Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣದ ಚೀಲ ತೋರಿಸಿದವರಿಗೆ ಬಿಜೆಪಿಯಲ್ಲಿ...

ಹಣದ ಚೀಲ ತೋರಿಸಿದವರಿಗೆ ಬಿಜೆಪಿಯಲ್ಲಿ ಅವಕಾಶ: ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ24 May 2018 10:35 PM IST
share
ಹಣದ ಚೀಲ ತೋರಿಸಿದವರಿಗೆ ಬಿಜೆಪಿಯಲ್ಲಿ ಅವಕಾಶ: ಶಿವಸೇನೆ

 ಮುಂಬೈ, ಮೇ 24: ತನ್ನ ಮಿತ್ರ ಪಕ್ಷವಾಗಿರುವ ಬಿಜೆಪಿ ವಿರುದ್ಧ ಗುರುವಾರ ವಾಗ್ದಾಳಿ ಮುಂದುವರಿಸಿರುವ ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ, ಬಿಜೆಪಿಯಲ್ಲಿ ಯಾವುದೇ ಆದರ್ಶವೂ ಉಳಿದುಕೊಂಡಿಲ್ಲ ಎಂದಿದ್ದಾರೆ.

ಮೇ 28ರಂದು ನಡೆಯಲಿರುವ ಪಾಲ್ಘರ್ ಲೋಕಸಭಾ ಉಪ ಚುನಾವಣೆಯಲ್ಲಿ ಶಿವಸೇನೆ ಅಭ್ಯರ್ಥಿ ಶ್ರೀನಿವಾಸ್ ವಾನಗ ಅವರ ಪರವಾಗಿ ಮೊಖಾಡಾದಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಠಾಕ್ರೆ ಮಾತನಾಡಿದರು.

  ಕೇಸರಿ ಪಕ್ಷ ಕೇಸರಿಯಾಗಿ ಉಳಿದುಕೊಂಡಿಲ್ಲ ಎಂದು ಹೇಳಿದ ಅವರು, ಯಾರಲ್ಲಿ ಹಣ ಹಾಗೂ ಅಧಿಕಾರ ಇದೆಯೋ ಅವರು ಬಿಜೆಪಿ ಸೇರಬಹುದು ಎಂದರು. ತನ್ನ ಪಕ್ಷದ ಸದಸ್ಯರು ಅತಿ ಶ್ರೀಮಂತರಾಗಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿರುವ ಠಾಕ್ರೆ, ಶಿವಸೇನೆ ಕಾರ್ಯಕರ್ತರು ಪ್ರಾಮಾಣಿಕರು ಎಂದಿದ್ದಾರೆ. ಚಿಂತಾಮನ್ ವಾನಗ ಅವರೊಂದಿಗೆ ಕೇಸರಿ ಧ್ವಜದ ಅಡಿಯಲ್ಲಿ ನೀವು ಕಾರ್ಯ ನಿರ್ವಹಿಸಿದ್ದೀರಿ. ಆದರೆ, ಅದು ಈಗ ಕೇಸರಿ ಪಕ್ಷವಾಗಿ ಉಳಿದುಕೊಂಡಿಲ್ಲ. ನೀವು ಹಣದ ಚೀಲ ತೋರಿಸಿದರೆ ಪ್ರವೇಶ ಸಿಗುತ್ತದೆ. ನನ್ನೊಂದಿಗೆ ಇರುವ ಜನರು ಪ್ರಾಮಾಣಿಕರು. ನಾವು ಹಣ ಪಡೆದು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.

ಬಿಜೆಪಿ ಮಾಜಿ ಸಂಸದ ದಿವಂಗತ ಚಿಂತಾಮನ್ ವಾನಗ ಅವರ ಪುತ್ರ ಶ್ರೀನಿವಾಸ ವಾನಗ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಿವಸೇನೆ ಬಗ್ಗೆ ಅಸಮಾಧಾನಗೊಂಡಿದೆ. ಚಿಂತಾಮನ್ ವಾನಗ ಈ ವರ್ಷ ಮೃತಪಟ್ಟಿದ್ದರು. ಇದರಿಂದ ಸಮೀಪದ ಪಾಲ್ಗಾರ್ ಜಿಲ್ಲೆಯ ಲೋಕ ಸಭಾ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು. ಉಪ ಚುನಾವಣೆಯಲ್ಲಿ ವಾನಗ ಕುಟುಂಬದಿಂದ ಒಬ್ಬರನ್ನು ಕಣಕ್ಕಿಳಿಸಲು ಬಿಜೆಪಿ ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇತ್ತೀಚೆಗೆ ಹೇಳಿದ್ದರು. ಚಿಂತಾಮನ್ ವಾನಗ ಅವರ ನಿಧನದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಉದ್ಧವ್ ಠಾಕ್ರೆ, ಅವರ ನಿಧನದಿಂದ ಪಾಲ್ಘಾರ್ ಸ್ಥಾನ ತೆರವಾಗಿರುವುದು ದುರಾದೃಷ್ಟಕರ. ಬಿಜೆಪಿ ಅವರ ಪುತ್ರ ಶ್ರೀನಿವಾಸ ಅವರಿಗೆ ಟಿಕೆಟ್ ನೀಡಿದ್ದರೆ, ನಾನೇ ಅವರ ಪರವಾಗಿ ಪ್ರಚಾರಕ್ಕೆ ಬರುತ್ತಿದ್ದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X