಶಾಸನದ ಇಂಗ್ಲಿಷ್ ಪಾಠಾಂತರವನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಅಧ್ಯಕ್ಷ ರವೀಂದ್ರನಾಥ ಬಲ್ಲಾಳ್ ಅವರು ಶಾಸಕರಿಗೆ ಬುಧವಾರ ಹಸ್ತಾಂತರಿಸಿದರು. ಕಾಸರಗೋಡು ಕಾಲೇಜು ಕನ್ನಡ ವಿಭಾಗ ಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲಮೂಲೆ ಶಾಸನದ ಮಹತ್ವವನ್ನು ಶಾಸಕರಿಗೆ ತಿಳಿಸಿದರು.

ಕಲ್ಲಕಟ್ಟ ಎಂಎಯುಪಿ ಶಾಲೆಯ ಮುಖ್ಯಶಿಕ್ಷಕ ಶ್ಯಾಮ್ ಪ್ರಸಾದ್, ಅದೇ ಶಾಲೆಯ ಅಧ್ಯಾಪಕ ವಿನೋದ್‌ರಾಜ್, ಈ ಮುಂತಾದವರು ಶಾಸನ ಈಗಿರುವ ಸ್ಥಳ ಮತ್ತು ಅದರ ಸ್ಥಿತಿಗತಿಗಳ ಬಗ್ಗೆ ಶಾಸಕರಿಗೆ ವಿವರಿಸಿದರು. ಎಡನೀರು ಸರಕಾರಿ ಹಿರಿಯ ಪ್ರೌಢಶಾಲೆಯ ಅಧ್ಯಾಪಕ ದಿನೆಶ್ ಬಿ, ಪೈವಳಿಕೆ ಹಿರಿಯ ಪ್ರೌಢಶಾಲೆಯ ಅಧ್ಯಾಪಕ ಚಂದ್ರಶೇಖರ ಡಿ, ಗಮಕ ಕಲಾ ಪರಿಷತ್ ಕಾಸರಗೋಡಿನ ಅಧ್ಯಕ್ಷ ಟಿ ಶಂಕರನಾರಾಯಣ ಭಟ್, ಸಿರಿಚಂದನ ಕನ್ನಡ ಯುವಬಳಗದ ಅಧ್ಯಕ್ಷ ರಕ್ಷಿತ್ ಪಿ ಎಸ್, ಉಪಾಧ್ಯಕ್ಷ ಪ್ರಶಾಂತ ಹೊಳ್ಳ, ಸದಸ್ಯ ಅಜಿತ್ ಶೆಟ್ಟಿ ಬೋವಿಕಾನ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X