Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಬ್ರಾಪೋಸ್ಟ್ ಕುಟುಕು ಕಾರ್ಯಾಚರಣೆ...

ಕೋಬ್ರಾಪೋಸ್ಟ್ ಕುಟುಕು ಕಾರ್ಯಾಚರಣೆ ವೀಡಿಯೊ ಬಿಡುಗಡೆಗೆ ದಿಲ್ಲಿ ಹೈಕೋರ್ಟ್ ತಡೆ

ಹಣಕ್ಕಾಗಿ ಮಾಧ್ಯಮಗಳಿಂದ ಹಿಂದುತ್ವ ಸಿದ್ಧಾಂತ ಪ್ರಚಾರ, ರಾಜಕೀಯ ಪಕ್ಷಗಳ ಪರ ವಕಾಲತ್ತು

ವಾರ್ತಾಭಾರತಿವಾರ್ತಾಭಾರತಿ25 May 2018 8:36 PM IST
share
ಕೋಬ್ರಾಪೋಸ್ಟ್ ಕುಟುಕು ಕಾರ್ಯಾಚರಣೆ ವೀಡಿಯೊ ಬಿಡುಗಡೆಗೆ ದಿಲ್ಲಿ ಹೈಕೋರ್ಟ್ ತಡೆ

ಹೊಸದಿಲ್ಲಿ, ಮೇ 25: ಭಾರತೀಯ ಮಾಧ್ಯಮಗಳು ರಾಜಕೀಯ ಪಕ್ಷಗಳಿಂದ ಹಣಪಡೆದು ವಿರೋಧಪಕ್ಷಗಳ ನಾಯಕರ ಮಾನಹಾನಿ ಮಾಡಲು, ಹಿಂದುತ್ವ ಸಿದ್ಧಾಂತವನ್ನು ಪ್ರಚಾರ ಮಾಡಲು ಮತ್ತು ರಾಜಕೀಯ ಪಕ್ಷಗಳ ಪರ ಅಭಿಯಾನ ನಡೆಸಲು ಹಣವನ್ನು ಪಡೆದುಕೊಂಡಿವೆ ಎಂದು ಆರೋಪಿಸುವ ಸುದ್ದಿ ಜಾಲತಾಣ ‘ಕೋಬ್ರಾಪೋಸ್ಟ್’ ನಡೆಸಿದ ಕುಟುಕು ಕಾರ್ಯಾಚರಣೆ 'ಆಪರೇಶನ್ 136’ನ ಎರಡನೇ ಕಂತನ್ನು ಬಿಡುಗಡೆ ಮಾಡದಂತೆ ದಿಲ್ಲಿ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. 'ಆಪರೇಶನ್ 136' ವಿರುದ್ಧ ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ಮಾಧ್ಯಮ ಸಂಸ್ಥೆ ದೈನಿಕ್ ಭಾಸ್ಕರ್, ಈ ವೀಡಿಯೊ ಬಿಡುಗಡೆಯಿಂದ ಸಂಸ್ಥೆಯು ಗಳಿಸಿರುವ ಖ್ಯಾತಿಗೆ ಸರಿಪಡಿಸಲಾಗದಷ್ಟು ಹಾನಿಯಾಗುವ ಸಾಧ್ಯತೆಯಿದೆ. ಹಾಗಾಗಿ 'ಆಪರೇಶನ್ 136’ನ ಎರಡನೇ ಕಂತನ್ನು ಬಿಡುಗಡೆ ಮಾಡದಂತೆ ತಡೆಯ ಬೇಕು ಎಂದು ನ್ಯಾಯಾಲಯದಲ್ಲಿ ಮನವಿ ಮಾಡಿತ್ತು. ನ್ಯಾಯಾಲಯ ನೀಡಿರುವ ತಡೆಯಾಜ್ಞೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ‘ಕೋಬ್ರಾಪೋಸ್ಟ್’, ನ್ಯಾಯಾಲಯವು ನಮ್ಮ ವಾದವನ್ನು ಆಲಿಸದೆ ಏಕಪಕ್ಷೀಯವಾಗಿ ತಡೆಯಾಜ್ಞೆ ವಿಧಿಸಿದೆ. ತಡೆ ಆದೇಶವನ್ನು ಪ್ರಶ್ನಿಸಿ ನಾವು ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಮಾಧ್ಯಮಗಳಿಗೆ ತಿಳಿಸಿದೆ. 'ಆಪರೇಶನ್ 136' ಎಂಬ ಕುಟುಕು ಕಾರ್ಯಾಚರಣೆ ನಡೆಸಿದ್ದ ಕೋಬ್ರಾಪೋಸ್ಟ್, ಹೇಗೆ ಭಾರತೀಯ ಮಾಧ್ಯಮಗಳು ಹಣಕ್ಕಾಗಿ ರಾಜಕೀಯ ಪಕ್ಷಗಳ ಜೊತೆ ಕೈಜೋಡಿಸಿ ವಿರೋಧ ಪಕ್ಷಗಳ ನಾಯಕರನ್ನು ಹಣಿಯುವ, ಒಂದು ರಾಜಕೀಯ ಪಕ್ಷದ ಸಿದ್ಧಾಂತವನ್ನು ಹರಡುವ, ಮತಗಳನ್ನು ಧ್ರುವೀಕರಿಸುವ ಮತ್ತು ಕೋಮು ಭಾವನೆಯನ್ನು ಜನರಲ್ಲಿ ಮೂಡಿಸುವ ಕೆಲಸ ಮಾಡುತ್ತಿವೆ ಎಂಬುದನ್ನು ಮಾರ್ಚ್ 26ರಂದು ಬಿಡುಗಡೆ ಮಾಡಿದ ‘ಆಪರೇಶನ್ 136’ನ ಮೊದಲ ಕಂತಿನಲ್ಲಿ ಬಹಿರಂಗಪಡಿಸಿತ್ತು. ಮೊದಲ ಕಂತಿನಲ್ಲಿ ಕೋಬ್ರಾಪೋಸ್ಟ್ ಹದಿನೇಳು ಭಾರತೀಯ ಮಾಧ್ಯಮಗಳ ಸಂಚನ್ನು ಬಯಲುಗೊಳಿಸಿತ್ತು.

ಕೆಲವು ಮಾಧ್ಯಮ ಸಂಸ್ಥೆಗಳು ಬಿಜೆಪಿ ನಾಯಕರು, ಕೇಂದ್ರ ಸಚಿವರು ಮತ್ತು ಆಡಳಿತ ಪಕ್ಷದ ಮಿತ್ರಪಕ್ಷದ ನಾಯಕರ ವಿರುದ್ಧ ಕಟ್ಟುಕತೆ ಸೃಷ್ಟಿಸಲು, ರಾಜಕೀಯ ಷಡ್ಯಂತ್ರವನ್ನು ರೂಪಿಸಲು ಮತ್ತು ಒಳಜಗಳದ ವರದಿಗಳನ್ನು ರಚಿಸಲು ಹಣವನ್ನು ಪಡೆದಿರುವುದಾಗಿಯೂ ಕೋಬ್ರಾಪೋಸ್ಟ್ ಕಾರ್ಯಾಚರಣೆ ಆರೋಪಿಸಿದೆ.

ಇದೀಗ ಈ ವಿಡಿಯೊದ ಎರಡನೇ ಕಂತನ್ನು ಶನಿವಾರ, ಮೇ 25ರಂದು ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆ ಮಾಡಲು ಕೋಬ್ರಾಪೋಸ್ಟ್ ಸಿದ್ಧತೆ ನಡೆಸಿತ್ತು. ಆದರೆ ದೈನಿಕ್ ಭಾಸ್ಕರ್ ಗುರುವಾರದಂದು ಈ ವಿಡಿಯೊ ಬಿಡುಗಡೆಗೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದೆ. ಸದ್ಯ ತನ್ನ ಜಾಲತಾಣದಲ್ಲಿ ಓಪರೇಶನ್ 136 ಎರಡನೇ ಕಂತಿನ ಪ್ರೋಮೊವನ್ನು ಬಿಡುಗಡೆ ಮಾಡಿರುವ ಕೋಬ್ರಾಪೋಸ್ಟ್ ಶೀಘ್ರದಲ್ಲಿ ಸಂಪೂರ್ಣ ವೀಡಿಯೊದೊಂದಿಗೆ ಬರುವುದಾಗಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X