Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನಿಖೆಗೆ ಕೋರಿ ವಕೀಲರ ಅರ್ಜಿಯ...

ತನಿಖೆಗೆ ಕೋರಿ ವಕೀಲರ ಅರ್ಜಿಯ ಇತ್ಯರ್ಥವನ್ನು ಎನ್‌ಎಚ್‌ಆರ್‌ಸಿಗೆ ಬಿಟ್ಟ ದಿಲ್ಲಿ ಉಚ್ಚ ನ್ಯಾಯಾಲಯ

ಸ್ಟರ್ಲೈಟ್ ವಿರೋಧಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 May 2018 8:42 PM IST
share
ತನಿಖೆಗೆ ಕೋರಿ ವಕೀಲರ ಅರ್ಜಿಯ ಇತ್ಯರ್ಥವನ್ನು ಎನ್‌ಎಚ್‌ಆರ್‌ಸಿಗೆ ಬಿಟ್ಟ ದಿಲ್ಲಿ ಉಚ್ಚ ನ್ಯಾಯಾಲಯ

 ಹೊಸದಿಲ್ಲಿ,ಮೇ 25: ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ವೇದಾಂತ ಸಮೂಹದ ಸ್ಟರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆಗಳಲ್ಲಿ ಪೊಲೀಸ್ ಗೋಲಿಬಾರ್‌ನಲ್ಲಿ ಸಂಭವಿಸಿರುವ ಸಾವುಗಳ ಬಗ್ಗೆ ಸ್ವತಂತ್ರ ತನಿಖೆಯನ್ನು ಕೋರಿ ನ್ಯಾಯವಾದಿ ಎ.ರಾಜರಾಜನ್ ಅವರು ಸಲ್ಲಿಸಿರುವ ಅರ್ಜಿಯನ್ನು ಇತ್ಯರ್ಥಗೊಳಿಸುವುದನ್ನು ದಿಲ್ಲಿ ಉಚ್ಚ ನ್ಯಾಯಾಲಯವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ಕ್ಕೆ ಬಿಟ್ಟಿದೆ.

ಎನ್‌ಎಚ್‌ಆರ್‌ಸಿಯು ಈಗಾಗಲೇ ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು,ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಯಿಂದ ವರದಿಯನ್ನು ಕೇಳಿದೆ ಎಂದು ಶುಕ್ರವಾರ ಕಲಾಪದ ವೇಳೆಯಲ್ಲಿ ತಿಳಿಸಿದ ನ್ಯಾ.ರಾಜೀವ ಶಕ್ಧರ್ ಅವರು,ಸೂಕ್ತ ನಿರ್ದೇಶಗಳನ್ನು ಪಡೆದುಕೊಳ್ಳಲು ಆಯೋಗದ ಮುಂದೆ ಹಾಜರಾಗುವಂತೆ ರಾಜರಾಜನ್ ಅವರಿಗೆ ಸೂಚಿಸಿದರು.

ನಿರ್ದೇಶಗಳಿಗಾಗಿ ತನ್ನ ಅರ್ಜಿಯನ್ನು ಮೇ 29ರಂದು ಆಯೋಗದ ಮುಂದಿರಿಸುವಂತೆಯೂ ನ್ಯಾಯಾಲಯವು ಅವರಿಗೆ ತಿಳಿಸಿತು.

ತಮಿಳುನಾಡು ಮೂಲದ ರಾಜರಾಜನ್ ಅವರು ಗೋಲಿಬಾರ್ ಘಟನೆಯಲ್ಲಿ ಎನ್‌ಎಚ್‌ಆರ್‌ಸಿಯ ನೇರ ಮಧ್ಯಪ್ರವೇಶವನ್ನು ಕೋರಿ ಗುರುವಾರ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು.

'ಅಕ್ರಮ ಹತ್ಯೆಗಳ' ಘಟನೆಯಲ್ಲಿ ಆಯೋಗದ ತ್ವರಿತ ಮಧ್ಯಪ್ರವೇಶವನ್ನು ಕೋರಿ ತಾನು ಮೇ 23ರಂದು ಅದಕ್ಕೆ ಅರ್ಜಿ ಸಲ್ಲಿಸಿದ್ದೆ,ಆದರೆ ಅದನ್ನು ತುರ್ತು ವಿಷಯವನ್ನಾಗಿ ಪರಿಗಣಿಸಲು ಅದು ನಿರಾಕರಿಸಿತ್ತು ಮತ್ತು ವಾಸ್ತವಾಂಶಗಳನ್ನು ಕಡೆಗಣಿಸಿತ್ತು ಎಂದು ಅವರು ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಹೇಳಿದ್ದರು.

 ಎನ್‌ಎಚ್‌ಆರ್‌ಸಿಯು ವಿಷಯವನ್ನು ಕೈಗೆತ್ತಿಕೊಂಡು ರಾಜ್ಯದಿಂದ ವರದಿಯನ್ನು ಕೇಳಿದ ಬಳಿಕವೂ ಮಾನವ ಹಕ್ಕುಗಳ ಉಲ್ಲಂಘನೆಗಳು ಮತ್ತು ಪೊಲೀಸರ ಗೋಲಿಬಾರ್‌ನಲ್ಲಿ ಕಾನೂನುಬಾಹಿರ ಹತ್ಯೆಗಳು ಮುಂದುವರಿದಿವೆ ಎಂದು ಅವರು ಆಪಾದಿಸಿದ್ದಾರೆ.

ಎನ್‌ಎಚ್‌ಆರ್‌ಸಿಯು ನೇರವಾಗಿ ಅಥವಾ ಸ್ವತಂತ್ರ ಏಜೆನ್ಸಿಯ ಮೂಲಕ ತ್ವರಿತ ಮಧ್ಯಪ್ರವೇಶವನ್ನು ಮಾಡದಿದ್ದರೆ ಪೊಲೀಸರಿಂದ ಜನರ ಕಾನೂನುಬಾಹಿರ ಹತ್ಯೆಗಳು ಮುಂದುವರಿಯುತ್ತವೆ ಮತ್ತು ಸಾಕ್ಷಾಧಾರಗಳು ನಾಶಗೊಳ್ಳುವ ಸಾಧ್ಯತೆಯಿದೆ ಎಂದೂ ಅರ್ಜಿಯು ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X