Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊಲೆಗಡುಕ ಬಿಜೆಪಿ ತನ್ನ ದಾರಿಗೆ...

ಕೊಲೆಗಡುಕ ಬಿಜೆಪಿ ತನ್ನ ದಾರಿಗೆ ಅಡ್ಡಬರುವ ಪ್ರತಿಯೊಬ್ಬರನ್ನೂ ಇರಿಯುತ್ತಿದೆ: ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ25 May 2018 7:55 PM IST
share
ಕೊಲೆಗಡುಕ ಬಿಜೆಪಿ ತನ್ನ ದಾರಿಗೆ ಅಡ್ಡಬರುವ ಪ್ರತಿಯೊಬ್ಬರನ್ನೂ ಇರಿಯುತ್ತಿದೆ: ಶಿವಸೇನೆ

ಮುಂಬೈ,ಮೇ 25: ತಾನು 'ದ್ರೋಹಿ' ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆರೋಪಕ್ಕೆ ಶುಕ್ರವಾರ ತಿರುಗೇಟು ನೀಡಿರುವ ಶಿವಸೇನೆಯು, ಬಿಜೆಪಿಯು 'ಹುಚ್ಚ ಕೊಲೆಗಡುಕ'ನಾಗಿದ್ದು, ತನ್ನ ದಾರಿಗಡ್ಡವಾಗಿ ಬರುವ ಪ್ರತಿಯೊಬ್ಬರನ್ನೂ ಅದು ಇರಿಯುತ್ತಿದೆ ಎಂದು ಬಣ್ಣಿಸಿದೆ.

 ಮೇ 28ರಂದು ನಡೆಯಲಿರುವ ಪಾಲ್ಘರ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕಾಗಿ ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಎರಡು ದಿನಗಳ ಹಿಂದೆ ವಿರಾರ್‌ನಲ್ಲಿ ಬಹಿರಂಗ ಸಭೆಯಲ್ಲಿ ಮರಾಠಾ ದೊರೆ ಛತ್ರಪತಿ ಶಿವಾಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವಾಗ ತನ್ನ ಪಾದರಕ್ಷೆಗಳನ್ನು ಕಳಚದಿದ್ದಕ್ಕಾಗಿ ಅವರನ್ನೂ ಶಿವಸೇನೆ ತರಾಟೆಗೆತ್ತಿಕೊಂಡಿದೆ. ಇದು ಛತ್ರಪತಿ ಶಿವಾಜಿಯವರಿಗೆ ಮಾಡಿರುವ ಅವಮಾನವಾಗಿದ್ದು, ಈ ಬಗ್ಗೆ ಬಿಜೆಪಿ ಏನು ಹೇಳುತ್ತದೆ ಎಂದೂ ಅದು ಪ್ರಶ್ನಿಸಿದೆ.

ಶಿವಸೇನೆಯು ಬಿಜೆಪಿಯ ಬೆನ್ನಿಗೆ ಇರಿದಿದೆ ಎಂದು ಉತ್ತರ ಪ್ರದೇಶದ ಆಷಾಢಭೂತಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅವರು ಇತಿಹಾಸವನ್ನು ಅಥವಾ ಛತ್ರಪತಿ ಶಿವಾಜಿಯವರನ್ನು ಅರ್ಥ ಮಾಡಿಕೊಂಡಿಲ್ಲ ಎನ್ನುವುದನ್ನು ಇದು ಸೂಚಿಸುತ್ತಿದೆ ಎಂದು ಶಿವಸೇನೆ ತನ್ನ ಮುಖವಾಣಿ 'ಸಾಮ್ನಾ'ದ ಶುಕ್ರವಾರದ ಸಂಚಿಕೆಯ ಸಂಪಾದಕೀಯದಲ್ಲಿ ಹೇಳಿದೆ.

ಪಾಲ್ಘರ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ದಿವಂಗತ ಸಂಸದ ಚಿಂತಾಮಣ ವನಗಾ ಅವರ ಪುತ್ರನನ್ನು ನಿಲ್ಲಿಸುವ ಮೂಲಕ ಶಿವಸೇನೆಯು ಬಿಜೆಪಿಗೆ ದ್ರೋಹವೆಸಗಿದೆ ಎಂದು ಫಡ್ನವೀಸ್ ಇತ್ತೀಚಿಗೆ ಆರೋಪಿಸಿದ್ದರು.

ಕಾಂಗ್ರೆಸ್ ಪಕ್ಷವು ಉಪಚುನಾವಣೆಗಾಗಿ ಮಾಜಿ ಕಾಂಗ್ರೆಸ್ ನಾಯಕ ರಾಜೇಂದ್ರ ಗಾವಿತ್ ಅವರಿಗೆ ಟಿಕೆಟ್ ನೀಡಿರುವುದು ಮತ್ತು ಶಿವಸೇನೆಯ ವಿರುದ್ಧ ಮಾತನಾಡುತ್ತಿರುವುದು ನಿಜಕ್ಕೂ ಬೆನ್ನಿಗೆ ಇರಿಯುವ ಕೃತ್ಯವಾಗಿದೆ ಎಂದು ಸಂಪಾದಕೀಯವು ಹೇಳಿದೆ.

ಬೆನ್ನಿಗೆ ಇರಿಯುವ ಭಾಷೆಯು ಫಡ್ನವೀಸ್ ಅವರಿಗಾಗಲಿ,ಆದಿತ್ಯನಾಥರಿಗಾಗಲಿ ಶೋಭೆಯನ್ನು ನೀಡುವುದಿಲ್ಲ ಎಂದಿರುವ ಅದು,ಪಕ್ಷದ ಸ್ಥಾಪಕ ಬಾಳಾಸಾಹೇಬ್ ಠಾಕ್ರೆಯವರು ಜೀವಂತವಿದ್ದಾಗ ಅವರ ಬೆನ್ನಿಗೆ ಇರಿದಿದ್ದವರಿಗೆ ಬಿಜೆಪಿಯು ಅವಕಾಶಗಳನ್ನು ನೀಡುತ್ತಿದೆ ಎಂದು ಜರಿದಿದೆ.

ಎಲ್ಲ ಚುನಾವಣೆಗಳನ್ನು ಏಕಾಕಿಯಾಗಿ ಎದುರಿಸಲು ಶಿವಸೇನೆಯು ನಿರ್ಧರಿಸಿದೆ ಎಂದಿರುವ ಸಂಪಾದಕೀಯವು,ಇದು ನಾಳೆಯ ಹೋರಾಟ(2019ರ ಚುನಾವಣೆ)ದ ಆರಂಭ ಮಾತ್ರವಾಗಿದೆ ಎಂದು ಹೇಳಿದೆ.

ರಾಜಕೀಯವು ಸ್ವಾರ್ಥಿ ಜನರಿಂದ ತುಂಬಿದೆಯಾದರೂ ಶಿವಸೇನೆ ಮತ್ತು ಅದರ ಕೇಸರಿ ಧ್ವಜ ಇದಕ್ಕೆ ಹೊರತಾಗಿವೆ ಎಂದಿರುವ ಅದು,ತನ್ನ 'ಪ್ರಾಮಾಣಿಕತೆ ಮತ್ತು ವಿಶ್ವಾಸಾರ್ಹತೆ'ಗೆ ಹೆಸರಾಗಿರುವ ಮಹಾರಾಷ್ಟ್ರದ ವರ್ಚಸ್ಸಿಗೆ ಬಿಜೆಪಿಯು ಹಾನಿಯನ್ನುಂಟು ಮಾಡುತ್ತಿದೆ ಎಂದು ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X