Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉ. ಕೊರಿಯದಿಂದ ತಾಳ್ಮೆಯ ಪ್ರತಿಕ್ರಿಯೆ

ಉ. ಕೊರಿಯದಿಂದ ತಾಳ್ಮೆಯ ಪ್ರತಿಕ್ರಿಯೆ

ಯಾವಾಗ ಬೇಕಾದರೂ ಮಾತುಕತೆಗೆ ಮುಕ್ತ: ಟ್ರಂಪ್‌ರನ್ನು ಧಾರಾಳವಾಗಿ ಹೊಗಳಿದ ಉತ್ತರ

ವಾರ್ತಾಭಾರತಿವಾರ್ತಾಭಾರತಿ25 May 2018 11:11 PM IST
share
ಉ. ಕೊರಿಯದಿಂದ ತಾಳ್ಮೆಯ ಪ್ರತಿಕ್ರಿಯೆ

ಸಿಯೋಲ್, ಮೇ 25: ಮುಂದಿನ ತಿಂಗಳು ಸಿಂಗಾಪುರದಲ್ಲಿ ಅಮೆರಿಕ ಮತ್ತು ಉತ್ತರ ಕೊರಿಯಗಳ ನಡುವೆ ನಡೆಯಲು ನಿಗದಿಯಾಗಿದ್ದ ಶೃಂಗ ಸಮ್ಮೇಳನವನ್ನು ರದ್ದು ಪಡಿಸುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ನಿರ್ಧಾರಕ್ಕೆ ಉತ್ತರ ಕೊರಿಯ ಶುಕ್ರವಾರ ಪ್ರತಿಕ್ರಿಯೆ ನೀಡಿದೆ.

ತನ್ನ ಪರಮಾಣು ಅಸ್ತ್ರಗಳ ಕಾರ್ಯಕ್ರಮದಿಂದ ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸಲು ಉತ್ತರ ಕೊರಿಯವು ‘ಟ್ರಂಪ್ ಸೂತ್ರ’ವನ್ನು ಎದುರು ನೋಡುತ್ತಿದೆ ಎಂದು ಉತ್ತರ ಕೊರಿಯ ಹೇಳಿದೆ.

ಗುರುವಾರ ಉತ್ತರ ಕೊರಿಯ ನಾಯಕ ಕಿಮ್ ಜಾಂಗ್ ಉನ್‌ಗೆ ಪತ್ರವೊಂದನ್ನು ಬರೆದಿರುವ ಟ್ರಂಪ್, ಜೂನ್ 12ರಂದು ಸಿಂಗಾಪುರದಲ್ಲಿ ನಡೆಯಲು ನಿಗದಿಯಾಗಿರುವ ಉಭಯ ದೇಶಗಳ ನಾಯಕರ ನಡುವಿನ ಶೃಂಗ ಸಮ್ಮೇಳನದಿಂದ ತಾನು ಹಿಂದಕ್ಕೆ ಸರಿಯುತ್ತಿರುವುದಾಗಿ ಘೋಷಿಸಿರುವುದನ್ನು ಸ್ಮರಿಸಬಹುದಾಗಿದೆ.

‘‘ದುರದೃಷ್ಟವಶಾತ್, ನಿಮ್ಮ ಇತ್ತೀಚಿನ ಹೇಳಿಕೆಯಲ್ಲಿ ವ್ಯಕ್ತವಾದ ಆಕ್ರೋಶ ಮತ್ತು ಬಹಿರಂಗ ದ್ವೇಷದ ಹಿನ್ನೆಲೆಯಲ್ಲಿ, ಈ ಹಂತದಲ್ಲಿ ಈ ಶೃಂಗ ಸಮ್ಮೇಳನ ನಡೆಸುವುದು ಸರಿಯಲ್ಲ ಎಂದು ನಾನು ಭಾವಿಸಿದ್ದೇನೆ’’ ಎಂದು ಟ್ರಂಪ್ ಬರೆದಿದ್ದಾರೆ.

ಅಮೆರಿಕದ ಅಧಿಕಾರಿಗಳು ನೀಡಿರುವ ಸಂಘರ್ಷಯುತ ಹೇಳಿಕೆಗಳ ಹಿನ್ನೆಲೆಯಲ್ಲಿ, ತಾನು ಶೃಂಗ ಸಮ್ಮೇಳನದಿಂದ ಹಿಂದೆ ಸರಿಯುವುದಾಗಿ ಉತ್ತರ ಕೊರಿಯ ಪದೇ ಪದೇ ಹೇಳಿಕೆಗಳನ್ನು ನೀಡಿದ ಬಳಿಕ ಟ್ರಂಪ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಟ್ರಂಪ್ ಪತ್ರಕ್ಕೆ ಉತ್ತರವಾಗಿ ಶುಕ್ರವಾರ ಉತ್ತರ ಕೊರಿಯದ ಉಪ ವಿದೇಶ ಸಚಿವ ಕಿಮ್ ಕೈ ಗ್ವಾನ್ ಅಮೆರಿಕಕ್ಕೆ ಬರೆದ ಪತ್ರವು ಉದ್ವಿಗ್ನತೆಯನ್ನು ತಣಿಸುವ ಉದ್ದೇಶವನ್ನು ಹೊಂದಿತ್ತು ಹಾಗೂ ವಿಶೇಷವಾಗಿ ಟ್ರಂಪ್‌ರ ಪ್ರಯತ್ನಗಳನ್ನು ಶ್ಲಾಘಿಸುತ್ತಿತ್ತು.

‘‘ಉತ್ತರ ಕೊರಿಯದ ಜೊತೆ ಮಾತುಕತೆ ನಡೆಸುವ ನಿಟ್ಟಿನಲ್ಲಿ, ಈ ಹಿಂದೆ ಅಮೆರಿಕದ ಯಾವ ಅಧ್ಯಕ್ಷರೂ ತೆಗೆದುಕೊಳ್ಳದಂಥ ನಿರ್ಧಾರವನ್ನು ತೆಗೆದುಕೊಂಡಿರುವುದಕ್ಕಾಗಿ ಹಾಗೂ ಶೃಂಗ ಸಮ್ಮೇಳನವನ್ನು ಸಾಧ್ಯವಾಗಿಸಿರುವುದಕ್ಕಾಗಿ ಟ್ರಂಪ್‌ರ ಬಗ್ಗೆ ನಮಗೆ ಮೆಚ್ಚುಗೆಯಿದೆ’’ ಎಂದು ಕಿಮ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಪತ್ರವನ್ನು ಉತ್ತರ ಕೊರಿಯದ ಸರಕಾರಿ ಸುದ್ದಿ ಸಂಸ್ಥೆ ಪ್ರಸಾರ ಮಾಡಿದೆ.

ಯಾವಾಗಲೂ ಮಾತುಕತೆಗೆ ಸಿದ್ಧರಿದ್ದೇವೆ

‘‘ಶೃಂಗ ಸಮ್ಮೇಳನವನ್ನು ರದ್ದುಪಡಿಸುವ ಟ್ರಂಪ್‌ರ ಹಠಾತ್ ಮತ್ತು ಏಕಪಕ್ಷೀಯ ನಿರ್ಧಾರವು ನಮಗೆ ಅನಿರೀಕ್ಷಿತವಾಗಿದೆ ಹಾಗೂ ಇದಕ್ಕೆ ನಾವು ವಿಷಾದ ವ್ಯಕ್ತಪಡಿಸುತ್ತೇವೆ’’ ಎಂದು ಕಿಮ್ ಕೈ ಗ್ವಾನ್ ತನ್ನ ಪತ್ರದಲ್ಲಿ ಹೇಳಿದ್ದಾರೆ.

ಅಮೆರಿಕದೊಂದಿಗೆ ಹೊಂದಿರುವ ವಿವಾದಗಳನ್ನು ಯಾವ ವಿಧಾನದಲ್ಲಿ ಹಾಗೂ ಯಾವಾಗ ಬೇಕಾದರೂ ಪರಿಹರಿಸಿಕೊಳ್ಳಲು ಉತ್ತರ ಕೊರಿಯ ತಯಾರಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X