ನೂರರ ಹಿರಿಯಡ್ಕ ಗೋಪಾಲರಾಯರಿಗೆ ‘ಸಾಮಗ ಪ್ರಶಸ್ತಿ’ ಪ್ರದಾನ

ಹಿರಿಯಡ್ಕ, ಮೇ 25: ಕರಾವಳಿಯ ಮೂರು ಜಿಲ್ಲೆಗಳ ಯಕ್ಷಗಾನ ಲೋಕದಲ್ಲಿ ‘ಮದ್ದಲೆ ಮಾಂತ್ರಿಕ’ರೆಂದೇ ಹೆಸರಾದ ಬದುಕಿನ ‘ಶತಕ’ದ ಅಂಚಿನಲ್ಲಿರುವ ಹಿರಿಯಡಕ ಗೋಪಾಲರಾಯರಿಗೆ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ವತಿಯಿಂದ ‘ಮಲ್ಪೆ ಶಂಕರನಾರಾಯಣ ಸಾಮಗ ಪ್ರಸ್ತಿ’ ಯನ್ನು ನೀಡಿ ಗೌರವಿಸಲಾಯಿತು.
ಸರಳ ಹಾಗೂ ಸಂಕ್ಷಿಪ್ತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ, ಯಕ್ಷಗಾನ ಪ್ರಸಂಗಕರ್ತ ನಿತ್ಯಾನಂದ ಕಾರಂತ, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಎಸ್.ವಿ.ಭಟ್, ಕಾರ್ಯದರ್ಶಿ ಮುರಳಿ ಕಡೆಕಾರ್, ಸಾಹಿತಿ ಶಾಂತರಾಜ್ ಐತಾಳ್ ಮೊದಲಾದವರು ಉಪಸ್ಥಿತರಿದ್ದರು.
99ರ ಹರೆಯದಲ್ಲೂ ಕೈಗೆ ಮದ್ದಲೆ ಸಿಕ್ಕಿದರೆ, ತಾವೇ ಮಟ್ಟುಗಳನ್ನು ಹಾಕಿ, ಅದಕ್ಕೆ ಸರಿಯಾಗಿ ತನ್ನ ಬೆರಳುಗಳಿಂದ ಮದ್ದಲೆಯನ್ನೂ ನುಡಿಸುವ ಗೋಪಾಲ ರಾಯರು ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಭಾಗವಹಿಸಿದರು.
Next Story